ಸುಪ್ರೀಂ ಆದೇಶ : ಮಮತಾಗೆ ಪ್ರಹಾರ, ಸಿಬಿಐಗೆ ನೈತಿಕ ವಿಜಯ: ಬಿಜೆಪಿ


Team Udayavani, Feb 5, 2019, 10:45 AM IST

ravi-shanker-prasad-700.jpg

ಹೊಸದಿಲ್ಲಿ : ಬಹುಕೋಟಿ ಶಾರದಾ ಮತ್ತು ರೋಸ್‌ ವ್ಯಾಲಿ ಚಿಟ್‌ ಫ‌ಂಡ್‌ ಹಗರಣದಲ್ಲಿ ಸಿಬಿಐ ಮುಂದೆ ತನಿಖೆಗೆ ಹಾಜರಾಗುವಂತೆ ಸುಪ್ರೀಂ ಕೋರ್ಟ್‌ ಇಂದು ಕೋಲ್ಕತ ಪೊಲೀಸ್‌ ಕಮಿಷನರ್‌ ಗೆ ಆದೇಶಿಸಿರುವುದು ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಲ ಸರಕಾರಕ್ಕೆ ಒದಗಿರುವ ಭಾರೀ ಕಾನೂನು ಪ್ರಹಾರವಾಗಿದೆ, ಜತೆಗೆ ಸಿಬಿಐ ಗೆ ಒದಗಿರುವ ನೈತಿಕ ವಿಜಯವಾಗಿದೆ ಎಂದು ಪ್ರತಿಕ್ರಿಯಿಸುವ ಮೂಲಕ ಬಿಜೆಪಿ ಇಂದು ಸುಪ್ರೀಂ ಕೋರ್ಟ್‌ ಆದೇಶವನ್ನು ಸ್ವಾಗತಿಸಿದೆ.

ಸುಪ್ರೀಂ ಕೋರ್ಟ್‌ ಇಂದು ನೀಡಿರುವ ಮಹತ್ವದ ಆದೇಶದಲ್ಲಿ ಕೋಲ್ಕತ ಪೊಲೀಸ್‌ ಕಮಿಷನರ್‌ ರಾಜೀವ್‌ ಕುಮಾರ್‌ ಅವರು ಮೇಘಾಲಯದ ರಾಜಧಾನಿಯಲ್ಲಿ ಶಿಲಾಂಗ್‌ನಲ್ಲಿ ಸಿಬಿಐ ಮುಂದೆ ವಿಚಾರಣೆಗೆ ಹಾಜರಾಗಬೇಕು ಎಂದು ಹೇಳಿದೆ. ಆದರೆ ಅವರನ್ನು ಬಂಧಿಸುವುದಾಗಲೀ, ಅವರ ಮೇಲೆ ಬಲ ಪ್ರಯೋಗಿಸುವುದಾಗಲೀ ಮಾಡಬಾರದು ಎಂದು ಸಿಬಿಐ ಗೆ ಸ್ಪಷ್ಟಪಡಿಸಿದೆ. 

ಸುಪ್ರೀಂ ಕೋರ್ಟ್‌ ಆದೇಶದ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡುತ್ತಾ ಕೇಂದ್ರ ಸಚಿವ ರವಿ ಶಂಕರ್‌ ಪ್ರಸಾದ್‌ ಅವರು “ಲಕ್ಷಾತರ ಜನಸಾಮಾನ್ಯರನ್ನು ಲೂಟಿ ಮಾಡಲಾಗಿರುವ ಹಗರಣದಂತಹ ವಿಷಯಗಳನ್ನು  ಯಾರೂ ರಾಜಕೀಯಗೊಳಿಸಬಾರದು’ ಎಂದರಲ್ಲದೆ ಆ ರೀತಿಯ ವರ್ತನೆ ತೋರಿರುವ ಪಶ್ಚಿಮ ಬಂಗಾಲ ಸರಕಾರವನ್ನು ತೀವ್ರವಾಗಿ ಟೀಕಿಸಿದರು. 

ಶಾರದಾ ಮತ್ತು ರೋಸ್‌ ವ್ಯಾಲಿ ಚಿಟ್‌ ಫ‌ಂಡ್‌ ಅಕ್ರಮದಲ್ಲಿ ಲಕ್ಷಾಂತರ ಸಣ್ಣ ಹೂಡಿಕೆದಾರರ ಹಣವನ್ನು ಲೂಟಿ ಮಾಡಲಾಗಿದೆ; ಹಾಗಿರುವಾಗ ಈ ಮಹಾ ಅನ್ಯಾಯದ ವಿರುದ್ಧ ತನಿಖೆ ನಡೆಸುವುದು ನ್ಯಾಯ ಸಮ್ಮತವಲ್ಲವೇ ? ಎಂದು ರವಿ ಶಂಕರ್‌ ಪ್ರಸಾದ್‌ ಪ್ರಶ್ನಿಸಿದರು.

‘ಆದರೆ ಲಕ್ಷಾಂತರ ಜನಸಾಮಾನ್ಯರ ಹಣವನ್ನು  ಕೊಳ್ಳೆ ಹೊಡೆಯಲಾಗಿರುವ ಈ ಹಗರಣದ ಬಗ್ಗೆ ಮಮತಾ ಮೌನ ವಹಿಸುವುದು ಏಕೆ ? ನ್ಯಾಯೋಚಿತ ರೀತಿಯಲ್ಲಿ ಈ ಹಗರಣದ ತನಿಖೆ ಆಗಬೇಕಿದೆ. ಸುಪ್ರೀಂ ಕೋರ್ಟ್‌ ಆದೇಶಿಸಿರುವ ಪ್ರಕಾರ ಕೋಲ್ಕತ ಪೊಲೀಸ್‌ ಕಮಿಷನರ್‌ ಈಗಿನ್ನು ಶಿಲಾಂಗ್‌ ನಲ್ಲಿ ಸಿಬಿಐ ಮುಂದೆ ತನಿಖೆಗೆ ಹಾಜರಾಗುತ್ತಾರೆ; ಏಕೆಂದರೆ ಪಶ್ಚಿಮ ಬಂಗಾಲದಲ್ಲಿ ತನಿಖೆಗೆ ಸೂಕ್ತ ವಾತಾವರಣ ಇಲ್ಲವಾಗಿದೆ’ ಎಂದು ಪ್ರಸಾದ್‌ ಹೇಳಿದರು. 

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.