ಲೋಕಸಭೆ ಸಮರ; ರಮ್ಜಾನ್ ಹಿನ್ನೆಲೆ ಸಮಯ ಬದಲಾಯಿಸಲು ಕೋರಿ ಸಲ್ಲಿಸಿದ್ದ ಅರ್ಜಿ ವಜಾ
Team Udayavani, May 13, 2019, 3:08 PM IST
ನವದೆಹಲಿ:ಚುನಾವಣಾ ಆಯೋಗ ನಿಗದಿಪಡಿಸಿದ ಲೋಕಸಭಾ ಚುನಾವಣೆಯ ಸಮಯವನ್ನು ರಮ್ಜಾನ್ ಹಿನ್ನೆಲೆಯಲ್ಲಿ ಬದಲಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ವಜಾಗೊಳಿಸಿದೆ.
ಕೇಂದ್ರ ಚುನಾವಣಾ ಆಯೋಗ ಲೋಕಸಭಾ ಚುನಾವಣೆಯ ಮತದಾನ ಬೆಳಗ್ಗೆ 7ಗಂಟೆಯಿಂದ ಸಂಜೆ 6ಗಂಟೆವರೆಗೆ ನಡೆಸುವಂತೆ ಪ್ರಕಟಣೆ ಹೊರಡಿಸಿತ್ತು. ಆದರೆ ರಮ್ಜಾನ್ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆ ಅಂತಿಮ ಹಂತದ (ಮೇ 19) ಮತದಾನದ ಸಮಯವನ್ನು ಬೆಳಗ್ಗೆ 5.30ರಿಂದ ಅಥವಾ 6ಗಂಟೆಯಿಂದ ಆರಂಭಿಸಬೇಕೆಂದು ಕೋರಿ ವಕೀಲ ಮೊಹಮ್ಮದ್ ನಿಜಾಮುದ್ದೀನ್ ಪಾಶಾ ಅರ್ಜಿ ಸಲ್ಲಿಸಿದ್ದರು.
ಇದಕ್ಕೂ ಮುನ್ನ ಸುಪ್ರೀಂ ಪೀಠ, ಲೋಕಸಭಾ ಚುನಾವಣೆಯ ಬಾಕಿ ಇರುವ ಕ್ಷೇತ್ರಗಳಲ್ಲಿ ಮತದಾನದ ಸಮಯವನ್ನು ಬೆಳಗ್ಗೆ 7ಗಂಟೆ ಬದಲು ಬೆಳಗ್ಗೆ 5ಗಂಟೆಗೆ ಆರಂಭಿಸಲು ಸೂಕ್ತವಾದ ಆದೇಶ ಹೊರಡಿಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿತ್ತು. ಆದರೆ ಚುನಾವಣಾ ಆಯೋಗ ಸಮಯ ಬದಲಾವಣೆ ಅಸಾಧ್ಯ ಎಂದು ಅಫಿಡವಿತ್ ಸಲ್ಲಿಸಿತ್ತು.
ಈ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ ನ ಜಸ್ಟೀಸ್ ಇಂದಿರಾ ಬ್ಯಾನರ್ಜಿ ಹಾಗೂ ಸಂಜೀವ್ ಖನ್ನಾ ನೇತೃತ್ವದ ರಜಾಕಾಲದ ಪೀಠ ಸಮಯ ಬದಲಾವಣೆಯ ಅರ್ಜಿಯನ್ನು ವಜಾಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani
ಹೊಸ ಸೇರ್ಪಡೆ
ಮಣಿಪಾಲ: ಅಪಾರ್ಟ್ ಮೆಂಟ್ ನಲ್ಲಿ ಲಕ್ಷಾಂತರ ರೂ. ಸೊತ್ತುಗಳ ಕಳವು
ಷೇರುಗಳ ಮೌಲ್ಯ ಕುಸಿತ; ಎಸ್ ಬಿಐ, ಪಿಎನ್ ಬಿ ಬ್ಯಾಂಕ್ ಗಳಿಂದ ಅದಾನಿ ಪಡೆದ ಸಾಲದ ಮೊತ್ತ ಎಷ್ಟು ಗೊತ್ತಾ?
ಮಾರಿಗುಡ್ಡದಲ್ಲಿ ಗಡ್ಡಧಾರಿಗಳ ಅಬ್ಬರ
ಮಂಗಳೂರು : ಜ್ಯುವೆಲ್ಲರಿ ಶಾಪ್ ನಲ್ಲಿ ಸಿಬಂದಿಗೆ ಚೂರಿ ಇರಿತ
ಬಸವ ಕಲ್ಯಾಣದಲ್ಲಿ ಸಿದ್ದರಾಮಯ್ಯ,ಕೋಲಾರದಲ್ಲಿ ಡಿಕೆಶಿ: ಪ್ರಜಾಧ್ವನಿ ಯಾತ್ರೆಗೆ ಚಾಲನೆ