ರೈತರಿಗೂ ಎಸ್ಬಿಐ ಕ್ರೆಡಿಟ್ ಕಾರ್ಡ್
Team Udayavani, Jan 31, 2018, 7:00 AM IST
ಕೋಲ್ಕತ್ತಾ: ದೇಶದ ಕೃಷಿಕ ಸಮುದಾಯದಲ್ಲೂ ಕ್ರೆಡಿಟ್ ಸಂಸ್ಕೃತಿಯನ್ನು ಪ್ರಚುರಪಡಿಸುವ ನಿಟ್ಟಿನಲ್ಲಿ ರೈತರಿಗೂ ಕ್ರೆಡಿಟ್ ಕಾರ್ಡ್ಗಳನ್ನು ವಿತರಿಸಲು ದೇಶದ ಅತಿದೊಡ್ಡ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಸ್ಟೇಟ್ಬ್ಯಾಂಕ್ ಆಫ್ ಇಂಡಿಯಾ(ಎಸ್ಬಿಐ) ಮುಂದಾಗಿದೆ. ತನ್ನ ಅಧೀನಸಂಸ್ಥೆಯಾದ ಎಸ್ಬಿಐ ಕಾರ್ಡ್ಸ್ ಆ್ಯಂಡ್ ಪೇಮೇಂಟ್ಸ್ ಸರ್ವೀಸ್ ಮೂಲಕ ರೈತರಿಗೆ ಕ್ರೆಡಿಟ್ ಕಾರ್ಡ್ಗಳನ್ನು ವಿತರಿಸಲಾಗುವುದು ಎಂದು ಎಸ್ಬಿಐ ಮುಖ್ಯಸ್ಥ ರಜನೀಶ್ ಕುಮಾರ್ ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರ ಡಿಜಿಟಲ್ ಇಂಡಿಯಾ ಕನಸಿಗೂ ಇದು ಪೂರಕವಾಗಿರಲಿದೆ.
ಕೋಲ್ಕತ್ತಾದಲ್ಲಿ ಮಂಗಳವಾರ ಪೂರ್ತಿ ಫಾರ್ಮ್ಕಾರ್ಟ್ ಮತ್ತು ಡೀಲರ್ ಬಂಧು ಆ್ಯಪ್ ಅನಾವರಣ ಸಮಾರಂಭ ದಲ್ಲಿ ಮಾತನಾಡಿರುವ ರಜನೀಶ್ ಕುಮಾರ್, “ಈಗಾಗಲೇ ಗುಜರಾತ್, ರಾಜಸ್ಥಾನ ಮತ್ತು ಮಧ್ಯಪ್ರದೇಶಗಳಲ್ಲಿ ಪ್ರಾಯೋಗಿಕವಾಗಿ ಈ ಯೋಜನೆ ಜಾರಿಯಲ್ಲಿದೆ. ಇದರ ಯಶಸ್ಸಿನ ಆಧಾರದಲ್ಲಿ ದೇಶಾದ್ಯಂತ ಈ ಯೋಜನೆ ಕೈಗೆತ್ತಿಕೊಳ್ಳಲಾಗುವುದು’ ಎಂದಿದ್ದಾರೆ.
40 ದಿನಗಳ ಕ್ರೆಡಿಟ್: ಎಸ್ಬಿಐ ಕ್ರೆಡಿಟ್ ಕಾರ್ಡ್ಗಳು ರೈತರಿಗೆ 40 ದಿನಗಳ ಸಾಲ ಪಡೆಯಲು ಅವಕಾಶ ಕಲ್ಪಿಸುತ್ತದೆ. ಬಡ್ಡಿ ದರ ಇತರೆ ಎಸ್ಬಿಐ ಕಾರ್ಡ್ಗಳಿಗೆ ವಿಧಿಸಲಾಗುವಷ್ಟೇ ಇರುತ್ತದೆ. ಆದರೆ, ಬಾಕಿ ಮೊತ್ತವನ್ನು ಪಾವತಿಸದೇ ಇದ್ದರೆ ವಿಧಿಸಲಾಗುವಂಥ ದಂಡದ ಮೊತ್ತ ಇಲ್ಲಿ ಕಡಿಮೆಯಿರುತ್ತದೆ. ಈ ಕಾರ್ಡ್ಗಳಲ್ಲಿ ನೀಡಲಾಗಿರುವ ಸಾಲದ ಮಿತಿಯ ಶೇ.20ರಷ್ಟನ್ನು ರೈತರು ಗೃಹೋಪಯೋಗಿ ವಸ್ತುಗಳ ಖರೀದಿಗೆ ಬಳಸಬಹುದು. ಉಳಿದ ಮೊತ್ತವನ್ನು ಕೃಷಿ ಸಂಬಂಧಿ ಉತ್ಪನ್ನಗಳ ಖರೀದಿಗಷ್ಟೇ ಬಳಸಬೇಕು ಎಂದಿದ್ದಾರೆ. ಇದೇ ವೇಳೆ, ಕೃಷಿ ಕ್ಷೇತ್ರದಲ್ಲೂ ಇ-ವಾಣಿಜ್ಯ ಚಟುವಟಿಕೆಗಳು ಹೆಚ್ಚಬೇಕು ಎಂದೂ ಅವರು ಹೇಳಿದ್ದಾರೆ.
ಕಿಸಾನ್ ಕ್ರೆಡಿಟ್ ಕಾರ್ಡ್ನಂತಲ್ಲ: ಈವರೆಗೆ ಸಣ್ಣ ರೈತರು ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಸಾಲ ಪಡೆಯುತ್ತಿ ದ್ದರು. ಆದರೆ, ಇದು ಬ್ಯಾಂಕ್ ಖಾತೆಗೆ ಲಿಂಕ್ ಆಗಿ ಇರುತ್ತಿತ್ತು. ಅಲ್ಲದೆ, ಖಾತೆದಾರರಿಗಷ್ಟೇ ನಗದು ಸಾಲದ ಸೌಲಭ್ಯ ನೀಡಲಾಗುತ್ತಿತ್ತು. ಆದರೆ, ಎಸ್ಬಿಐ ಕ್ರೆಡಿಟ್ ಕಾರ್ಡ್ನ ನಿಯಮಗಳು ಈ ರೀತಿ ಇರುವುದಿಲ್ಲ ಎಂದಿದ್ದಾರೆ ಕುಮಾರ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ