ಜಿಎಸ್‌ಟಿ ಸ್ಲ್ಯಾಬ್ ಇಳಿಕೆ: ಜೇಟ್ಲಿ ಸುಳಿವು


Team Udayavani, Oct 2, 2017, 6:35 AM IST

Arun-Jaitley-800-D.jpg

ಫ‌ರೀದಾಬಾದ್‌: ದೇಶಾದ್ಯಂತ ಏಕರೂಪದ ತೆರಿಗೆ ಜಾರಿಗೆ ಬಂದು 3 ತಿಂಗಳುಗಳು ಕಳೆಯುತ್ತಲೇ, ಮುಂದಿನ ದಿನಗಳಲ್ಲಿ ಜಿಎಸ್‌ಟಿ (ಸರಕು ಮತ್ತು ಸೇವಾ ತೆರಿಗೆ) ಶ್ರೇಣಿಯನ್ನು ತಗ್ಗಿಸುವ ಸುಳಿವೊಂದು ಸಿಕ್ಕಿದೆ. ಈ ಸುಳಿವು ನೀಡಿರುವುದು ಬೇರ್ಯಾರೂ ಅಲ್ಲ, ಸ್ವತಃ ಕೇಂದ್ರ ಹಣಕಾಸು ಸಚಿವ ಅರುಣ್‌  ಜೇಟ್ಲಿ.

ಫ‌ರೀದಾಬಾದ್‌ನಲ್ಲಿ ರವಿವಾರ ಮಾತನಾಡಿದ ಸಚಿವರು ಇಂತಹ ಸಿಹಿಸುದ್ದಿ ನೀಡಿದ್ದಾರೆ. “ಈಗ ನಾವು ಜಿಎಸ್‌ಟಿ ಜಾರಿಯ ಆರಂಭಿಕ ಹಂತದಲ್ಲಿದ್ದೇವೆ.  ಮುಂದಿನ ದಿನಗಳಲ್ಲಿ ಆದಾಯದಲ್ಲಿ ಹೆಚ್ಚಳವಾದಂತೆ ಇನ್ನಷ್ಟು ಸುಧಾರಣ ಕ್ರಮಗಳನ್ನು ಜಾರಿ ಮಾಡುತ್ತೇವೆ. ಜತೆಗೆ, ತೆರಿಗೆ ಸ್ಲ್ಯಾಬ್ ಇಳಿಸುವ ಬಗ್ಗೆ ಚಿಂತನೆ ನಡೆಸು ತ್ತೇವೆ. ಆ ಮೂಲಕ ಸಣ್ಣ ತೆರಿಗೆದಾರರ ಹೊರೆ ತಗ್ಗಿಸಲು ಯತ್ನಿಸುತ್ತೇವೆ’ ಎಂದಿದ್ದಾರೆ ಜೇಟ್ಲಿ. ಜನಸಾಮಾನ್ಯರು ಬಳಕೆ ಮಾಡುವ ಉತ್ಪನ್ನಗಳಿಗೆ ಆದಷ್ಟು ಕಡಿಮೆ ತೆರಿಗೆ ವಿಧಿಸಬೇಕು ಎಂಬುದು ನಮ್ಮ ಇಚ್ಛೆ. ಅದಕ್ಕಾಗಿ ಎಲ್ಲ ರೀತಿಯ ಪ್ರಯತ್ನಗಳನ್ನೂ ಮಾಡುತ್ತಿದ್ದೇವೆ ಎಂದೂ ಸಚಿವರು ಹೇಳಿದ್ದಾರೆ. ಪ್ರಸ್ತುತ ಜಿಎಸ್‌ಟಿ ದರ  ಶೇ.5, 12, 18 ಮತ್ತು 28ರ ಶ್ರೇಣಿಗಳಲ್ಲಿ ನಿಗದಿಪಡಿಸಲಾಗಿದೆ.

ತೆರಿಗೆ ಕಳ್ಳರ ಪತ್ತೆಗೆ ಡಿಜಿಟಲ್‌ ಕ್ಷೇತ್ರದ ದೊಡ್ಡ ಡೀಲ್‌
ತೆರಿಗೆ ವ್ಯವಸ್ಥೆಗೆ ಮಣ್ಣೆರಚುವವರ ಪತ್ತೆ ಹಚ್ಚಲು ತಾಂತ್ರಿಕವಾಗಿ ಅತ್ಯಂತ ಸುಧಾರಿತ ಸಾಫ್ಟ್ವೇರ್‌ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಮುಂದಾಗಿದೆ. ಅದಕ್ಕಾಗಿ ಎಲ್‌ ಆ್ಯಂಡ್‌ ಟಿ ಇನ್ಫೋಟೆಕ್‌ಗೆ 653 ಕೋಟಿ ರೂ. ವೆಚ್ಚದ ಯೋಜನೆಯನ್ನು ನೀಡಿದೆ. 

ಡಿಜಿಟಲ್‌ ಪಾವತಿ ವ್ಯವಸ್ಥೆಯ ಬಗ್ಗೆ ಹೆಚ್ಚಿನ ಒತ್ತು ನೀಡಿದ ಬಳಿಕ ತೆರಿಗೆ ವಂಚನೆ ತಪ್ಪಿಸುವ ನಿಟ್ಟಿನಲ್ಲಿ ಸಮಗ್ರ ಯೋಜನೆಯೊಂದನ್ನು ಸಿದ್ಧಪಡಿಸಲಾಗಿದೆ. ದೇಶದ ಡಿಜಿಟಲ್‌ ವ್ಯವಸ್ಥೆಯಲ್ಲಿಯೇ  ಈ ವರೆಗಿನ ಅತ್ಯಂತ ದೊಡ್ಡ ಮೊತ್ತದ ಡೀಲ್‌ ಇದಾಗಿದೆ. ಎಲ್‌ ಆ್ಯಂಡ್‌ ಟಿಯ ಇನ್‌ಫೋಟೆಕ್‌ನ ಸಿಇಒ ಸಂಜಯ ಜಲೋನಾ ಭಾನುವಾರ ಈ ಮಾಹಿತಿ ನೀಡಿದ್ದಾರೆ. ತೆರಿಗೆ ವಂಚಿಸುವ ವ್ಯಕ್ತಿಯ ಪತ್ನಿ ಸೆಷೆಲ್ಸ್‌ಗೆ ಹೋಗಿ ವಿಲಾಸಿ ಪ್ರಯಾಣದ ಫೋಟೋವನ್ನು ಇನ್‌ಸ್ಟಾ ಗ್ರಾಂ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡಿ ಮಾಡಿದರೂ ಅದನ್ನು ಪತ್ತೆಹಚ್ಚುವಂಥ ವ್ಯವಸ್ಥೆ ಇದಾಗಲಿದೆ ಎಂದು ಅವರು ಹೇಳಿದ್ದಾರೆ. ಕಳೆದ ವರ್ಷ ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ)ಜತೆಗೆ ಕೆಲಸ ಮಾಡುವ ಬಗ್ಗೆ ಒಪ್ಪಂದಕ್ಕೆ ಸಹಿ ಹಾಕಿತ್ತು. ಅದರ ಜತೆಗೇ ಸಂಸ್ಥೆ ಅತ್ಯಂತ ಮಹತ್ವವಾಗಿರುವ ಈ ಯೋಜನೆಯನ್ನು ಅಭಿವೃದ್ಧಿಪಡಿಸಿ, ನಿರ್ವಹಿಸಿ ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸಲಿದೆ. 

ತೆರಿಗೆ ತಪ್ಪಿಸಿಕೊಳ್ಳುವವರ ಮೇಲೆಯೇ ನಿಗಾ ಇರಿಸುವ ಡಿಜಿಟಲ್‌ ಕ್ಷೇತ್ರದ ಹೊಸ ಯೋಜನೆ ಇದಾಗಿದೆ ಎಂದಿರುವ ಜಲೋನಾ, ಸದ್ಯ ಈ ಕ್ಷೇತ್ರದಲ್ಲಿ ಮಾಡಲಾಗಿರುವ ಹೂಡಿಕೆಗೆ ಎರಡು ವರ್ಷಗಳು ಕಳೆದ ಬಳಿಕ ಉತ್ತಮ ಆದಾಯ ಬರುವುದು ಖಚಿತವಾಗಿದೆ ಎಂದಿದ್ದಾರೆ. ಈ ನಿಟ್ಟಿನಲ್ಲಿ ಭಾರತ, ಅಮೆರಿಕ ಮತ್ತು ಐರೋಪ್ಯ ಒಕ್ಕೂಟಗಳಲ್ಲಿನ ಗ್ರಾಹಕರ ಜತೆಗೆ ಕೂಡ ಕೆಲಸ ಮಾಡಲು ಕಂಪನಿ ಉತ್ಸುಕವಾಗಿದೆ ಎಂದಿದ್ದಾರೆ.

ಟಾಪ್ ನ್ಯೂಸ್

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.