ಕೋವಿಡ್ 19 ಪ್ಯಾಕೇಜ್ನ 2ನೇ ಕಂತು: 22 ರಾಜ್ಯಗಳಿಗೆ 890 ಕೋ.ರೂ. ಬಿಡುಗಡೆ
Team Udayavani, Aug 7, 2020, 6:16 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಕರ್ನಾಟಕ ಸಹಿತ 22 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೋವಿಡ್ 19 ಪ್ಯಾಕೇಜ್ನ ಎರಡನೇ ಕಂತಿನ ಮೊತ್ತವನ್ನು ಕೇಂದ್ರ ಗುರುವಾರ ಬಿಡುಗಡೆ ಮಾಡಿದೆ.
ಪ್ಯಾಕೇಜ್ನಡಿ 890.32 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಆಯಾ ರಾಜ್ಯಗಳ ಕೋವಿಡ್ 19 ಪ್ರಕರಣಗಳಿಗೆ ಅನುಗುಣವಾಗಿ ಆರ್ಥಿಕ ನೆರವು ಹಂಚಿಕೆಯಾಗುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಕರ್ನಾಟಕ, ಛತ್ತೀಸ್ಗಢ, ಝಾರ್ಖಂಡ್, ಕೇರಳ, ಪಂಜಾಬ್, ತಮಿಳುನಾಡು, ಪಶ್ಚಿಮ ಬಂಗಾಲ ಸೇರಿದಂತೆ 20 ರಾಜ್ಯಗಳು ಎರಡನೇ ಹಂತದ ಮೊತ್ತವನ್ನು ಪಡೆದಿವೆ.
ಗುಣಮುಖ ದರ ಶೇ. 50ಕ್ಕೆ
ರಾಜ್ಯದಲ್ಲಿ ಕೋವಿಡ್ 19 ಸೋಂಕುಪೀಡಿತರ ಸಂಖ್ಯೆ ವೃದ್ಧಿಸುವುದರ ಜತೆಗೆ ಗುಣಮುಖರಾದವರ ಸಂಖ್ಯೆಯೂ ಹೆಚ್ಚಿದೆ. ಚೇತರಿಸಿಕೊಂಡವರ ಒಟ್ಟು ಸಂಖ್ಯೆ 80 ಸಾವಿರ ಗಡಿ ದಾಟುವ ಮೂಲಕ ಗುಣಮುಖ ದರ ಶೇ.50ಕ್ಕೆ ಏರಿರುವುದು ಸಮಾಧಾನಕರ ಅಂಶ. ಜು. 20ಕ್ಕೆ ರಾಜ್ಯದಲ್ಲಿ ಗುಣಮುಖ ದರ ಶೇ.35 ಇತ್ತು. ಅನಂತರ ಚೇತರಿಸಿಕೊಳ್ಳುವವರ ಸಂಖ್ಯೆ ನಿರಂತರ ಏರುತ್ತ ಸಾಗಿತು.
ಉಡುಪಿ: 217, ದ.ಕ.: 173 ಪಾಸಿಟಿವ್
ಉಡುಪಿ ಜಿಲ್ಲೆಯಲ್ಲಿ ಗುರುವಾರ 217 ಮಂದಿಗೆ ಪಾಸಿಟಿವ್ ಬಂದಿದ್ದು, ನಾಲ್ಕು ಸಾವು ಸಂಭವಿಸಿವೆ. ದ.ಕ.ದಲ್ಲಿ 173 ಮಂದಿಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದರೆ 11 ಮಂದಿ ಮೃತಪಟ್ಟಿದ್ದಾರೆ. ಕೊಡಗಿನಲ್ಲಿ 25, ಕಾಸರಗೋಡಿನಲ್ಲಿ 153 ಪಾಸಿಟಿವ್ ವರದಿಯಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
MUST WATCH
ಹೊಸ ಸೇರ್ಪಡೆ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ
Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ
Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ