ಕೇಂದ್ರದಿಂದ ನ್ಯಾಯಾಂಗದಲ್ಲಿ ಹಸ್ತಕ್ಷೇಪ: ಸುಪ್ರೀಂ ಕೋರ್ಟ್‌ ಬಾರ್‌


Team Udayavani, Apr 26, 2018, 11:54 AM IST

Supreme Court2-700.jpg

ಹೊಸದಿಲ್ಲಿ : ಹಿರಿಯ ನ್ಯಾಯವಾದಿ ಇಂದು ಮಲ್ಹೋತ್ರ ಅವರನ್ನು ಸುಪ್ರೀಂ ಕೋರ್ಟ್‌ ನ್ಯಾಯಾಧೀಶೆಯಾಗಿ ಕೇಂದ್ರ ಸರಕಾರ ನೇಮಿಸಿದ ಒಂದು ದಿನದ ತರುವಾಯ, ಸುಪ್ರೀಂ ಕೋರ್ಟ್‌ ಬಾರ್‌ ಅಸೋಸಿಯೇಶನ್‌ ಕೇಂದ್ರದ ಈ ನಿರ್ಧಾರವನ್ನು ಸ್ವಾಗತಿಸಿತಾದರೂ ಉತ್ತರಾಖಂಡ ಹೈಕೋರ್ಟ್‌ ಚೀಫ್ ಜಸ್ಟಿಸ್‌ ಕೆ ಎಂ ಜೋಸೆಫ್ ಅವರ ಭಡ್ತಿ ಇನ್ನೂ ಬಾಕಿ ಇರುವಾಗ ಕೇಂದ್ರದ ಈ ಕ್ರಮವು ನ್ಯಾಯಾಂಗದ ಕಾರ್ಯದಲ್ಲಿ ನಡೆಸಿರುವ ಹಸ್ತಕ್ಷೇಪವಾಗಿದೆ ಎಂದು ಹೇಳಿದೆ.

“ಇಂದು ಮಲ್ಹೋತ್ರ ಅವರು ಒಬ್ಬ ಒಳ್ಳೆಯ ವಕೀಲೆ; ಆಕೆ ನ್ಯಾಯಾಧೀಶೆಯಾಗಿ ತನ್ನ ಸಾಮರ್ಥ್ಯವನ್ನು ಸಾಬೀತು ಪಡಿಸಲಿದ್ದಾರೆ. ಆದರೆ ಜಸ್ಟಿಸ್‌ ಕೆ ಎಂ ಜೋಸೆಫ್ ಅವರ ಭಡ್ತಿಯನ್ನು ಇನ್ನೂ ಬಾಕಿ ಇರಿಸಿರುವ ಕೇಂದ್ರ ಕ್ರಮದ ಬಗ್ಗೆ ನನ್ನ ಆಕ್ಷೇಪವಿದೆ. ಒಂದು ನೇಮಕ ಮಾಡುವುದು ಮತ್ತು ಇನ್ನೊಂದು ನೇಮಕವನ್ನು ಮಾಡದೇ ಇರುವ ಕೇಂದ್ರದ ಕ್ರಮವು ನ್ಯಾಯಾಂಗದ ಕಾರ್ಯದಲ್ಲಿ ಹಸ್ತಕ್ಷೇಪಿಸಿದ ಹಾಗೆಯೇ ಎಂದು ನಾನು ತಿಳಿಯುತ್ತೇನೆ; ನಿಜಕ್ಕೂ ಇದೊಂದು ಗಂಭೀರ ವಿಷಯ ಮತ್ತು ಇದನ್ನು ಸರಕಾರದ ಮುಂದೆ ಪ್ರಬಲವಾಗಿ ಎತ್ತಬೇಕಾಗಿದೆ’ ಎಂದು ಸುಪ್ರೀಂ ಕೋರ್ಟ್‌ ಬಾರ್‌ ಅಸೋಸಿಯೇಶನ್‌ ಅಧ್ಯಕ್ಷರಾಗಿರುವ ವಕೀಲ ವಿಕಾಸ್‌ ಸಿಂಗ್‌ ಮಾಧ್ಯಮಕ್ಕೆ  ಹೇಳಿದ್ದಾರೆ. 

ಇಂದು ಮಲ್ಹೋತ್ರ ಅವರು ವಕೀಲರ ಸಂಘದಿಂದ ನೇರವಾಗಿ ನ್ಯಾಯಾಧೀಶರ ಹುದ್ದೆಗೆ ನೇಮಕಗೊಂಡಿರುವ ಮೊತ್ತ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಆದರೆ ಅವರನ್ನು ಸುಪ್ರೀಂ ಕೋರ್ಟ್‌ ನ್ಯಾಯಾಧೀಶೆಯಾಗಿ ನೇಮಿಸುವ ಕ್ರಮದಿಂದ ಕೇಂದ್ರ ಸರಕಾರ ಜಸ್ಟಿಸ್‌ ಕೆ ಎಂ ಜೋಸೆಫ್ ಅವರ ಭಡ್ತಿಯನ್ನು ತಡೆಹಿಡಿಯಲು ನಿರ್ಧರಿಸುವುದು ಸ್ಪಷ್ಟವಾಗಿದೆ ಎಂದು ವರದಿಗಳು ತಿಳಿಸಿವೆ.  

ಟಾಪ್ ನ್ಯೂಸ್

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.