ವರದಕ್ಷಿಣೆ: ಸಮಿತಿ ರಚನೆ ಬೇಕಿಲ್ಲ :ಸುಪ್ರೀಂ ಕೋರ್ಟ್
Team Udayavani, Sep 16, 2018, 10:31 AM IST
ಹೊಸದಿಲ್ಲಿ: ವರದಕ್ಷಿಣೆ ಕಿರುಕುಳ ಪ್ರಕರಣಗಳಲ್ಲಿ ಸಂತ್ರಸ್ತೆಯ ಪತಿ, ಹೆತ್ತವರು ಹಾಗೂ ಸಂಬಂಧಿಕರನ್ನು ಬಂಧಿಸುವ ಮುನ್ನ ಸಂತ್ರಸ್ತೆ ನೀಡಿದ ದೂರಿನ ಬಗ್ಗೆ ಪರಿಶೀಲನೆ ನಡೆಸಲು ಜಿಲ್ಲಾ ಮಟ್ಟದ ಕುಟುಂಬ ಕಲ್ಯಾಣ ಸಮಿತಿ ರಚಿಸಬೇಕು ಎಂಬ ತನ್ನದೇ ಆದೇಶವನ್ನು ಸುಪ್ರೀಂ ಕೋರ್ಟ್ ಮಾರ್ಪಾಡು ಮಾಡಿದೆ. ಜತೆಗೆ, ಆರೋಪಿಗಳನ್ನು ಕೂಡಲೇ ಬಂಧಿಸುವುದಕ್ಕೂ ಅವಕಾಶ ಕಲ್ಪಿಸಿದೆ.
ವರದಕ್ಷಿಣೆ ಕಿರುಕುಳ ಕುರಿತು ದೂರು ಬಂದ ಕೂಡಲೇ ಸಂತ್ರಸ್ತೆಯ ಪತಿ ಹಾಗೂ ಸಂಬಂಧಿಕರನ್ನು ಬಂಧಿಸಬಾರದು ಹಾಗೂ ದೂರಿನ ಬಗ್ಗೆ ಪರಿಶೀಲಿಸಲು ಕುಟುಂಬ ಕಲ್ಯಾಣ ಸಮಿತಿಯನ್ನು ಜಿಲ್ಲಾ ಮಟ್ಟದಲ್ಲಿ ರಚಿಸಬೇಕು ಎಂದು 2017ರ ಜುಲೈನಲ್ಲಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿತ್ತು. ನ್ಯಾಯಾಲಯದ ಈ ಹಿಂದಿನ ಆದೇಶವು ವರದಕ್ಷಿಣೆ ಕಿರುಕುಳ ತಡೆ ಕಾನೂನನ್ನು ದುರ್ಬಲಗೊಳಿಸಿದ್ದು, ಅದನ್ನು ಮಾರ್ಪಾಡು ಮಾಡಬೇಕು ಎಂದು ಕೋರಿ ಸೋಷಿಯಲ್ ಆ್ಯಕ್ಷನ್ ಫೋರಂ ಎಂಬ ಎನ್ಜಿಒ ಹಾಗೂ ಇತರರು ಅರ್ಜಿ ಸಲ್ಲಿಸಿದ್ದರು.
ಈ ಹಿನ್ನೆಲೆಯಲ್ಲಿ ಅರ್ಜಿಗಳನ್ನು ಪುರಸ್ಕರಿಸಿರುವ ಸಿಜೆಐ ದೀಪಕ್ ಮಿಶ್ರಾ ನೇತೃತ್ವದ ಪೀಠ, ಶುಕ್ರವಾರ ತೀರ್ಪಿನಲ್ಲಿ ಮಾರ್ಪಾಡು ಮಾಡಿದೆ. ದೂರು ಬಂದ ಕೂಡಲೇ ಸಂತ್ರಸ್ತೆಯ ಪತಿ, ಸಂಬಂಧಿಕರ ಬಂಧನಕ್ಕೆ ಇದ್ದ ಅಡ್ಡಿಯನ್ನು ತೆಗೆದುಹಾಕಲಾಗಿದ್ದು, ಕೂಡಲೇ ಆರೋಪಿಗಳನ್ನು ಬಂಧಿಸುವ ಅವಕಾಶ ಕಲ್ಪಿಸಲಾಗಿದೆ. ಜೊತೆಗೆ, ದೂರು ಪರಿಶೀಲಿಸಲು ಸಮಿತಿಯ ಅಗತ್ಯವಿಲ್ಲ ಎಂದೂ ಹೇಳಿದೆ. ಇದೇ ವೇಳೆ, ಬಂಧಿತರು ಜಾಮೀನಿಗಾಗಿ
ಕೋರ್ಟ್ಗೆ ಅರ್ಜಿ ಸಲ್ಲಿಸಬಹುದು, ಅವರಿಗೆ ಜಾಮೀನು ನೀಡುವುದು ಆಯಾ ಮ್ಯಾಜಿಸ್ಟ್ರೇಟ್ರ ವಿವೇಚನೆಗೆ ಬಿಟ್ಟಿದ್ದು ಎಂದೂ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ