ಪ್ರಾರ್ಥನೆ ಸ್ಥಳೀಯರಿಗೆ ಮಾತ್ರ
Team Udayavani, Jul 10, 2018, 6:00 AM IST
ಹೊಸದಿಲ್ಲಿ: ಆಗ್ರಾದಲ್ಲಿನ ಸ್ಥಳೀಯ ನಿವಾಸಿಗಳ ಹೊರತಾಗಿ ಹೊರಗಿನಿಂದ ಬಂದವರು ತಾಜ್ಮಹಲ್ ಆವರಣದಲ್ಲಿ ಶುಕ್ರವಾರ ನಮಾಜ್ ಮಾಡಲು ಸಾಧ್ಯವಿಲ್ಲ. ಅದು ವಿಶ್ವದ ಏಳು ಅದ್ಭುತಗಳಲ್ಲಿ ಒಂದಾಗಿದ್ದು, ಅದನ್ನು ನಾಶ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಸೋಮವಾರ ಹೇಳಿದೆ. ನ್ಯಾ.ಎ.ಕೆ.ಸಿಕ್ರಿ ಮತ್ತು ನ್ಯಾ.ಅಶೋಕ್ ಭೂಷಣ್ ಅವರನ್ನೊಳಗೊಂಡ ನ್ಯಾಯಪೀಠ ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿ, ಆಗ್ರಾ ನಗರವಾಸಿಗಳಲ್ಲದವರಿಗೆ ಪ್ರಾರ್ಥನೆ ಸಲ್ಲಿಸಲು ತಾಜ್ಮಹಲ್ ಸುತ್ತಮುತ್ತ ಇತರ ಮಸೀದಿಗಳಿದ್ದು, ಅಲ್ಲಿಗೆ ತೆರಳಿ ಪ್ರಾರ್ಥನೆ ಸಲ್ಲಿಸಬಹುದು ಎಂದಿದೆ. ಆಗ್ರಾದ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಜ.24ರಂದು ಈ ಬಗ್ಗೆ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿ ವಿಚಾರಣೆ ವೇಳೆ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಈ ಮನವಿಯನ್ನು ಪುರಸ್ಕರಿಸಲು ಸಾಧ್ಯವೇ ಇಲ್ಲ ಎಂದು ಸುಪ್ರೀಂಕೋರ್ಟ್ ಹೇಳಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ