ಎಸ್‌ಸಿ, ಎಸ್‌ಟಿ ತೀರ್ಪು: ಅಧ್ಯಾದೇಶಕ್ಕೆ ನಿರ್ಧಾರ?


Team Udayavani, Apr 16, 2018, 10:20 AM IST

Supreme-Court-of-India-650.jpg

ಹೊಸದಿಲ್ಲಿ: ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಯನ್ನು ತಕ್ಷಣ ಬಂಧಿಸುವುದನ್ನು ತಡೆಯುವ ಸಂಬಂಧ ಸುಪ್ರೀಂಕೋರ್ಟ್‌ ಹೊರಡಿಸಿದ್ದ ಆದೇಶವನ್ನು ಬದಿಗೆ ತಳ್ಳಲು ಕೇಂದ್ರ ಸರಕಾರ ಅಧ್ಯಾದೇಶ ಹೊರಡಿಸುವ ಸಾಧ್ಯತೆಯಿದೆ. ಅಲ್ಲದೆ ಮೊದಲಿನ ಸ್ಥಿತಿಯನ್ನೇ ಕಾಯ್ದುಕೊಳ್ಳಲು ಇತರ ಸಾಧ್ಯತೆಗಳ ಬಗ್ಗೆಯೂ ಕೇಂದ್ರ ಸರಕಾರ ಚಿಂತನೆ ನಡೆಸಿದೆ. ಜುಲೈನಲ್ಲಿ ಆರಂಭವಾಗುವ ಸಂಸತ್‌ನ ಮುಂಗಾರು ಅಧಿವೇಶನದಲ್ಲಿ 1989ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಗೆ ತಿದ್ದುಪಡಿ ತಂದು ಮಂಡಿಸುವ ಆಯ್ಕೆಯೂ ಸರಕಾರದ ಪರಿಗಣನೆಯಲ್ಲಿದೆ ಎಂದು ಹೇಳಲಾಗಿದೆ.

ಒಂದು ವೇಳೆ ಈಗ ಅಧ್ಯಾದೇಶ ಹೊರಡಿಸಿದರೂ, ಅದನ್ನು ಮಸೂದೆಯನ್ನಾಗಿ ಪರಿವರ್ತಿಸಿ ಸಂಸತ್ತಿನಲ್ಲಿ ಮಂಡಿಸಬೇಕಾಗುತ್ತದೆ. ಸುಗ್ರೀವಾಜ್ಞೆ ಹೊರಡಿಸುವುದು ಮತ್ತು ನಂತರ ಮಸೂದೆ ಮಂಡಿಸುವ ಎರಡು ಪುನರಾವರ್ತಿತ ಕೆಲಸ ಮಾಡಬೇಕಾಗುತ್ತದೆ. ಆದರೆ ಸುಗ್ರೀವಾಜ್ಞೆಯಿಂದ ತಕ್ಷಣದ ಫ‌ಲಿತಾಂಶ ಲಭ್ಯ ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ. ಹೀಗಾಗಿ ಹೆಚ್ಚಿನ ಅಧಿಕಾರಿಗಳು ಸದ್ಯ ಅಧ್ಯಾದೇಶವನ್ನು ಹೊರಡಿಸುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಇದರಿಂದ ದೇಶಾದ್ಯಂತ ದಲಿತರಲ್ಲಿ ಭುಗಿಲೆದ್ದಿರುವ ಆಕ್ರೋಶ ತಣ್ಣಗಾಗಲಿದೆ.

ಮಾರ್ಚ್‌ 20ರಂದು ಸುಪ್ರೀಂ ಕೋರ್ಟ್‌ ನೀಡಿದ ತೀರ್ಪು ವಿರೋಧಿಸಿ, ಕಳೆದ ವಾರ ದಲಿತ ಸಂಘಟನೆಗಳು ದೇಶಾದ್ಯಂತ ಪ್ರತಿಭಟನೆ ನಡೆಸಿದ್ದವು. ದಲಿತರ ಹಕ್ಕುಗಳನ್ನು ರಕ್ಷಿಸುವಲ್ಲಿ ಸರಕಾರ ವಿಫ‌ಲವಾಗಿದೆ ಎಂದು ವಿಪಕ್ಷಗಳೂ ದೂರಿದ್ದವು. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿ, ದಲಿತರ ಮೇಲಿನ ದೌರ್ಜನ್ಯ ತಡೆಯುವ ಕಾನೂನು ಶಿಥಿಲಗೊಳ್ಳಲು ಬಿಡುವುದಿಲ್ಲ ಎಂದಿದ್ದಾರೆ. ಆದರೆ ಈ ಸಂಬಂಧ ಈವರೆಗೂ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದು ಹೇಳಲಾಗಿದೆ. ಈ ಸಂಬಂಧ ಕೇಂದ್ರ ಸರಕಾರ ಸಲ್ಲಿಸಿರುವ ಮರುಪರಿಶೀಲನೆ ಅರ್ಜಿಯನ್ನು ಆಧರಿಸಿ ನಿರ್ಧಾರ ಕೈಗೊಳ್ಳಲು ಯೋಚಿಸಲಾಗಿದೆ. 

– ಸುಪ್ರೀಂ ಆದೇಶ ಬದಿಗೆ ಸರಿಸಲು ಆಯ್ಕೆಗಳ ಹುಡುಕಾಟದಲ್ಲಿ ಸರಕಾರ
– ಎಸ್‌ಸಿ, ಎಸ್‌ಟಿ ಕಾಯ್ದೆಗೆ ತಿದ್ದುಪಡಿ ತಂದು, ಮಸೂದೆ‌ ಮಂಡಿಸಲು ಚಿಂತನೆ ಸಂಸತ್‌ ನ ಮುಂಗಾರು ಅಧಿವೇಶನದಲ್ಲೇ ಈ ಮಸೂದೆ ಮಂಡನೆ ಸಾಧ್ಯತೆ

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.