ಎನ್ ಎಲ್ ಎಟಿ-2020 ಪ್ರವೇಶ ಪರೀಕ್ಷೆ ಅಧಿಸೂಚನೆ ರದ್ದುಪಡಿಸಿದ ಸುಪ್ರೀಂಕೋರ್ಟ್
ಪೋಷಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಜಸ್ಟೀಸ್ ಅಶೋಕ್ ಭೂಷಣ್ ನೇತೃತ್ವದ ಪೀಠ ಈ ಆದೇಶ ನೀಡಿದೆ.
Team Udayavani, Sep 21, 2020, 1:56 PM IST
ನವದೆಹಲಿ: ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿರ್ವಸಿಟಿ (ಎನ್ ಎಲ್ ಎಸ್ ಐಯು) ಸೆಪ್ಟೆಂಬರ್ 12ರಂದು ನಡೆಸಿದ್ದ ನ್ಯಾಷನಲ್ ಲಾ ಆಪ್ಟಿಟ್ಯೂಡ್ ಪರೀಕ್ಷೆ-2020 ಇದರ ಪ್ರತ್ಯೇಕ ಪ್ರವೇಶ ಪರೀಕ್ಷೆಯ ಅಧಿಸೂಚನೆಯನ್ನು ಸೋಮವಾರ(ಸೆಪ್ಟೆಂಬರ್ 21, 2020) ಸುಪ್ರೀಂಕೋರ್ಟ್ ರದ್ದುಪಡಿಸಿದೆ.
ಐದು ವರ್ಷಗಳ ಸಂಯೋಜಿತ ಬಿಎ ಎಲ್ ಎಲ್ ಬಿ ಪದವಿ ಪ್ರವೇಶದ ಎನ್ ಎಲ್ ಎಟಿ-2020 ಪ್ರವೇಶ ಪರೀಕ್ಷೆಯನ್ನು ರದ್ದುಗೊಳಿಸಿರುವ ಸುಪ್ರೀಂಕೋರ್ಟ್, ಸೆಪ್ಟೆಂಬರ್ 28ರಂದು ಬೆಂಗಳೂರಿನ ಎನ್ ಎಲ್ ಎಸ್ ಐಯು ಸೇರಿದಂತೆ ದೇಶಾದ್ಯಂತ ಇರುವ 22 ರಾಷ್ಟ್ರೀಯ ಕಾನೂನು ವಿವಿಗಳಲಲಿನ ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ (ಸಿಎಲ್ ಟಿ-2020) ಪ್ರಕಾರವೇ ಪ್ರವೇಶ ಪರೀಕ್ಷೆ ನಡೆಸಬೇಕೆಂದು ಸುಪ್ರೀಂಕೋರ್ಟ್ ಈ ಸಂದರ್ಭದಲ್ಲಿ ನಿರ್ದೇಶಿಸಿದೆ.
ಎನ್ ಎಲ್ ಎಟಿ ನಿರ್ಧಾರ ಪ್ರಶ್ನಿಸಿ ಎನ್ ಎಲ್ ಎಸ್ ಐಯು ಮಾಜಿ ಉಪಕುಲಪತಿ ಪ್ರೊ.ಆರ್.ವೆಂಕಟರಾವ್ ಮತ್ತು ಪ್ರವೇಶ ಪರೀಕ್ಷೆ ಆಕಾಂಕ್ಷಿಗಳ ಪೋಷಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಜಸ್ಟೀಸ್ ಅಶೋಕ್ ಭೂಷಣ್ ನೇತೃತ್ವದ ಪೀಠ ಈ ಆದೇಶವನ್ನು ನೀಡಿದೆ.
ಇದನ್ನೂ ಓದಿ: ವಿಧಾನಸೌಧದಲ್ಲಿ ಮಾರಾಮಾರಿಗೆ ಮುಂದಾದ ಬಿಜೆಪಿ ನಾಯಕರು: ಕಮಲ ಪಾಳಯದ ಒಳಜಗಳ ಸ್ಪೋಟ!
ಅಷ್ಟೇ ಅಲ್ಲ ಜಸ್ಟೀಸ್ ಆರ್ ಎಸ್ ರೆಡ್ಡಿ ಮತ್ತು ಜಸ್ಟೀಸ್ ಎಂಆರ್ ಶಾ ಅವರನ್ನೊಳಗೊಂಡ ಪೀಠ, ಎಲ್ಲಾ ಎನ್ ಎಲ್ ಯುಗಳು ಅಕ್ಟೋಬರ್ ಮಧ್ಯಂತರದಿಂದಲೇ ಶೈಕ್ಷಣಿಕ ಚಟುವಟಿಕೆ ಪುನರಾರಂಭಿಸುವಂತೆ ಸೂಚಿಸಿದೆ.
ಎನ್ ಎಲ್ ಎಟಿ-2020 ಅಧಿಸೂಚನೆ ರದ್ದುಪಡಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಪೀಠ ಸೆಪ್ಟೆಂಬರ್ 17ರಂದು ಆದೇಶವನ್ನು ಕಾಯ್ದಿರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ