ಒಂದಿಂಚೂ ಭೂಮಿ ಬಿಟ್ಟುಕೊಡಲ್ಲ, ರಾಜೀವ್ ಗಾಂಧಿ ಫೌಂಡೇಶನ್ ಚೀನಾದಿಂದ ಹಣ ಪಡೆದಿತ್ತು: ಶಾ
ಪ್ರಧಾನಿ ಮೋದಿ ಇರುವವರೆಗೆ ಭಾರತದ ಒಂದಿಂಚೂ ಭೂಮಿಯನ್ನು ವಶಪಡಿಸಿಕೊಳ್ಳಲು ಸಾಧ್ಯವಿಲ್ಲ
Team Udayavani, Dec 13, 2022, 1:25 PM IST
ನವದೆಹಲಿ: ಭಾರತದ ಒಂದಿಂಚು ಭೂಮಿಯನ್ನು ಕಬಳಿಸಲು ಚೀನಾಕ್ಕೆ ಅವಕಾಶ ಮಾಡಿಕೊಡುವುದಿಲ್ಲ. ಅರುಣಾಚಲ ಪ್ರದೇಶದ ತವಾಂಗ್ ಪ್ರದೇಶದಲ್ಲಿ ಚೀನಾ ಸೈನಿಕರ ಜತೆಗಿನ ಮುಖಾಮುಖಿಯಲ್ಲಿ ಭಾರತೀಯ ಸೇನಾ ಪಡೆ ತಕ್ಕ ಪ್ರತ್ಯುತ್ತರದೊಂದಿಗೆ ಹಿಮ್ಮೆಟ್ಟಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ (ಡಿಸೆಂಬರ್ 13) ತಿಳಿಸಿದ್ದಾರೆ.
ಇದನ್ನೂ ಓದಿ:ಶಿಕ್ಷಾರ್ಹ ಅಪರಾಧ… “ಈ” ದೇಶದಲ್ಲಿ ಸಮೋಸಾ ತಯಾರಿಸುವುದು, ತಿನ್ನುವುದು ನಿಷೇಧ!
“ಚೀನಾಕ್ಕೆ ಭಾರತದ ಒಂದಿಂಚೂ ಭೂಮಿಯನ್ನು ಕಬಳಿಸಲು ಸಾಧ್ಯವಾಗಿಲ್ಲ. ತವಾಂಗ್ ಪ್ರದೇಶದಲ್ಲಿ ಭಾರತೀಯ ಸೈನಿಕರು ಧೈರ್ಯ ಮತ್ತು ಶೌರ್ಯದೊಂದಿಗೆ ತಕ್ಷಣವೇ ಚೀನಾ ಪಡೆಗೆ ತಕ್ಕ ಉತ್ತರ ನೀಡಿ ಹಿಮ್ಮೆಟ್ಟಿಸಿದೆ. ಪ್ರಧಾನಿ ಮೋದಿ ಇರುವವರೆಗೆ ಭಾರತದ ಒಂದಿಂಚೂ ಭೂಮಿಯನ್ನು ವಶಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸಂಸತ್ ಹೊರ ಆವರಣದಲ್ಲಿ ಶಾ ಸುದ್ದಿಗಾರರಗೊಂದಿಗೆ ಮಾತನಾಡುತ್ತ ಮಾಹಿತಿ ನೀಡಿದ್ದಾರೆ.
ಚೀನಾದಿಂದ ರಾಜೀವ್ ಗಾಂಧಿ ಫೌಂಡೇಶನ್ ಹಣ ಪಡೆದಿತ್ತು:
ಸಂಸತ್ ಕಲಾಪದಲ್ಲಿ ತವಾಂಗ್ ಕುರಿತಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಉತ್ತರ ನೀಡುವ ವೇಳೆ ಕಾಂಗ್ರೆಸ್ ಸಂಸದರು ಕೋಲಾಹಲ ಎಬ್ಬಿಸುತ್ತಾರೆ. ಒಂದು ವೇಳೆ ಅವರು ಮಾತನಾಡಲು ಅವಕಾಶ ನೀಡಿದರೆ ನಾನು ಉತ್ತರ ನೀಡಲು ಸಿದ್ದನಿದ್ದೇನೆ ಎಂದು ಅಮಿತ್ ಶಾ ತಿರುಗೇಟು ನೀಡಿದ್ದಾರೆ.
2005-2006 ಮತ್ತು 2006-2007ನೇ ಸಾಲಿನಲ್ಲಿ ರಾಜೀವ್ ಗಾಂಧಿ ಫೌಂಡೇಶನ್ ಚೀನಾ ರಾಯಭಾರಿ ಕಚೇರಿಯಿಂದ 1.35 ಕೋಟಿ ರೂಪಾಯಿ ಅನುದಾನ ಪಡೆದಿತ್ತು. ಆದರೆ ಅದು ಎಫ್ ಸಿಆರ್ ಎ ನಿಯಮದ ಉಲ್ಲಂಘನೆ ಹಿನ್ನೆಲೆಯಲ್ಲಿ ಗೃಹ ಸಚಿವಾಲಯ ರಿಜಿಸ್ಟ್ರೇಶನ್ ಅನ್ನು ರದ್ದುಪಡಿಸಿದೆ ಎಂದು ಶಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್