ಮಾಧ್ಯಮ ಅಭಿವ್ಯಕ್ತಿ ಸ್ವಾತಂತ್ರ್ಯ ಎತ್ತಿಹಿಡಿದ ಸುಪ್ರೀಂ ಕೋರ್ಟ್‌


Team Udayavani, Jan 9, 2018, 7:53 PM IST

Supreme Court-700.jpg

ಹೊಸದಿಲ್ಲಿ : ಮಾಧ್ಯಮಗಳಿಗೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಬೇಕು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಇದೇ ವೇಳೆ ಟಿವಿ ಪತ್ರಕರ್ತ ರಾಜದೀಪ್‌ ಸರ್‌ದೇಸಾಯ್‌ ವಿರುದ್ಧದ ಮಾನಹಾನಿ ದಾವೆಯನ್ನು ಪುನರಾರಂಭಿಸಲು ಅದು ನಿರಾಕರಿಸಿದೆ.

ಬಿಹಾರದ ಹಿರಿಯ ಸರಕಾರಿ ಅಧಿಕಾರಿಯ ಪುತ್ರಿ ಸಲ್ಲಿಸಿದ ಮೇಲ್ಮನವಿಯನ್ನು ವಜಾ ಮಾಡಿದ ವರಿಷ್ಠ ನ್ಯಾಯ ಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ  ಸುಪ್ರೀಂ ಕೋರ್ಟ್‌ ಪೀಠ, “ನೀವು ಪ್ರಜಾಸತ್ತೆಯನ್ನು ಸಹಿಸಿಕೊಳ್ಳಲು ಕಲಿಯಬೇಕು; ಈ ನ್ಯಾಯಾಲಯ ಮಾನಹಾನಿ ಕಾನೂನಿನ ಸಿಂಧುತ್ವನ್ನು ಎತ್ತಿ ಹಿಡಿದಿರಬಹುದು; ಹಾಗೆಂದು ಎಲ್ಲ ಕೇಸುಗಳನ್ನು ಮಾನಹಾನಿ ವರ್ಗದಡಿ ಪರಿಗಣಿಸಲಾಗದು’ ಎಂದು ಹೇಳಿತು. 

ಬಿಹಾರ ಅಧಿಕಾರಿಯ ಪುತ್ರಿಯು ಭೂ ಹಂಚಿಕೆ ಹಗರಣದಲ್ಲಿ ಶಾಮೀಲಾಗಿದ್ದಳೆಂದು ಆರೋಪಿಸಲಾಗಿತ್ತು. ಈ ವಿಷಯ ಕುರಿತ ವರದಿಯನ್ನು  2010ರಲ್ಲಿ  ಪ್ರಸಾರಿಸಿದ ಕಾರಣಕ್ಕೆ ಟಿವಿ ಪತ್ರಕರ್ತ ರಾಜದೀಪ್‌ ಸರ್‌ದೇಸಾಯ್‌ ಅವರು ಮಾನಹಾನಿ ದಾವೆಯನ್ನು ಎದುರಿಸಬೇಕು ಎಂದು ಆಕೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಳು. 

“ಮಾಧ್ಯಮಗಳಲ್ಲಿ ಕೆಲವೊಮ್ಮೆ ತಪ್ಪಾಗಿ ವರದಿಗಳಾಗಿರುವ ಸಾಧ್ಯತೆಗಳು  ಇರುತ್ತವೆ; ಆದರೆ ಅದರಿಂದ ಮಾನಹಾನಿ ಎಸಗಿದಂತಾಗುವುದಿಲ್ಲ” ಎಂದು ಅಭಿಪ್ರಾಯಪಟ್ಟ ಸುಪ್ರೀಂ ಕೋರ್ಟ್‌ “ಈ ಪ್ರಕರಣವನ್ನು ಅಲ್ಲಿಗೇ ವಿರಮಿಸಲು ಬಿಡಿ; ಅದನ್ನೇ ಸದಾ ಕಾಲ ಹಿಡಿದು ಕೂರಬೇಡಿ” ಎಂದು ಬುದ್ಧಿವಾದ ಹೇಳಿತು.

ರಾಜ್‌ದೀಪ್‌ ಸರ್‌ದೇಸಾಯ್‌ ವಿರುದ್ಧ ನೇರ ಆರೋಪಗಳ ಇಲ್ಲದಿದ್ದ ಕಾರಣಕ್ಕೆ ಅವರ ವಿರುದ್ಧದ ಮಾನಹಾನಿ ದಾವೆಯನ್ನು ವಜಾ ಮಾಡಿದ್ದ 2017ರ ಪಟ್ನಾ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಆ ಸಂದರ್ಭದಲ್ಲಿ ಸರ್‌ದೇಸಾಯ್‌ ಅವರು ಐಬಿಎನ್‌ ನೆಟ್‌ವರ್ಕ್‌ನ ಪ್ರಧಾನ ಸಂಪಾದಕರಾಗಿದ್ದರು. 

ಟಾಪ್ ನ್ಯೂಸ್

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.