Delhi ಬಂಧಿತ ಆಪ್ ನಾಯಕ ಸತ್ಯೇಂದ್ರ ಜೈನ್ ಆಸ್ಪತ್ರೆಗೆ
ದಬ್ಬಾಳಿಕೆಗಾರರನ್ನು ದೇವರು ಸಹ ಕ್ಷಮಿಸುವುದಿಲ್ಲ ಎಂದ ಕೇಜ್ರಿವಾಲ್
Team Udayavani, May 22, 2023, 4:10 PM IST
ಹೊಸದಿಲ್ಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ದೆಹಲಿಯ ಮಾಜಿ ಸಚಿವ ಮತ್ತು ಆಮ್ ಆದ್ಮಿ ಪಕ್ಷದ ನಾಯಕ ಸತ್ಯೇಂದ್ರ ಜೈನ್ ಅವರನ್ನು ಬೆನ್ನುಮೂಳೆಯ ಸಮಸ್ಯೆಗಾಗಿ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಸೋಮವಾರ ವೈದ್ಯರು ಪರೀಕ್ಷಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶನಿವಾರ ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು ಆದರೆ ಅವರು ಎರಡನೇ ಅಭಿಪ್ರಾಯವನ್ನು ಬಯಸಿದ್ದರಿಂದ ಅವರನ್ನು ಸಫ್ದರ್ಜಂಗ್ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಜೈಲಿನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಮಾಜಿ ಕ್ಯಾಬಿನೆಟ್ ಸಹೋದ್ಯೋಗಿ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿ ”ಜೈನ್ ಅವರ ಉತ್ತಮ ಆರೋಗ್ಯಕ್ಕಾಗಿ ನಾನು ದೇವರನ್ನು ಪ್ರಾರ್ಥಿಸುತ್ತೇನೆ, ದೆಹಲಿಯ ಜನರು ಬಿಜೆಪಿಯ ದುರಹಂಕಾರ ಮತ್ತು ದೌರ್ಜನ್ಯವನ್ನು ನೋಡುತ್ತಿದ್ದಾರೆ, ಈ ದಬ್ಬಾಳಿಕೆಗಾರರನ್ನು ದೇವರು ಸಹ ಕ್ಷಮಿಸುವುದಿಲ್ಲ, ಈ ಹೋರಾಟದಲ್ಲಿ, ಜನರು ನಮ್ಮೊಂದಿಗಿದ್ದಾರೆ ಮತ್ತು ದೇವರು ನಮ್ಮ ಜತೆಗಿದ್ದಾನೆ. ನಾವು ಭಗತ್ ಸಿಂಗ್ ಅವರ ಅನುಯಾಯಿಗಳು. ದಬ್ಬಾಳಿಕೆ, ಅನ್ಯಾಯ ಮತ್ತು ಸರ್ವಾಧಿಕಾರದ ವಿರುದ್ಧ ನಮ್ಮ ಹೋರಾಟ ಮುಂದುವರಿಯುತ್ತದೆ”ಎಂದು ಟ್ವೀಟ್ ಮಾಡಿದ್ದಾರೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಜೈನ್ ಅವರನ್ನು ಬಂಧಿಸಿದ ನಂತರ ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್