ಎನ್ ಕೌಂಟರ್ ವೇಳೆ ಉಗ್ರರು ಪರಾರಿ: ಜಮ್ಮುವಿನಲ್ಲಿ ಕಟ್ಟೆಚ್ಚರ
Team Udayavani, Aug 17, 2022, 5:38 PM IST
ಜಮ್ಮು : ರಜೌರಿ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ವೇಳೆ 2 ರಿಂದ 3 ಮಂದಿ ಉಗ್ರರು ಪರಾರಿಯಾಗಿದ್ದು, ಪ್ರದೇಶದಲ್ಲಿ ಭಾರಿ ಕಟ್ಟೆಚ್ಚರ ವಹಿಸಲಾಗಿದೆ.
ಉಗ್ರರ ಇರುವಿಕೆಯ ಖಚಿತ ಮಾಹಿತಿಯ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆಗೆ ಇಳಿದಿದ್ದು, ಉಗ್ರರು ಭದ್ರತಾ ಪಡೆಗಳತ್ತ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಭಾರಿ ಮಳೆ ಮತ್ತು ಪ್ರತೀಕೂಲ ವಾತಾವರಣವಿದ್ದ ಕಾರಣ ಉಗ್ರರನ್ನು ಸದೆಬಡಿಯಲು ಸಾಧ್ಯವಾಗಲಿಲ್ಲ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ಹೊಸ ದಾಳಿಗಳನ್ನು ಮಾಡಲು ಯತ್ನಿಸುತ್ತಿರುವ ಉಗ್ರರ ಪತ್ತೆಗಾಗಿ ಪಡೆಗಳು ಈಗ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು,ಮಂಗಳವಾರ ರಜೌರಿ ನಗರದ ಸುತ್ತಲೂ, ವಿಶೇಷವಾಗಿ ಭದ್ರತಾ ಪಡೆಗಳ ಸುತ್ತಲಿನ ಇಬ್ಬರು ಶಂಕಿತ ವ್ಯಕ್ತಿಗಳ ಚಲನವಲನದ ದೃಷ್ಟಿಯಿಂದ ಭದ್ರತಾ ಪಡೆಗಳು ಮತ್ತು ಪೊಲೀಸರು ಹೆಚ್ಚಿನ ಎಚ್ಚರಿಕೆ ವಹಿಸಿದ್ದಾರೆ. ಸಿಸಿಟಿವಿ ಫೂಟೇಜ್ನಲ್ಲಿ ಒಬ್ಬ ಚೀಲವನ್ನು ಹೊತ್ತೊಯ್ಯುವುದು ಸೇರಿದಂತೆ ಇಬ್ಬರು ಶಂಕಿತ ವ್ಯಕ್ತಿಗಳನ್ನು ಏಜೆನ್ಸಿಗಳು ಗುರುತಿಸಿವೆ ಎಂದು
ಆಗಸ್ಟ್ 11 ರಂದು, ಇಬ್ಬರು ಭಯೋತ್ಪಾದಕರು ರಜೌರಿಯ ಸೇನಾ ಶಿಬಿರದ ಮೇಲೆ ದಾಳಿ ಮಾಡಿದ್ದರು, ಆತ್ಮಹತ್ಯಾ ದಾಳಿಯಲ್ಲಿ ನಾಲ್ವರು ಸೈನಿಕರು ಹುತಾತ್ಮರಾಗಿದ್ದರು, ಇದು ಮೂರು ವರ್ಷಗಳ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ‘ಫಿದಾಯೀನ್’ ಮರಳುವಿಕೆಯನ್ನು ಸೂಚಿಸಿತ್ತು. ಪಾಕ್ ಮೂಲದ ಜೆಇಎಂ ಸಂಘಟನೆಯ ಉಗ್ರರೆಂದು ನಂಬಲಾದ ಇಬ್ಬರೂ ಭಯೋತ್ಪಾದಕರನ್ನು ನಾಲ್ಕು ಗಂಟೆಗಳ ಕಾಲ ನಡೆದ ಗುಂಡಿನ ಚಕಮಕಿಯ ನಂತರ ಹೊಡೆದುರುಳಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ