ಜಂತರ್ ಮಂತರ್ ಪ್ರತಿಭಟನೆ ನಿಷೇಧ: ಸುಪ್ರೀಂ ಕೋರ್ಟ್ ತೆರವು
Team Udayavani, Jul 23, 2018, 6:46 PM IST
ಹೊಸದಿಲ್ಲಿ : ಧರಣಿ, ಪ್ರತಿಭಟನೆ, ಸಾರ್ವಜನಿಕ ಭಾಷಣ ಕಾರ್ಯಕ್ರಮ ಮುಂತಾದವುಗಳಿಗೆ ಪ್ರಸಿದ್ಧವಾಗಿರುವ ಇಲ್ಲಿನ ಜಂತರ್ ಮಂತರ್ ಮತ್ತು ಬೋಟ್ ಕ್ಲಬ್ ಪ್ರದೇಶಗಳಲ್ಲಿ ಪ್ರತಿಭಟನೆ, ಧರಣಿ ನಡೆಸುವುದರ ವಿರುದ್ಧ ಸರಕಾರ ಹೇರಿದ್ಧ ಸಂಪೂರ್ಣ ನಿಷೇಧವನ್ನು ಸುಪ್ರೀಂ ಕೋರ್ಟ್ ಇಂದು ಸೋಮವಾರ ತೆರವುಗೊಳಿಸಿತು.
ಸಾರ್ವಜನಿಕರು ಸೇರುವ ಇಂತಹ ತಾಣಗಳಲ್ಲಿ ಪ್ರತಿಭಟನೆ, ಧರಣಿಗಳಿಗೆ ಸಂಪೂರ್ಣ ನಿಷೇಧ ಹೇರುವಂತಿಲ್ಲ ಎಂದು ನ್ಯಾಯಾಲಯ ಹೇಳಿತು.
ನಿಷೇಧಕ್ಕೆ ಸಂಬಂಧಿಸಿದಂತೆ ಎರಡು ತಿಂಗಳ ಒಳಗಾಗಿ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಿ ತನ್ನ ಮುಂದೆ ಮಂಡಿಸುವಂತೆ ಸರ್ವೋಚ್ಚ ನ್ಯಾಯಾಲಯ ಕೇಂದ್ರ ಸರಕಾರಕ್ಕೆ ಆದೇಶ ನೀಡಿತು.
ಪರಸ್ಪರ ವಿರೋಧಾತ್ಮಕವಾಗಿರುವ ಪ್ರತಿಭಟನೆಯ ಹಕ್ಕು ಮತ್ತು ಶಾಂತಿಯುತ ಬಾಳ್ವೆಯ ಪ್ರಜಾ ಹಕ್ಕು ಇವುಗಳ ನಡುವೆ ಸಂತುಲನೆಯನ್ನು ಕಾಯ್ದುಕೊಳ್ಳುವ ಅಗತ್ಯವಿದೆ ಎಂದು ಜಸ್ಟಿಸ್ ಎ ಕೆ ಸಿಕ್ರಿ ಮತ್ತು ಅಶೋಕ್ ಭೂಷಣ್ ಅವರನ್ನು ಒಳಗೊಂಡ ಸುಪ್ರೀಂ ಪೀಠ ಹೇಳಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ