ಸಾವಿತ್ರಿ ಬಾಯಿ ಫುಲೆ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ; ಬಿಜೆಪಿ, ಆರ್ ಎಸ್ ಎಸ್ ವಿರುದ್ಧ ಕಿಡಿ
ಭಾರತೀಯ ಜನತಾ ಪಕ್ಷಕ್ಕೂ, ಕಾಂಗ್ರೆಸ್ ಗೂ ಯಾವುದೇ ವ್ಯತ್ಯಾಸವಿಲ್ಲ
Team Udayavani, Dec 26, 2019, 5:06 PM IST
ನವದೆಹಲಿ: ತಮ್ಮ ಕೂಗು ಕಾಂಗ್ರೆಸ್ ಪಕ್ಷ ಕೇಳಿಸಿಕೊಳ್ಳುತ್ತಿಲ್ಲ ಎಂದು ದೂರಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದ ಬಿಜೆಪಿ ಮಾಜಿ ಶಾಸಕಿ ಸಾವಿತ್ರಿ ಬಾಯಿ ಫುಲೆ ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ವರ್ಷದ ಆರಂಭದಲ್ಲಿ ಬಿಜೆಪಿ ಮಾಜಿ ಶಾಸಕಿ ಸಾವಿತ್ರಿ ಬಾಯಿ ಫುಲೆ ಕಾಂಗ್ರೆಸ್ ಪಕ್ಷ ಸೇರಿದ್ದರು.
ನನ್ನ ಧ್ವನಿಯನ್ನು ಕಾಂಗ್ರೆಸ್ ಪಕ್ಷ ಕೇಳಿಸಿಕೊಳ್ಳುತ್ತಿಲ್ಲ. ಹೀಗಾಗಿ ನಾನು ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ನಾನು ಸ್ವಂತ ಪಕ್ಷ ಸ್ಥಾಪಿಸುವುದಾಗಿ ಫುಲೆ ಈ ಸಂದರ್ಭದಲ್ಲಿ ತಿಳಿಸಿದರು.
ಭಾರತೀಯ ಜನತಾ ಪಕ್ಷಕ್ಕೂ, ಕಾಂಗ್ರೆಸ್ ಗೂ ಯಾವುದೇ ವ್ಯತ್ಯಾಸವಿಲ್ಲ. ಸಂವಿಧಾನ ವಿರೋಧಿ ಹಾಗೂ ಇವಿಎಂ ಬಳಕೆ ವಿರುದ್ಧ ಪ್ರತಿಭಟನೆ ನಡೆಸಬೇಕೆಂದು ನಾನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಬಳಿ ಮನವಿ ಮಾಡಿಕೊಂಡಿದ್ದೆ. ಆದರೆ ಇವಿಎಂ ಐಡಿಯಾ ತಮ್ಮ ಸರ್ಕಾರ ಜಾರಿಗೆ ತಂದಿದ್ದು, ಅದರ ವಿರುದ್ಧ ನಾನು ಪ್ರತಿಭಟನೆ ನಡೆಸುವುದಿಲ್ಲ ಎಂದು ಹೇಳಿರುವುದಾಗಿ ಫುಲೆ ತಿಳಿಸಿದ್ದಾರೆ.
ತಾನು “ಬಹುಜನ ಹಿತಾಯ, ಬಹುಜನ ಸುಖಾಯ” ಎಂಬ ಪಕ್ಷವನ್ನು ಸ್ಥಾಪಿಸುವುದಾಗಿ ತಿಳಿಸಿದರು. ಅಲ್ಲದೇ ಸಮಾಜದಲ್ಲಿ ಅಸಮಾನತೆಯ ಹುಟ್ಟುಹಾಕುತ್ತಿರುವ ಆರ್ ಎಸ್ ಎಸ್ ವಿರುದ್ಧವೂ ಆರೋಪಿಸಿದರು. ನಮ್ಮ ದೇಶದ ಸಂವಿಧಾನ ಮತ್ತು ಮೀಸಲಾತಿ ಅಪಾಯದಲ್ಲಿದೆ. ಇವಿಎಂ ಬಳಕೆ ಬಗ್ಗೆ ನಾನು ಯಾವಾಗಲೂ ಪ್ರತಿಭಟಿಸುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ