ಕೋರ್ಟ್ ಗೆ ಶರಣು; ಶಶಿಕಲಾ, ಇಳವರಸಿ ಪರಪ್ಪನ ಅಗ್ರಹಾರದ ಜೈಲುಪಾಲು


Team Udayavani, Feb 15, 2017, 5:25 PM IST

sasikalabars647_.jpg

ಬೆಂಗಳೂರು:ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಆದೇಶದ ಮೇರೆಗೆ ಬುಧವಾರ ಸಂಜೆ ಬೆಂಗಳೂರಿನ ಪರಪ್ಪನ ಅಗ್ರಹಾರ ಆವರಣದಲ್ಲಿರುವ ವಿಶೇಷ ಕೋರ್ಟ್ ನ್ಯಾಯಾಧೀಶರಾದ ಅಶ್ವಥ್ ನಾರಾಯಣ್ ಅವರ ಮುಂದೆ ವಿಕೆ ಶಶಿಕಲಾ ನಟರಾಜನ್, ಶಶಿಕಲಾ ಅಣ್ಣನ ಪತ್ನಿ ಇ.ಇಳವರಸಿ ಶರಣಾಗಿದ್ದಾರೆ. ಕೋರ್ಟ್ ನಿಯಮಗಳು ಮುಗಿದಿದ್ದು, ಶಶಿಕಲಾ ಹಾಗೂ ಇಳವರಸಿಯನ್ನು ಕೇಂದ್ರ ಕಾರಾಗೃಹಕ್ಕೆ ಜೈಲಿಗೆ ಕಳುಹಿಸಲಾಗಿದೆ.

ಬೆಳಗ್ಗೆ ಚೆನ್ನೈನ ಮರೀನಾ ಬೀಚ್ ನಲ್ಲಿರುವ ಜಯಲಲಿತಾ ಅವರ ಸಮಾಧಿಗೆ ನಮಸ್ಕರಿಸಿ ಜಯಾ ಅವರು ಬಳಸುತ್ತಿದ್ದ ಕಾರಿನಲ್ಲಿ ಬೆಂಗಳೂರಿಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಜಯಾ ಸಮಾಧಿ ಮೇಲೆ ಶಪಥಗೈದಿರುವ ವಿಡಿಯೋ ತಮಿಳುನಾಡಿನಲ್ಲಿ ವೈರಲ್ ಆಗಿದೆ. ಪರಪ್ಪನ ಅಗ್ರಹಾರದ ಆವರಣದಲ್ಲಿರುವ ವಿಶೇಷ ಕೋರ್ಟ್ ನ್ಯಾಯಾಧೀಶರ ಮುಂದೆ ಶಶಿಕಲಾ, ಇಳವರಸಿ ಶರಣಾಗಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಶಶಿಕಲಾ ಸೇರಿದಂತೆ ಮೂವರಿಗೂ 4 ವರ್ಷ ಜೈಲುಶಿಕ್ಷೆ ಹಾಗೂ ತಲಾ 10 ಕೋಟಿ ರೂಪಾಯಿ ದಂಡ ವಿಧಿಸಿತ್ತು.  ಬೆಂಗಳೂರು ಕೋರ್ಟ್ ಗೆ ಶರಣಾಗಲು ನಾಲ್ಕು ವಾರಗಳ ಕಾಲಾವಕಾಶ ನೀಡಬೇಕೆಂದು ವಿಕೆ ಶಶಿಕಲಾ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿ, ಇಂದೇ ಕೋರ್ಟ್ ಗೆ ಶರಣಾಗುವಂತೆ ಸೂಚಿಸಿತ್ತು.

ಪರಪ್ಪನ ಅಗ್ರಹಾರದ ಬಳಿ ದಾಂಧಲೆ;

ಪರಪ್ಪನ ಅಗ್ರಹಾರದ ಬಳಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದ್ದು, ಶಶಿಕಲಾ ಬೆಂಬಲಿಗರಿಗೆ ಸೇರಿದ  5 ಸ್ಕಾರ್ಪಿಯೋ, 1 ಇನ್ನೋವಾ ಕಾರುಗಳ ಮೇಲೆ ಕಲ್ಲುತೂರಾಟ ನಡೆಸಿರುವ ಘಟನೆ ನಡೆದಿದೆ. ಜಯಲಲಿತಾ ಅವರ ಅಭಿಮಾನಿಗಳು ಶಶಿಕಲಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಈ ಕೃತ್ಯ ಎಸಗಿದ್ದಾರೆ ಎಂದು ಮಾಧ್ಯಮದ ವರದಿಗಳು ತಿಳಿಸಿವೆ. ಗುಂಪನ್ನು ಚದುರಿಸಲು ಪೊಲೀಸ್ ಲಾಠಿಪ್ರಹಾರ ನಡೆಸಿದ್ದಾರೆ.

ಜಯಾಗೆ ಶಶಿಕಲಾಳಿಂದ ಮೋಸ ಮಾಡಿದ್ದಾಳೆ ಎಂದು ಆರೋಪಿಸಿರುವ ಅಭಿಮಾನಿಗಳು ಕಾರುಗಳ ಮೇಲೆ ಕಲ್ಲುತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 420 ಶಶಿಕಲಾ ಎಂದು ಜಯಾ ಬೆಂಬಲಿಗರು ಘೋಷಣೆ ಕೂಗಿದರು.

ಮನೆ ಊಟಕ್ಕೆ ಅವಕಾಶ ಕಲ್ಪಿಸಲು ಜಡ್ಜ್ ನಕಾರ:
ನನಗೆ ಶುಗರ್ ಇದೆ, ಹಾಗಾಗಿ ಜೈಲಿನಲ್ಲಿ ಮನೆ ಊಟಕ್ಕೆ ಅವಕಾಶ ಕಲ್ಪಿಸಿಕೊಡಬೇಕೆಂದು ಶಶಿಕಲಾ ನ್ಯಾಯಾಧೀಶರಲ್ಲಿ ಮನವಿ ಮಾಡಿಕೊಂಡಿದ್ದರು. ಆದರೆ ಮನೆ ಊಟಕ್ಕೆ ಅವಕಾಶ ಕೊಡಲು ಸಾಧ್ಯವಿಲ್ಲ ಎಂದು ಹೇಳಿದರು.

ಜಡ್ಜ್ ಮುಂದೆ ವಿಎನ್ ಸುಧಾಕರನ್ ಶರಣು:

ಶಶಿಕಲಾ, ಇಳವರಸಿ ಬಳಿಕ ವಿಎನ್ ಸುಧಾಕರನ್ ವಿಶೇಷ ಕೋರ್ಟ್ ನ್ಯಾ.ಅಶ್ವತ್ಥ್ ನಾರಾಯಣ್ ಮುಂದೆ ಶರಣಾಗಿದ್ದು, ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ, ಜೈಲಿಗೆ ಕಳುಹಿಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.