- Sunday 08 Dec 2019
ದಿಲ್ಲಿ ಮೆಟ್ರೋದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಶಿಫಾರಸು; ಆಪ್ ಸರಕಾರಕ್ಕೆ ಸುಪ್ರೀಂ ಚಾಟಿ
Team Udayavani, Sep 6, 2019, 4:11 PM IST
ನವದೆಹಲಿ:ದಿಲ್ಲಿ ಮಹಿಳೆಯರಿಗೆ ಮೆಟ್ರೋದಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡುವ ಆಮ್ ಆದ್ಮಿ ಪಕ್ಷದ ಸರ್ಕಾರದ ಶಿಫಾರಸ್ಸಿಗೆ ಸುಪ್ರೀಂಕೋರ್ಟ್ ಶುಕ್ರವಾರ ಚಾಟಿ ಬೀಸಿದ್ದು, ಈ ಯೋಜನೆಯಿಂದ ಆರ್ಥಿಕವಾಗಿ ಬೀರುವ ಪರಿಣಾಮಗಳ ಬಗ್ಗೆ ಪ್ರಶ್ನಿಸಿದೆ.
ರಾಜ್ಯ ಸರಕಾರ ಜನಸಾಮಾನ್ಯರ ಹಣವನ್ನು ಉಪಯೋಗಿಸುವಾಗ ತುಂಬಾ ಜಾಗರೂಕತೆ ವಹಿಸಬೇಕೆಂದು ಸಲಹೆ ನೀಡಿರುವ ಸುಪ್ರೀಂಕೋರ್ಟ್, ಇಂತಹ ಉಚಿತ ಸೇವೆಗಳ ಯೋಜನೆಗಳಿಂದ ದಿಲ್ಲಿ ಮೆಟ್ರೋ ರೈಲ್ವೆ ಕಾರ್ಪೋರೇಶನ್ ಗೆ ಭಾರೀ ನಷ್ಟ ತರಲಿದೆ ಎಂದು ತಿಳಿಸಿದೆ.
ದಿಲ್ಲಿ ಮೆಟ್ರೋದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗುವುದು ಎಂಬ ದಿಲ್ಲಿ ಸರಕಾರದ ಶಿಫಾರಸ್ಸನ್ನು ಪ್ರಶ್ನಿಸಿ ಎಂಸಿ ಮೆಹ್ತಾ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ಈ ಅಭಿಪ್ರಾಯವ್ಯಕ್ತಪಡಿಸಿದೆ.
ಸುರಕ್ಷತೆಯ ದೃಷ್ಟಿಯಲ್ಲಿ ಮೆಟ್ರೋ, ಡಿಟಿಸಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಜೂನ್ 3ರಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದರು.
ಈ ಯೋಜನೆಯನ್ನು 2-3 ತಿಂಗಳಲ್ಲಿನಲ್ಲಿಯೇ ಕಾರ್ಯಗತಗೊಳಿಸುವುದಾಗಿ ತಿಳಿಸಿದ್ದರು. ಅಲ್ಲದೇ ಉಚಿತ ಪ್ರಯಾಣದ ವೆಚ್ಚವನ್ನು ದಿಲ್ಲಿ ಸರಕಾರ ಭರಿಸಲಿದೆ. ಆದರೆ ಕೇಂದ್ರ ಸರಕಾರ ತಮಗೆ ಹಣಕಾಸಿನ ಸಹಕಾರ ನೀಡುತ್ತಿಲ್ಲ ಎಂದು ಕೇಜ್ರಿವಾಲ್ ಆರೋಪಿಸಿದ್ದರು.
ಏತನ್ಮಧ್ಯೆ ಕೇಜ್ರಿವಾಲ್ ಘೋಷಣೆಯನ್ನು ಬಿಜೆಪಿ ಕಟುವಾಗಿ ಟೀಕಿಸಿತ್ತು. ಇದು 2020ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ದೃಷ್ಟಿಕೋನದಿಂದ ಉಚಿತ ಪ್ರಯಾಣದ ಕೇಜ್ರಿವಾಲ್ ಘೋಷಣೆ ಮಾಡಿದ್ದಾಗಿ ಬಿಜೆಪಿ ತಿರುಗೇಟು ನೀಡಿತ್ತು.
ಈ ವಿಭಾಗದಿಂದ ಇನ್ನಷ್ಟು
-
ಮುಂಬಯಿ: ಸಮುದ್ರದಲ್ಲಿ ತೇಲಿ ಬಂದ ಸೂಟ್ ಕೇಸ್ ನ ರಹಸ್ಯವನ್ನು ಪೊಲೀಸರು ಬೇಧಿಸಿದ್ದು ಆರೋಪಿಗಳನ್ನು ಬಂಧಿಸಿದ್ದಾರೆ. ದತ್ತು ಪಡೆದ ಮಗಳೊಬ್ಬಳು ತನ್ನ ಪ್ರಿಯಕರನೊಂದಿಗೆ...
-
ಹೊಸದಿಲ್ಲಿ: ಇಲ್ಲಿನ ರಾಣಿ ಜಾನ್ಸಿ ರಸ್ತೆಯಲ್ಲಿರುವ ಅನಜ್ ಮಂಡಿ ಪ್ರದೇಶದಲ್ಲಿ ಇಂದು ಮುಂಜಾನ ನಡೆದ ಅಗ್ನಿ ಅವಗಢಕ್ಕೆ ಪ್ರಧಾನಿ ನರೇಂದ್ರ ಮೋದಿ ಆಘಾತ ವ್ಯಕ್ತಪಡಿಸಿದ್ದಾರೆ....
-
ಪಣಜಿ: ದೇಶದಲ್ಲಿ ಈರುಳ್ಳಿ ಬೆಲೆ ಗಗನಕ್ಕೇರಿದೆ. ಇದರಿಂದಾಗಿ ಹೋಟೇಲ್ ಉದ್ಯಮಿಗಳ ಪಾಲಿಗೆ ಈರುಳ್ಳಿ ನಿಜವಾಗಿಯೂ ಕಣ್ಣೀರು ತರಿಸಿದೆ. ಆದರೆ ಸದ್ಯ ಗೋವಾದಲ್ಲಿ ಹೊಸ...
-
ಛತ್ತಿಸ್ ಗಢ: 6 ವರ್ಷದ ಬಾಲಕಿ ಮೇಲೆ ನೆರಮನೆಯ ಅಪ್ರಾಪ್ತ ಬಾಲಕನೊಬ್ಬ ಅತ್ಯಾಚಾರವೆಸಗಿದ ಘಟನೆ ರಾಯ್ ಗಢದ, ಲಾಯ್ ಲುಂಗಾ ದಲ್ಲಿ ನಡೆದಿದೆ. 15 ವರ್ಷದ ಅಪ್ರಾಪ್ತ ಬಾಲಕ...
-
ಹೊಸದಿಲ್ಲಿ: ಇಲ್ಲಿನ ರಾಣಿ ಜಾನ್ಸಿ ರಸ್ತೆಯ ಅನಜ್ ಮಂಡಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಸುಮಾರು 43 ಕಾರ್ಮಿಕರು ಸಾವನ್ನಪ್ಪಿದ್ದ ದುರ್ಘಟನೆ ಭಾನುವಾರ...
ಹೊಸ ಸೇರ್ಪಡೆ
-
ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್ ನವರು ಕೂಸು ಹುಟ್ಟುವ ಮುಂಚೆಯೇ ಕುಲಾಯಿ ಹೊಲಿಸುತ್ತಿದ್ದಾರೆ. ಚುನಾವಣಾ ಫಲಿತಾಂಶ ಬರುವ ಮುಂಚಿಯೇ ಅವರು ಅಧಿಕಾರದ ಕನಸು...
-
ಚಂದ್ರಶೇಖರ ಯರದಿಹಾಳ ಸಿಂಧನೂರು: ಕಲ್ಯಾಣ ಕರ್ನಾಟಕದಲ್ಲೇ ದೊಡ್ಡ ತಾಲೂಕು ಎಂಬ ಹೆಗ್ಗಳಿಕೆಗೆ ಪಾತ್ರವಾದ ಸಿಂಧನೂರು ನಗರದ ಹೈಟೆಕ್ ಬಸ್ ನಿಲ್ದಾಣ ಮೇಲೆಲ್ಲ,...
-
ಡಿ.ಬಿ. ವಡವಡಗಿ ಮುದ್ದೇಬಿಹಾಳ: ಯಾವುದೇ ಪಟ್ಟಣ, ನಗರ ಸುಂದರವಾಗಿ ಕಾಣಬೇಕಾದರೆ ಅಲ್ಲಿನ ಮುಖ್ಯ ರಸ್ತೆಗಳು ಸುಂದರವಾಗಿರಬೇಕು. ರಸ್ತೆಗಳ ನೋಟದಿಂದಲೇ ಪರಸ್ಥಳದಿಂದ...
-
ಬೆಳಗಾವಿ: ನಿಂತಿದ್ದ ಲಾರಿಗೆ ಹಿಂದಿನಿಂದ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಖಾನಾಪುರ ತಾಲೂಕಿನ ನಂದಿಹಳ್ಳಿಯ ರಾಷ್ಟ್ರೀಯ...
-
ಮುಂಬಯಿ: ಸಮುದ್ರದಲ್ಲಿ ತೇಲಿ ಬಂದ ಸೂಟ್ ಕೇಸ್ ನ ರಹಸ್ಯವನ್ನು ಪೊಲೀಸರು ಬೇಧಿಸಿದ್ದು ಆರೋಪಿಗಳನ್ನು ಬಂಧಿಸಿದ್ದಾರೆ. ದತ್ತು ಪಡೆದ ಮಗಳೊಬ್ಬಳು ತನ್ನ ಪ್ರಿಯಕರನೊಂದಿಗೆ...