ದಾಳಿ ಸಾಧ್ಯತೆ ಹಿನ್ನಲೆ:ಬಿಂದು,ಕನಕದುರ್ಗ ನಿವಾಸಕ್ಕೆ ಬಿಗಿ ಭದ್ರತೆ
Team Udayavani, Jan 2, 2019, 7:37 AM IST
ತಿರುವನಂತಪುರಂ: ಶಬರಿ ಮಲೆ ದೇಗುಲವನ್ನು ಬುಧವಾರ ಪ್ರವೇಶಿಸಿದ ಮಹಿಳೆಯರಾದ ಬಿಂದು ಮತ್ತು ಕನಕದುರ್ಗ ಅವರ ನಿವಾಸಗಳಿಗೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದ್ದು, ಇಬ್ಬರನ್ನು ಸುರಕ್ಷಿತ ಸ್ಥಳದಲ್ಲಿರಿಸಲಾಗಿದೆ.
ಅಂಗಮಾಲಿ ಪ್ರದೇಶದ ಮನೆಯೊಂದರಲ್ಲಿ ತಂಗಿದ್ದ ಇಬ್ಬರನ್ನು ಪೊಲೀಸ್ ಭದ್ರತೆಯೊಂದಿಗೆ ತ್ರಿಶ್ಯೂರ್ ಕಡೆಗೆ ಕರೆದೊಯ್ದು ಸುರಕ್ಷಿತವಾಗಿರಿಸಲಾಗಿದೆ ಎಂದು ತಿಳಿದು ಬಂದಿದೆ.
ಕೋಝಿಕೋಡ್ನ ಕೊಯಿಲಾಂಡಿಯಲ್ಲಿರುವ ಬಿಂದು ನಿವಾಸ ಮತ್ತು ಮಲಪ್ಪುರಂನಲ್ಲಿರುವ ಅಂಗಡಿಪ್ಪುರಂನಲ್ಲಿರುವ ಕನಕದುರ್ಗ ನಿವಾಸದ ಮೇಲೆ ದಾಳಿ ನಡೆಸುವ ಎಲ್ಲಾ ಸಾಧ್ಯತೆಗಳಿರುವ ಹಿನ್ನಲೆಯಲ್ಲಿ ಕಾವಲಿಗೆ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ.
ಅಯ್ಯಪ್ಪ ಭಕ್ತರು ಮತ್ತು ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಆಕ್ರೋಶ ಹೊರ ಹಾಕುತ್ತಿದ್ದು, ಸರಕಾರ, ಪೊಲೀಸರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್