ಆನೆ ಕಾರಿಡಾರ್‌ ರಚನೆ: ಮತ್ತೆ ಕರ್ನಾಟಕಕ್ಕೆ ತರಾಟೆ 


Team Udayavani, Jul 13, 2018, 6:00 AM IST

b-44.jpg

ನವದೆಹಲಿ: “ರಾಜ್ಯ ಸರ್ಕಾರಗಳ ಆದೇಶ ಪಾಲನೆ ವಿಚಾರದಲ್ಲಿ ನಾವಂತೂ ಭರವಸೆ ಕಳೆದುಕೊಂಡಿದ್ದೇವೆ, ನೀವು ಅಸಹಾಯಕ ಸ್ಥಿತಿಗೆ ತಲುಪಿದ್ದೀರಾ…?’ ಇದು ಆನೆ ಕಾರಿಡಾರ್‌ ವಿಚಾರದಲ್ಲಿ ಸುಪ್ರೀಂಕೋರ್ಟ್‌ ಕೇಂದ್ರ ಸರ್ಕಾರವನ್ನು ಕೇಳಿದ ಬಗೆ. ದಿನೇ ದಿನೆ ಹೆಚ್ಚುತ್ತಿರುವ
ಮಾನವ-ವನ್ಯಜೀವಿ ಸಂಘರ್ಷದ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿರುವ ನ್ಯಾ. ಮದನ್‌ ಬಿ.ಲೋಕುರ್‌ ಮತ್ತು ನ್ಯಾ. ದೀಪಕ್‌ ಗುಪ್ತಾ ಅವರಿದ್ದ ದ್ವಿಸದಸ್ಯ ಪೀಠ, ಕರ್ನಾಟಕವೂ ಸೇರಿ 13 ರಾಜ್ಯಗಳನ್ನು ತರಾಟೆಗೆ ತೆಗೆದುಕೊಂಡಿತು. 

ದೇಶದ ಒಟ್ಟು 27 ಗಂಭೀರ ಆನೆ ಕಾರಿಡಾರ್‌ಗಳು 22 ರಾಜ್ಯಗಳ ಪರಿಧಿಯೊಳಗೆ ಬರುತ್ತವೆ. ಸುಪ್ರೀಂಕೋರ್ಟ್‌ನ ಆದೇಶದ ನಂತರವೂ 13 ರಾಜ್ಯಗಳು ಆನೆ ಕಾರಿಡಾರ್‌ ರಚಿಸುವ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಕೇಂದ್ರ ಸರ್ಕಾರ ಪೀಠದ ಮುಂದೆ ಅಸಹಾಯಕ ಸ್ಥಿತಿ ವ್ಯಕ್ತಪಡಿಸಿತು. ಇದಕ್ಕೆ ತೀಕ್ಷ್ಣವಾಗಿ ಉತ್ತರಿಸಿದ ದ್ವಿಸದಸ್ಯ ಪೀಠ, “”ನಾವೇನು ಮಾಡುವುದು? ಯಾವ ರಾಜ್ಯ ಸರ್ಕಾರಗಳೂ ಭಾರತ ಸರ್ಕಾರದ
ಮಾತು ಕೇಳುತ್ತಿಲ್ಲ. ನಿನ್ನೆ(ಬುಧವಾರ) ಕೂಡ ಇದೇ ಪರಿಸ್ಥಿತಿ ಎದುರಾಗಿತ್ತು. ಇಂದೂ ಆ ಪರಿಸ್ಥಿತಿ ಮುಂದುವರಿದಿದೆ. ಇದು ನಿರಾಶಾದಾಯಕ ಸ್ಥಿತಿ. ಇದಕ್ಕೊಂದು ಪರಿಹಾರ ಕಾಣಲೇಬೇಕು. ಭಾರತ ಸರ್ಕಾರವೂ ಅಸಹಾಯಕ ಸ್ಥಿತಿಗೆ ಬಂದಿದೆಯೇ?” ಎಂದು ಕೇಂದ್ರದ ಪರ ಹಾಜರಿದ್ದ ಹೆಚ್ಚುವರಿ
ಸಾಲಿಸಿಟರ್‌ ಜನರಲ್‌ ಎ.ಎಲ್‌.ಎಸ್‌. ನಾಡಕರ್ಣಿಗೆ ಕೇಳಿತು.

ಏ. 23 ರಂದೇ ಸುಪ್ರೀಂಕೋರ್ಟ್‌ ಆನೆ ಕಾರಿಡಾರ್‌ ರಚಿಸುವ ಬಗ್ಗೆ ನಾಲ್ಕು ವಾರಗಳಲ್ಲಿ ಅಭಿಪ್ರಾಯ ತಿಳಿಸಿ ಎಂದು 19 ರಾಜ್ಯಗಳಿಗೆ ಸೂಚಿಸಿತ್ತು. ಆದರೆ, ಕೋರ್ಟ್‌ಗೆ 3 ರಾಜ್ಯಗಳು, ಕೇಂದ್ರದ ಮುಂದೆ 5 ರಾಜ್ಯಗಳು ತಮ್ಮ ಅಭಿಪ್ರಾಯ ತಿಳಿಸಿವೆ. ಆದರೆ, 13 ರಾಜ್ಯಗಳು, ಭಾರತ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಆದೇಶ ಉಲ್ಲಂಘನೆ ಮಾಡಿವೆ ಎಂದು ನಾಡಕರ್ಣಿ ಪೀಠದ ಮುಂದೆ ಹೇಳಿದರು. ಇದಕ್ಕೆ ಖಾರವಾಗಿಯೇ ಉತ್ತರಿಸಿದ ಪೀಠ, “”ಅವರು ಭಾರತ ಸಂವಿಧಾನದ ಬಗ್ಗೆಯೂ ಅಸಡ್ಡೆ ತೋರಿದ್ದಾರೆ” ಎಂದಿತು. ಜತೆಯಲ್ಲೇ ವಾದ ಮುಂದುವರಿಸಿದ ನಾಡಕರ್ಣಿ ಅವರು, ಈ ರಾಜ್ಯಗಳಲ್ಲಿ ರಸ್ತೆ, ರೈಲು ಅಥವಾ ವಿದ್ಯುತ್‌ ಶಾಕ್‌ನಿಂದಾಗಿ ಹಲವಾರು ಆನೆಗಳು ಸತ್ತಿವೆ ಎಂಬುದನ್ನು ಪೀಠದ ಮುಂದೆ ಹೇಳಿದರು. 

“”ಭಾರತ ಸರ್ಕಾರ ಏನು ಬೇಕಾದರೂ ಹೇಳಲಿ, ನಾವು ನಮ್ಮ ಪಾಡಿಗೆ, ನಮಗೆ ಬೇಕಾದಂತೆ ಮಾಡುತ್ತೇವೆ ಎಂದು ರಾಜ್ಯ ಸರ್ಕಾರಗಳು ಹೇಳಲು ಶುರು ಮಾಡಿದರೆ ಅದು ಅಪಾಯಕಾರಿ. ಅಲ್ಲಿಗೆ ಇಡೀ ವ್ಯವಸ್ಥೆಯೇ ಬಿದ್ದು ಹೋಗಿದೆ ಎಂದರ್ಥ. ಇದೊಂದು ರೀತಿ ವಿಚಿತ್ರ ಸನ್ನಿವೇಶ” ಎಂದೂ
ಕೋರ್ಟ್‌ ಅಭಿಪ್ರಾಯ ಪಟ್ಟಿತು. ಈ ಸಂದರ್ಭದಲ್ಲಿ ಕರ್ನಾಟಕ, ಉತ್ತರಾಖಂಡ, ಒಡಿಶಾ, ಉತ್ತರ ಪ್ರದೇಶ, ಆಂಧ್ರ ಪ್ರದೇಶ, ಮಹಾರಾಷ್ಟ್ರ, ಪಂಜಾಬ್‌, ರಾಜಸ್ಥಾನ ರಾಜ್ಯಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ವೆಂಬುದನ್ನು ನಾಡಕರ್ಣಿ ಪೀಠದ ಗಮನಕ್ಕೆ ತಂದರು. ಅಲ್ಲದೇ, ಈಗಾಗಲೇ ಕೇಂದ್ರ ಸರ್ಕಾರ ಸಮಿತಿಯೊಂದನ್ನು ರಚಿಸಿದ್ದು, ಆನೆ ಕಾರಿಡಾರ್‌ಗಳನ್ನು ರಚಿಸಲು ಸಲಹೆಗಳಿಗೆ ಆಹ್ವಾನಿಸಲಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

1-qweqweqw

Charmadi Ghat; ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.