ಬಿಗ್ ರಿಲೀಫ್; ಆಧಾರ್ ಲಿಂಕ್ ಗೆ ನೀಡಿದ್ದ ಗಡುವು ಮತ್ತೆ ವಿಸ್ತರಣೆ
Team Udayavani, Mar 13, 2018, 4:59 PM IST
ನವದೆಹಲಿ:ಬ್ಯಾಂಕ್ ಖಾತೆ ಹಾಗೂ ಮೊಬೈಲ್ ಸೇವೆಗೆ ಮಾರ್ಚ್ 31ರೊಳಗೆ ಆಧಾರ್ ಲಿಂಕ್ ಕಡ್ಡಾಯ ಎಂಬ ಅಂತಿಮ ಗಡುವನ್ನು ಸುಪ್ರೀಂಕೋರ್ಟ್ ಮಂಗಳವಾರ ಮತ್ತೆ ಅನಿರ್ದಿಷ್ಟಾವಧಿವರೆಗೆ ಗಡುವು ವಿಸ್ತರಿಸುವ ಮೂಲಕ ಜನಸಾಮಾನ್ಯರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಆಧಾರ್ ಕುರಿತ ದಾವೆಯ ಅಂತಿಮ ತೀರ್ಪು ಬರುವವರೆಗೆ ಆಧಾರ್ ಲಿಂಕ್ ಗಡುವು ವಿಸ್ತರಣೆ ಮಾಡಲಾಗಿದೆ ಎಂದು ಐದು ನ್ಯಾಯಾಧೀಶರನ್ನೊಳಗೊಂಡ ಸುಪ್ರೀಂಕೋರ್ಟ್ ಪೀಠ ಆದೇಶ ನೀಡಿದೆ.
ಅಷ್ಟೇ ಅಲ್ಲ ಕೇಂದ್ರ ಸರಕಾರ ಕೂಡಾ ಯಾವುದೇ ಕಾರಣಕ್ಕೂ ತಾತ್ಕಾಲಿಕ ಪಾಸ್ ಪೋರ್ಟ್ ನೀಡುವಾಗಲೂ ಕೂಡಾ ಆಧಾರ್ ಕಡ್ಡಾಯ ಎಂದು ಸೂಚಿಸಬಾರದು ಎಂದು ಸುಪ್ರೀಂಕೋರ್ಟ್ ಸೂಚಿಸಿದೆ.
ಕಳೆದ ವರ್ಷ ಡಿಸೆಂಬರ್ 15ರಂದು ಸುಪ್ರೀಂಕೋರ್ಟ್ ಪಂಚಸದಸ್ಯ ಪೀಠ, ಬ್ಯಾಂಕ್ ಖಾತೆ ಹಾಗೂ ಮೊಬೈಲ್ ಫೋನ್ ಗೆ ಮಾರ್ಚ್ 31ರೊಳಗೆ ಆಧಾರ್ ಅನ್ನು ಕಡ್ಡಾಯವಾಗಿ ಲಿಂಕ್ ಮಾಡಬೇಕೆಂದು ಗಡುವು ವಿಸ್ತರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ
Vote ಮಾಡದಿದ್ದರೆ ಬ್ಯಾಂಕ್ ಖಾತೆಯಿಂದ 350 ರೂ. ಕಡಿತ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ