153 ರೂ.ಗೆ 100 ಚಾನೆಲ್‌ ಆಯ್ಕೆ!​​​​​​​


Team Udayavani, Jan 15, 2019, 12:30 AM IST

tv.jpg

ನವದೆಹಲಿ: ಟಿವಿ ಚಾನೆಲ್‌ಗ‌ಳ ಆಯ್ಕೆ ವಿಚಾರದಲ್ಲಿ ಕಳೆದ ಕೆಲವು ದಿನಗಳಿಂದ ಇದ್ದ ಗೊಂದಲ ಈಗ ನಿವಾರಣೆಯ ಹಂತ ತಲುಪಿದೆ. ಟೆಲಿಕಾಂ ನಿಯಂತ್ರಣ ಪ್ರಾಧಿಕಾರ ಕೈಗೊಂಡ ಹೊಸ ನಿರ್ಧಾರ ಟಿವಿ ವೀಕ್ಷಕರಿಗೆ ಭಾರಿ ಅನುಕೂಲ ಮಾಡಿಕೊಟ್ಟಿದೆ. 

ಈ ಮೊದಲಿದ್ದಂತೆ 100 ಉಚಿತ ಚಾನೆಲ್‌ಗ‌ಳನ್ನು 130 ರೂ. ದರದಲ್ಲಿ ಆಯ್ಕೆ ಮಾಡಿಕೊಳ್ಳುವ ಅವಕಾಶದ ಬದಲಿಗೆ, 100 ಉಚಿತ ಅಥವಾ ಪಾವತಿ ಸಹಿತ ಚಾನೆಲ್‌ಗ‌ಳನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶವನ್ನು ಟಿವಿ ವೀಕ್ಷಕರಿಗೆ ಟ್ರಾಯ್‌ ನೀಡಿದೆ. ಇದಕ್ಕೆ ಜಿಎಸ್‌ಟಿ ಸಹಿತ 153 ರೂ. ಪಾವತಿ ಮಾಡಬೇಕಾಗುತ್ತದೆ.

ಸದ್ಯದ ನಿಯಮದ ಪ್ರಕಾರ 100 ಉಚಿತ ಚಾನೆಲ್‌ಗ‌ಳನ್ನು 130 ರೂ. ದರದಲ್ಲಿ ಪಡೆಯಲು ಅವಕಾಶ ಕಲ್ಪಿಸಲಾಗಿತ್ತು. ಅದರ ನಂತರದಲ್ಲಿ ಪಾವತಿ ಚಾನೆಲ್‌ಗ‌ಳನ್ನು ಪಡೆಯಲು ಪ್ರತಿ ಚಾನೆಲ್‌ಗೆ ಹೆಚ್ಚುವರಿ ಹಣ ತೆರಬೇಕಾಗಿತ್ತು. ಪಾವತಿ ಚಾನೆಲ್‌ಗೆ 25 ಪೈಸೆಯಿಂದ 24 ರೂ.ವರೆಗೂ ದರವಿತ್ತು. ಇದರಿಂದಾಗಿ ಮಾಸಿಕ ಟಿವಿ ವೀಕ್ಷಣೆ ಬಿಲ್‌ ಜಾಸ್ತಿಯಾಗುವ ಆತಂಕ ವೀಕ್ಷಕರಿಗೆ ಎದುರಾಗಿತ್ತು. ಆದರೆ ಹಲವು ಸುತ್ತಿನಲ್ಲಿ ಟಿವಿ ವಾಹಿನಿ ಸಂಸ್ಥೆಗಳು, ಕೇಬಲ್‌ ಹಾಗೂ ಡಿಟಿಎಚ್‌ ಕಂಪನಿಗಳ ಜೊತೆ ಮಾತುಕತೆ ನಡೆಸಿದ ಟ್ರಾಯ್‌ ನಿಯಮಕ್ಕೆ ಪರಿಷ್ಕರಣೆ ಮಾಡಿದೆ. ಜ.31ರೊಳಗೆ ಇದನ್ನು ಪಡೆದುಕೊಳ್ಳಬೇಕಾಗಿದೆ. 

ಇದರೊಂದಿಗೆ ಟ್ರಾಯ್‌ ಕೈಗೊಂಡ ಇನ್ನೊಂದು ಪ್ರಮುಖ ನಿರ್ಧಾರವೆಂದರೆ ಯಾವುದೇ ಚಾನೆಲ್‌ಗೆ ದರವು 19 ರೂ. ಅನ್ನು ಮೀರುವಂತಿಲ್ಲ. ಈ ಹಿಂದೆ 24 ರೂ.ಗಳವರೆಗೂ ಚಾನೆಲ್‌ಗೆ ದರ ನಿಗದಿಪಡಿಸಲಾಗಿತ್ತು.

ಏನಿದು ಹೊಸ ನಿಯಮ?
ಜಿಎಸ್‌ಟಿ ಸೇರಿದಂತೆ ಮಾಸಿಕ 153.40 ರೂ.ಗೆ ಜನರು 100 ಚಾನೆಲ್‌ಗ‌ಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದ್ದು, ಈ 100 ಚಾನೆಲ್‌ಗ‌ಳಲ್ಲಿ ಪಾವತಿ ಚಾನೆಲ್‌ಗ‌ಳೂ ಇರಬಹುದು. ಆದರೆ ಆಯ್ಕೆ ಮಾಡಿದ ಚಾನೆಲ್‌ಗ‌ಳ ದರವು 130 ರೂ. ಅನ್ನು ಮೀರುವಂತಿಲ್ಲ. ಅಂದರೆ 13 ರೂ. ಬೆಲೆಯ 10 ಚಾನೆಲ್‌ಗ‌ಳನ್ನಷ್ಟೇ ಗ್ರಾಹಕರು ಆಯ್ಕೆ ಮಾಡಿಕೊಳ್ಳಬಹುದು. ಇದೇ 130 ರೂ.ಗಳಲ್ಲಿ ಗ್ರಾಹಕರು ತಮಗೆ ಇಷ್ಟವಾದ ಪ್ಯಾಕ್‌ಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಆದರೆ ಎಚ್‌ಡಿ ಚಾನೆಲ್‌ಗ‌ಳ ಬಗ್ಗೆ ಟ್ರಾಯ್‌ ತನ್ನ ಪ್ರಕಟಣೆಯಲ್ಲಿ ಯಾವುದೇ ಮಾಹಿತಿ ನೀಡಿಲ್ಲ. ಒಂದು ಮೂಲದ ಪ್ರಕಾರ ಒಂದು ಎಚ್‌ಡಿ ಚಾನೆಲ್‌ ಅನ್ನು ಎರಡು ಎಸ್‌ಡಿ ಚಾನೆಲ್‌ ಎಂದು ಸಂಖ್ಯೆಯ ಆಧಾರದಲ್ಲಿ ಲೆಕ್ಕ ಹಾಕಲಾಗುತ್ತದೆ. ಆದರೆ ಇನ್ನೊಂದು ಮೂಲದ ಪ್ರಕಾರ ಈ 130 ರೂ. ಒಳಗೆ ಕೇವಲ ಎಸ್‌ಡಿ ಚಾನೆಲ್‌ ಮಾತ್ರ ಆಯ್ಕೆ ಮಾಡಿಕೊಳ್ಳಬಹುದಾಗಿದ್ದು, ಎಚ್‌ಡಿ ಚಾನೆಲ್‌ಗೆ ಹೆಚ್ಚುವರಿ ಪಾವತಿ ಮಾಡಬೇಕಿರುತ್ತದೆ.

ಸದ್ಯ ಕನ್ನಡದ ಎಚ್‌ಡಿ ಚಾನೆಲ್‌ಗ‌ಳನ್ನು ಹೊರತುಪಡಿಸಿ ಎಲ್ಲ ಪಾವತಿ ಚಾನೆಲ್‌ಗ‌ಳನ್ನು ಲೆಕ್ಕ ಹಾಕಿದರೆ 137 ರೂ. ಆಗಲಿದ್ದು, 15 ಚಾನೆಲ್‌ಗ‌ಳು ಲಭ್ಯವಾಗಲಿವೆ. ಉಳಿದ 85 ಉಚಿತ ಚಾನೆಲ್‌ಗ‌ಳನ್ನು ಗ್ರಾಹಕರು ಆಯ್ಕೆ ಮಾಡಿಕೊಳ್ಳಬಹುದಾಗಿದೆ.

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.