“ಪಕ್ಷದಲ್ಲಿ ಶಶಿಕಲಾಗೆ ಸ್ಥಾನವಿಲ್ಲ’; ರಾಜಕೀಯ ಊಹಾಪೋಹಗಳಿಗೆ ಎಐಎಡಿಎಂಕೆ ಸ್ಪಷ್ಟನೆ
ಜಯ ಸಮಾಧಿಗೆ ಶಶಿಕಲಾ ಭೇಟಿ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ
Team Udayavani, Oct 17, 2021, 6:12 AM IST
ಚೆನ್ನೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಸಮಾಧಿಗೆ ಶನಿವಾರ ಭೇಟಿ ನೀಡಿದ ಆಪ್ತ ಗೆಳತಿ ವಿ.ಕೆ. ಶಶಿಕಲಾ, ಜಯಾರಿಗೆ ಪುಷ್ಪನಮನ ಸಲ್ಲಿಸಿ, ಗಮನ ಸೆಳೆದಿದ್ದಾರೆ.
ಅ. 17ರಂದು ನಡೆಯಲಿರುವ ಎಐಎಡಿಎಂಕೆ ಸಂಸ್ಥಾಪನೆಯ ಸುವರ್ಣ ವರ್ಷಾಚರಣೆ ಹಿನ್ನೆಲೆಯಲ್ಲಿ, ಶನಿವಾರ ಚೆನ್ನೈನ ಮರೀನಾ ಬೀಚ್ಗೆ ತೆರಳಿದ ಶಶಿಕಲಾ, ಅಲ್ಲಿ ಪಕ್ಷದ ಸಂಸ್ಥಾಪಕರಾದ ಎಂ.ಜಿ. ರಾಮಚಂದ್ರನ್, ನಾಯಕ ಸಿಎನ್ ಅಣ್ಣಾದುರೈ ಹಾಗೂ ಜಯಲಲಿತಾ ಅವರ ಸಮಾಧಿಗಳಿಗೆ ಪುಷ್ಪನಮನ ಸಲ್ಲಿಸಿದ್ದಾರೆ.
ಅವರ ಈ ನಡೆ, ರಾಜಕೀಯ ಊಹಾಪೋಹಗಳಿಗೆ ನಾಂದಿ ಹಾಡಿದೆ. ಇದೇ ಮಾರ್ಚ್ನಲ್ಲಿ ರಾಜಕೀಯ ನಿವೃತ್ತಿ ಪಡೆದಿದ್ದ ಅವರು, ಈಗ ಜಯಾ ಸಮಾಧಿಗೆ ಭೇಟಿ ನೀಡುವ ಮೂಲಕ ಸಕ್ರಿಯ ರಾಜಕಾರಣಕ್ಕೆ ಮರಳುತ್ತಾರೆಯೇ ಎಂಬ ಪ್ರಶ್ನೆಗಳು ಎದ್ದಿವೆ.
ಇದನ್ನೂ ಓದಿ:ಸಮ್ಮಿಶ್ರ ಸರ್ಕಾರ ರಚಿಸಿದರೆ ಪುಣ್ಯಾತ್ಮ ಎಚ್ಡಿಕೆ ಉಳಿಸಿಕೊಳ್ಳಲಿಲ್ಲ: ಸಿದ್ದರಾಮಯ್ಯ
ಇದಕ್ಕೆ ಪ್ರತಿಕ್ರಿಯಿಸಿರುವ ಎಐಎಡಿಎಂಕೆ, “ಕಣ್ಣೀರು ಹಾಕಿದ್ದಕ್ಕಾಗಿ ಶಶಿಕಲಾರಿಗೆ ಆಸ್ಕರ್ ಪ್ರಶಸ್ತಿ ಕೊಡಬೇಕು. ಅವರಿಗೆ, ಪಕ್ಷಕ್ಕೆ ಮರುಸೇರ್ಪಡೆಯಾಗುವ ಇರಾದೆ ಇರಬಹುದು, ಆದರೆ, ನಮ್ಮ ಪಕ್ಷದಲ್ಲಿ ಅವರಿಗೆ ಸ್ಥಾನವಿಲ್ಲ’ ಎಂದು ಖಡಾಖಂಡಿತವಾಗಿ ಹೇಳಿದೆ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
Congress ಪಡೆದ ಬಾಂಡ್ ಸುಲಿಗೆ ಅಲ್ಲವೇ: ಅಮಿತ್ ಶಾ ಪ್ರಶ್ನೆ
250 km per hour; ಶೀಘ್ರದಲ್ಲೇ ಬುಲೆಟ್ ರೈಲಿನಲ್ಲೂ ಆತ್ಮನಿರ್ಭರತೆ!
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?