ಜಮ್ಮು-ಕಾಶ್ಮೀರ; ಭದ್ರತಾ ಪಡೆಗಳ ಎನ್ ಕೌಂಟರ್ ಗೆ ಜೈಶ್ ಉಗ್ರ ಮುಖಂಡ ಸಾವು
ಉಗ್ರರು ಠಿಕಾಣಿ ಹೂಡಿದ್ದಾರೆಂಬ ಖಚಿತ ಮಾಹಿತಿ ಮೇರಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿತ್ತು.
Team Udayavani, Jan 24, 2020, 3:19 PM IST
ಜಮ್ಮು-ಕಾಶ್ಮೀರ: ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್ ಕೌಂಟರ್ ನಲ್ಲಿ ಜೈಶ್ ಎ ಮೊಹಮ್ಮದ್ ಸಂಘಟನೆಯ ಮುಖಂಡ ಸಾವನ್ನಪ್ಪಿದ್ದು, ಹಲವು ಯೋಧರು ಗಾಯಗೊಂಡಿರುವ ಘಟನೆ ಶುಕ್ರವಾರ ನಸುಕಿನ ವೇಳೆ ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ.
ವರದಿಯ ಪ್ರಕಾರ, ಪುಲ್ವಾಮಾದ ಝೈನ್ ಟ್ರಾಗ್ ಗ್ರಾಮದಲ್ಲಿ ಜೈಶ್ ಎ ಮೊಹಮ್ಮದ್ ಉಗ್ರಗಾಮಿ ಸಂಘಟನೆಯ ಉಗ್ರರು ಠಿಕಾಣಿ ಹೂಡಿದ್ದಾರೆಂಬ ಖಚಿತ ಮಾಹಿತಿ ಮೇರಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿತ್ತು. ಆದರೆ ಸುಳಿವು ಸಿಕ್ಕ ಉಗ್ರರು ಕಾರ್ಯಾಚರಣೆ ಪ್ರದೇಶದಿಂದ ದೂರ ತೆರಳಿದ್ದರು ಎಂದು ವರದಿ ವಿವರಿಸಿದೆ.
ಭದ್ರತಾ ಪಡೆಗಳು ಶೋಧ ಕಾರ್ಯ ಮುಂದುವರಿಸಿದ ಸಂದರ್ಭದಲ್ಲಿ ನಾಗನ್ದಂರ್ ಪ್ರದೇಶದ ಅರಣ್ಯದಲ್ಲಿ ಉಗ್ರರು ಇದ್ದಿರುವುದನ್ನು ಪತ್ತೆ ಹಚ್ಚಿದ್ದರು. ಈ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆ ನಡೆಸಿದ ಎನ್ ಕೌಂಟರ್ ಗೆ ಜೈಶ್ ಮುಖಂಡ ಸಾವನ್ನಪ್ಪಿದ್ದು, ಶಸ್ತ್ರಾಸ್ತ್ರ, ಮದ್ದುಗುಂಡು ವಶಪಡಿಸಿಕೊಂಡಿರುವುದಾಗಿ ವರದಿ ತಿಳಿಸಿದೆ.
ಮೃತ ಉಗ್ರನನ್ನು ವಿದೇಶಿ ಉಗ್ರ ಅಬು ಸೈಫುಲ್ಲಾ ಅಲಿಯಾಸ್ ಅಬು ಖ್ವಾಸಿಂ ಎಂದು ಗುರುತಿಸಲಾಗಿದೆ. ಇನ್ನುಳಿದ ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’