ಆಪರೇಶನ್ ಬ್ಲೂ ಸ್ಟಾರ್ ವರ್ಷಾಚರಣೆ:ಸ್ವರ್ಣ ಮಂದಿರಕ್ಕೆ ಬಿಗಿ ಭದ್ರತೆ
Team Udayavani, Jun 6, 2018, 11:53 AM IST
ಅಮೃತ್ಸರ : ಆಪರೇಶನ್ ಬ್ಲೂ ಸ್ಟಾರ್ 34ನೇ ವರ್ಷಾಚರಣೆಯ ಪ್ರಯುಕ್ತ ಮುನ್ನೆಚ್ಚರಿಕೆಯ ಭದ್ರತಾ ಕ್ರಮವಾಗಿ ಇಂದು ನಸುಕಿನಿಂದಲೇ ಸಿಕ್ಖರ ಪವಿತ್ರ ದೇವಾಲಯವಾಗಿರುವ ಇಲ್ಲಿನ ಸ್ವರ್ಣ ಮಂದಿರಕ್ಕೆ ಬಿಗಿ ಭದ್ರತೆಯನ್ನು ಏರ್ಪಡಿಸಲಾಗಿದೆ.
ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸುವ ಸಲುವಾಗಿ ಸ್ಥಳೀಯ ಪೊಲೀಸ್ ಮತ್ತು ಕ್ಷಿಪ್ರ ಕಾರ್ಯ ಪಡೆ (ಆರ್ಎಎಫ್) ಸಿಬಂದಿಗಳನ್ನು ಸ್ವರ್ಣ ಮಂದಿರದ ಸುತ್ತಮುತ್ತ ಮತ್ತು ಆಯಕಟ್ಟಿನ ಎಲ್ಲ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ. ಸ್ವರ್ಣ ಮಂದಿರದೆಡೆಗೆ ಸಾಗಿ ಬರುವ ಎಲ್ಲ ವಾಹನಗಳನ್ನು ಪೊಲೀಸರು ತಪಾಸಿಸುತ್ತಿದ್ದಾರೆ.
ಸ್ವರ್ಣ ಮಂದಿರಲ್ಲಿ ಅಡಗಿಕೊಂಡಿದ್ದ ಜರ್ನೈಲ್ ಸಿಂಗ್ ಭಿಂದ್ರನ್ವಾಲೆ ಸಹಿತ ಖಾಲಿಸ್ಥಾನ ಬಂಡುಕೋರರನ್ನು ಹೊರ ಹಾಕಲು 1984ರ ಜೂನ್ 1 ಮತ್ತು ಜೂನ್ 8ರಂದು ಭಾರತೀಯ ಸೇನಾ ಪಡೆಯನ್ನು ಬಳಸಿಕೊಂಡು ಆಪರೇಶನ್ ಬ್ಲೂಸ್ಟಾರ್ ಕಾರ್ಯಾಚರಣೆಯನ್ನು ನಡೆಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ