Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್ ಬಿಜೆಪಿಗೆ
10 ವರ್ಷ ಹಿಸಾರ್ ಶಾಸಕಿಯಾಗಿದ್ದ ಸಾವಿತ್ರಿಯಿಂದ ಕಾಂಗ್ರೆಸ್ಗೆ ವಿದಾಯ; ಇತ್ತೀಚೆಗಷ್ಟೇ ಬಿಜೆಪಿ ಸೇರಿದ ಸಾವಿತ್ರಿ ಪುತ್ರ ನವೀನ್ ಜಿಂದಾಲ್ಗೆ ಟಿಕೆಟ್
Team Udayavani, Mar 29, 2024, 2:27 PM IST
ಚಂಡೀಗಢ: ಉದ್ಯಮಿ ನವೀನ್ ಜಿಂದಾಲ್ ಅವರು ಕಾಂಗ್ರೆಸ್ ತೊರೆದು, ಬಿಜೆಪಿ ಸೇರ್ಪಡೆಯಾದ ಬೆನ್ನಲ್ಲೇ ಅವರ ತಾಯಿ, ಹರಿಯಾಣದ ಮಾಜಿ ಸಚಿವೆ ಸಾವಿತ್ರಿ ಜಿಂದಾಲ್ ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ, ಕಮಲ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಗುರುವಾರ ಹರಿಯಾಣದ ಹಿಸಾರ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಮಂತ್ರಿ ನಯಾಬ್ ಸಿಂಗ್ ಸೈನಿ, ಮಾಜಿ ಸಿಎಂ ಮನೋಹರ್ ಲಾಲ್ ಖಟ್ಟರ್ ಮತ್ತು ಹಿರಿಯ ಬಿಜೆಪಿ ನಾಯಕರ ಸಮ್ಮುಖದಲ್ಲಿ 84 ವರ್ಷದ ಸಾವಿತ್ರಿ ಜಿಂದಾಲ್ ಹಾಗೂ ಅವರ ಪುತ್ರಿ ಸೀಮಾ ಬಿಜೆಪಿ ಸೇರ್ಪಡೆಯಾದರು.
“10 ವರ್ಷಗಳ ಕಾಲ ಶಾಸಕಿಯಾಗಿ ಹಿಸಾರ್ ಕ್ಷೇತ್ರವನ್ನು ಪ್ರತಿನಿಧಿಸಿದೆ. ಸಚಿವೆಯಾಗಿ ಸ್ವಾರ್ಥರಹಿತ ವಾಗಿ ಹರಿಯಾಣದ ಸೇವೆ ಮಾಡಿದೆ. ಹಿಸಾರ್ನ ಜನರು ನನ್ನ ಕುಟುಂಬ. ಕುಟುಂಬದ ಸಲಹೆ ಮೇರೆಗೆ ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ’ ಎಂದು ಸಾವಿತ್ರಿ ಜಿಂದಾಲ್ ಟ್ವೀಟ್ ಮಾಡಿದ್ದಾರೆ. 2014ರಲ್ಲಿ ಸಾವಿತ್ರಿ ಅವರು ಹಿಸಾರ್ನಲ್ಲಿ ಬಿಜೆ ಪಿಯ ಕಮಲ್ ಗುಪ್ತಾ ವಿರುದ್ಧ ಸೋಲುಂಡಿದ್ದರು.
ಸಾವಿತ್ರಿ ಅವರ ಪುತ್ರ ನವೀನ್ ಜಿಂದಾಲ್ ಅವರು 2004ರಿಂದ 2014ರವರೆಗೆ ಕಾಂಗ್ರೆಸ್ ಸಂಸದರಾಗಿ ಕುರುಕ್ಷೇತ್ರ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಕಳೆದ ರವಿವಾರ ಕಾಂಗ್ರೆಸ್ ತೊರೆದು ಬಿಜೆ ಪಿಗೆ ಸೇರ್ಪಡೆ ಯಾದ ಇವ ರಿಗೆ ಕಮಲ ಪಕ್ಷ ಕುರುಕ್ಷೇತ್ರದ ಟಿಕೆಟ್ ಘೋಷಿಸಿದೆ.
ಯಾರಿವರು ಸಾವಿತ್ರಿ ಜಿಂದಾಲ್?
- ಫೋರ್ಬ್ಸ್ ಪಟ್ಟಿ ಪ್ರಕಾರ ಸಾವಿತ್ರಿ ಜಿಂದಾಲ್ ಅವರು ಭಾರತದ ಅತ್ಯಂತ ಶ್ರೀಮಂತ ಮಹಿಳೆ
- ಇವರು ಕೈಗಾರಿಕೋದ್ಯಮಿ, ಮಾಜಿ ಸಚಿ ವ ದಿವಂಗ ತ ಒ.ಪಿ.ಜಿಂದಾಲ್ ಅವರ ಪತ್ನಿ
- ಸಾವಿತ್ರಿ ಅವರ ಒಟ್ಟಾರೆ ಆಸ್ತಿ ಮೌಲ್ಯ 2.42 ಲಕ್ಷ ಕೋಟಿ ರೂ.ಗಳು
- ಹರಿಯಾಣದಲ್ಲಿ ಭೂಪಿಂದರ್ ಸಿಂಗ್ ಹೂಡಾ ನೇತೃತ್ವದ ಕಾಂಗ್ರೆಸ್ ಸರಕಾರದಲ್ಲಿ ಸಚಿವರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ