ಉದ್ಧವ್ ಠಾಕ್ರೆ ನಿವಾಸ ಮಾತೋಶ್ರೀ ಜಲಾವೃತ; ಶಿವಸೇನೆಗೆ ತೀವ್ರ ಮುಜುಗರ
Team Udayavani, Jul 2, 2019, 5:44 PM IST
ಮುಂಬಯಿ : ಕಳೆದ ಎರಡು ದಶಕಗಳಿಂದ ಮುಂಬಯಿ ಮಹಾ ನಗರ ಪಾಲಿಕೆ ಆಡಳಿತೆಯನ್ನು ತನ್ನ ಕೈಯಲ್ಲಿ ಹೊಂದಿರುವ ಶಿವಸೇನೆಗೆ, ಪಕ್ಷದ ಅಧ್ಯಕ್ಷ ಉದ್ಧವ್ ಠಾಕ್ರೆ ನಿವಾಸ ಮಾತೋಶ್ರೀ, ನಗರದಲ್ಲಿ ಸುರಿಯುತ್ತಿರುವ ಮಹಾ ಮಳೆಯಿಂದ ಜಲಾವೃತವಾಗಿರುವುದು ತೀವ್ರ ಮುಜುಗರ ಉಂಟುಮಾಡಿದೆ.
ನಿನ್ನೆ ರಾತ್ರಿಯಿಂದೀಚೆಗೆ ಸುರಿಯುತ್ತಿರುವ ಭಾರೀ ಮಳೆಗೆ ಮುಂಬಯಿ ಮಹಾ ನಗರಿ ಬಹುತೇಕ ಕೃತಕ ನೆರೆಯಲ್ಲಿ ಮುಳುಗಿದ್ದು ‘ರಾಜ್ಯದಲ್ಲಿನ ಆಳುವ ಬಿಜೆಪಿ ಮತ್ತು ಶಿವಸೇನೆಯ ಮೈತ್ರಿ ಸರಕಾರದ ಭ್ರಷ್ಟಾಚಾರದ ಫಲವೇ ಇದಾಗಿದೆ’ ಎಂದು ವಿರೋಧ ಪಕ್ಷಗಳು, ವಿಶೇಷವಾಗಿ ಕಾಂಗ್ರೆಸ್ ಪಕ್ಷ, ಆರೋಪಿಸಿವೆ.
ಮುಂಬಯಿ ಹೊರ ವಲಯದ ಬಾಂದ್ರಾದ ಕಾಲಾನಗರ ಕಾಲನಿಯಲ್ಲಿರುವ ಉದ್ಧವ್ ಠಾಕ್ರೆ ಅವರ ಮಾತೋಶ್ರೀ ನಿವಾಸದ ಹೊರ ಭಾಗ ಸಂಪೂರ್ಣವಾಗಿ ಜಲಾವೃತವಾಗಿದೆ. ಇಲ್ಲಿ ಮೊಣಕಾಲು ಮಟ್ಟದ ವರೆಗೂ ನೀರು ತುಂಬಿರುವುದು ಜನ ಮತ್ತು ವಾಹನಗಳಿಗೆ ಭಾರೀ ತೊಂದರೆಯಾಗಿದೆ.
ಮುಂಬಯಿ ಪೂರ್ವ ಮಲಾಡ್ ನಲ್ಲಿ ಮಳೆ ಸಂಬಂಧಿ ದುರಂತಗಳಲ್ಲಿ ಈ ವರೆಗೆ 19 ಮಂದಿ ಮೃತಪಟ್ಟಿದ್ದು ಅನೇಕರು ಗಾಯಗೊಂಡಿದ್ದಾರೆ. ನೆರೆಯ ಪುಣೆಯಲ್ಲಿ ಕೂಡ ಹಲವರು ಅಸುನೀಗಿದ್ದಾರೆ.
ಬೃಹನ್ ಮುಂಬಯಿ ಮುನಿಸಿಪಲ್ ಕಾರ್ಪೊರೇಶನ್ (ಬಿಎಂಸಿ) ಆಡಲಿತೆಯು ಕಳೆದ ಎರಡು ದಶಕಗಳಿಂದ ಶಿವಸೇನೆಯ ಕೈಯಲ್ಲಿದ್ದು ಇದು ದೇಶದಲ್ಲೇ ಅತ್ಯಂತ ಸಿರಿವಂತ ನಗರಾಡಳಿತೆಯಾಗಿದೆ.
ಠಾಕ್ರೆ ನಿವಾಸಕ್ಕೆ ಸಮೀಪದ ಕುರ್ಲಾ ಪ್ರದೇಶದಲ್ಲಿನ ತನ್ನ ನಿವಾಸ ಕೂಡ ಮಳೆಯಲ್ಲಿ ಮುಳುಗಿರುವ ಕಾರಣ ಎನ್ಸಿಪಿ ನಾಯಕ ನವಾಬ್ ಮಲಿಕ್ ಅವರು ಸೇನೆಯನ್ನು “ಮಳೆ-ಭ್ರಷ್ಟಾಚಾರ’ಕ್ಕಾಗಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ