ಅಯೋಧ್ಯೆ – ಬಾಬರಿ ವಿವಾದ ತುರ್ತು ವಿಚಾರಣೆಗೆ ಸುಪ್ರೀಂ ನಕಾರ
Team Udayavani, Nov 12, 2018, 12:12 PM IST
ಹೊಸದಿಲ್ಲಿ : ರಾಮ ಜನ್ಮಭೂಮಿ – ಬಾಬರಿ ಮಸೀದಿ ವಿವಾದಿತ ಸ್ಥಳದ ಒಡೆತನ ಯಾರಿಗೆ ಸೇರಿದ್ದೆಂಬ ಕೇಸಿನ ವಿಚಾರಣೆಯನ್ನು ಬೇಗನೆ ಕೈಗೆತ್ತಿಕೊಳ್ಳಬೇಕೆಂದು ಕೋರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಇಂದ ಸೋಮವಾರ ತಿರಸ್ಕರಿಸಿತು.
ಈ ವಿಷಯವನ್ನು ಈಗಾಗಲೇ ಸೂಕ್ತ ಪೀಠದ ವಿಚಾರಣೆಗಾಗಿ ಜನವರಿ ತಿಂಗಳಿಗೆ ಲಿಸ್ಟ್ ಮಾಡಲಾಗಿದೆ ಎಂದು ವರಿಷ್ಠ ನ್ಯಾಯಮೂರ್ತಿ ರಂಜನ್ ಗೊಗೋಯ್ ಮತ್ತು ಜಸ್ಟಿಸ್ ಎಸ್ ಕೆ ಕೌಲ್ ಅವರನ್ನು ಒಳಗೊಂಡ ಪೀಠ ಸ್ಪಷ್ಟಪಡಿಸಿತು.
“ನಾವು ಈಗಾಗಲೇ ಆದೇಶವನ್ನು ಹೊರಡಿಸಿದ್ದೇವೆ; ಅಪೀಲುಗಳು ಜನವರಿಯಲ್ಲಿ ವಿಚಾರಣೆಗೆ ಬರಲಿವೆ; ಆದುದರಿಂದ ಈ ಹಂತದಲ್ಲಿ ತ್ವರಿತ ವಿಚಾರಣೆ ಕೋರಿಕೆಯನ್ನು ಮನ್ನಿಸಲಾಗದು’ ಎಂದು ಪೀಠ ಹೇಳಿತು. ವಕೀಲ ಬರುನ್ ಕುಮಾರ್ ಸಿನ್ಹಾ ಅವರು ಅಖೀಲ ಭಾರತ ಹಿಂದೂ ಮಹಾಸಭಾ ಪರವಾಗಿ ಕೋರ್ಟಿನಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!