ಆಂಧ್ರಪ್ರದೇಶದ ಕರ್ನೂಲಿನಲ್ಲಿ ಸದ್ಗುರು ಮಣ್ಣು ಉಳಿಸಿ’ ಅಭಿಯಾನ
Team Udayavani, Jun 17, 2022, 8:33 PM IST
ವಿಶಾಖಪಟ್ಟಣ: 100 ದಿನಗಳ “ಮಣ್ಣು ಉಳಿಸಿ’ ಅಭಿಯಾನ ನಡೆಸುತ್ತಿರುವ ಸದ್ಗುರು ಜಗ್ಗಿ ವಾಸುದೇವ ಅವರು ಶುಕ್ರವಾರ ಆಂಧ್ರಪ್ರದೇಶದ ಕರ್ನೂಲಿನಲ್ಲಿ ಕಾರ್ಯಕ್ರಮ ಭಾಗವಹಿಸಿದರು.
ನಟ ಅದಿವಿ ಶೇಷ್ ಅವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಈ ವೇಳೆ ಆಂಧ್ರಪ್ರದೇಶ ಸರ್ಕಾರವು ಮಣ್ಣು ಉಳಿಸುವ ನಿಟ್ಟಿನಲ್ಲಿ ಸದ್ಗುರು ಅವರೊಂದಿಗೆ ಒಡಂಬಡಿಕೆ ಮಾಡಿಕೊಂಡಿತು. ಈ ಒಡಂಬಡಿಕೆಗೆ ಸಹಿ ಹಾಕಿದ ಭಾರತದ 7ನೇ ರಾಜ್ಯವಿದು.
ರಾಜ್ಯದಲ್ಲಿ ಮಣ್ಣಿನ ಅನುಸರಿಸಬಹುದಾದ ಕಾರ್ಯನೀತಿಯಿರುವ ಕೈಪಿಡಿಯನ್ನು ಸರ್ಕಾರಕ್ಕೆ ಹಸ್ತಾಂತರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಸದ್ಗುರು ಅವರು, “ಪ್ರಪಂಚ ಮಣ್ಣಿನ ಬಗ್ಗೆ ಮಾತಾಡಬೇಕು.
ಕಳೆದ 90 ದಿನಗಳಲ್ಲಿ 300 ಕೋಟಿ ಜನರು ಮಣ್ಣಿನ ಬಗ್ಗೆ ಮಾತಾಡಿದ್ದಾರೆ’ ಎಂದರು. ರಾಜ್ಯದ ಕೃಷಿ ಸಚಿವ ಗೋವರ್ಧನ್ ರೆಡ್ಡಿ ಸೇರಿ ಅನೇಕರು ಕಾರ್ಯಕ್ರಮದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tapi River; ಸಲ್ಮಾನ್ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ