ಫೆಬ್ರವರಿ ಅಂತ್ಯದೊಳಗೆ ಲೋಕಪಾಲ ಹೆಸರು ಶಿಫಾರಸು: ಸುಪ್ರೀಂ ಗಡುವು
Team Udayavani, Jan 17, 2019, 9:48 AM IST
ಹೊಸದಿಲ್ಲಿ : ದೇಶದ ಪ್ರಪ್ರಥಮ ಲೋಕಪಾಲ ನೇಮಕಕ್ಕೆ ಫೆಬ್ರವರಿ ಅಂತ್ಯದೊಳಗೆ ಹೆಸರುಗಳನ್ನು ಸೂಚಿಸುವಂತೆ ಸುಪ್ರೀಂ ಕೋರ್ಟ್ ಇಂದು ಗುರುವಾರ ಶೋಧನಾ ಸಮಿತಿಗೆ ಗಡುವು ವಿಧಿಸಿದೆ.
ಸುಪ್ರೀಂ ಕೋರ್ಟಿನ ಮಾಜಿ ನ್ಯಾಯಮೂರ್ತಿಗಳಾದ ಜಸ್ಟಿಸ್ ರಂಜನ ಪ್ರಕಾಶ್ ದೇಸಾಯಿ ಅವರು ಶೋಧನಾ ಸಮಿತಿಯ ಅಧ್ಯಕ್ಷರಾಗಿದ್ದಾರೆ.
ಶೋಧನಾ ಸಮಿತಿಗೆ ತನ್ನ ಕೆಲಸ ಕಾರ್ಯಗಳನ್ನು ಮುಗಿಸಲು ಅವಶ್ಯವಿರುವ ಮೂಲ ಸೌಕರ್ಯ ಮತ್ತು ಮಾನವ ಸಂಪನ್ಮೂಲವನ್ನು ಒದಗಿಸುವಂತೆಯೂ ವರಿಷ್ಠ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಸುಪ್ರೀಂ ಪೀಠ ಕೇಂದ್ರ ಸರಕಾರಕ್ಕೆ ಆದೇಶಿಸಿದೆ.
ಜಸ್ಟಿಸ್ ಎಲ್ ಎನ್ ರಾವ್, ಜಸ್ಟಿಸ್ ಎಸ್ ಕೆ ಕೌಲ್ ಅವರನ್ನು ಕೂಡ ಒಳಗೊಂಡಿರುವ ಸುಪ್ರೀಂ ಪೀಠವು, ಮುಂಧಿನ ವಿಚಾರಣೆಯನ್ನು ಮಾರ್ಚ್ 7ಕ್ಕೆ ನಿಗದಿಸಿದೆ.
ಕೇಂದ್ರ ಸರಕಾರದ ಪರವಾಗಿ ಹಾಜರಿದ್ದ ಅಟಾರ್ನಿ ಜನರಲ್ ಕೆ ಕೆ ವೇಣುಗೋಪಾಲ್ ಅವರು ಶೋಧನಾ ಸಮಿತಿಗೆ ಕೆಲವೊಂದು ಸಮಸ್ಯೆಗಳಿವೆ; ಸರಿಯಾದ ಮೂಲ ಸೌಕರ್ಯ ಮತ್ತು ಮಾನವ ಸಂಪನ್ಮೂಲ ಇಲ್ಲದಿರುವುದರಿಂದ ಅದಕ್ಕೆ ಸಭೆ, ಚರ್ಚೆ ನಡೆಸುವುದಕ್ಕೆ ಅಸಾಧ್ಯವಾಗಿದೆ ಎಂದು ಹೇಳಿದರು. ಅಂತೆಯೇ ಸುಪ್ರೀಂ ಕೋರ್ಟ್ ಈ ಆವಶ್ಯಕತೆಗಳನ್ನು ಪೂರೈಸುವಂತೆ ಕೇಂದ್ರ ಸರಕಾರಕ್ಕೆ ಆದೇಶಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?