ಸ್ವಯಂ ರಕ್ಷಣೆಯೇ ಮೂಲ ಮಂತ್ರವಾಗಲಿ ; ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕರೆ


Team Udayavani, Jun 29, 2020, 9:07 AM IST

ಸ್ವಯಂ ರಕ್ಷಣೆಯೇ ಮೂಲಮಂತ್ರವಾಗಲಿ ; ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕರೆ

ಮನ್‌ ಕೀ ಬಾತ್‌ನಲ್ಲಿ ಮಾತನಾಡಿದ ಪ್ರಧಾನಿ
ಲಾಕ್‌ಡೌನ್‌ಗಿಂತಲೂ ಸ್ವಯಂ ರಕ್ಷಣೆಯೇ ಪ್ರಧಾನ ಅಸ್ತ್ರ
ದುಡಿಮೆಯ ಜೊತೆಗೆ ದೇಶದ ಆರ್ಥಿಕತೆಯನ್ನೂ ಬೆಳೆಸಬೇಕು
ದೇಶದ ಜನತೆಗೆ ಪ್ರಧಾನಿಯ ಕರೆ

ಹೊಸದಿಲ್ಲಿ: “”ಮಾನವನ ಅಸ್ತಿತ್ವಕ್ಕೆ ಸವಾಲೊಡ್ಡಿ­ರುವ ಕೋವಿಡ್ ನ್ನು ಮಣಿಸುವುದೆಂದರೆ ಲಾಕ್‌ಡೌನ್‌ ಮಾಡಿಕೊಂಡು ಮನೆಯಲ್ಲಿ ಕುಳಿತುಕೊಳ್ಳುವುದಲ್ಲ… ಬದಲಿಗೆ, ಸ್ವಯಂ ರಕ್ಷಣೆಯನ್ನು ಮಾಡಿಕೊಳ್ಳುತ್ತಲೇ ನಾವು ದಿನಂಪ್ರತಿ ಈ ಪಿಡುಗಿನ ಜೊತೆಗೆ ಹೋರಾಡ­ಬೇಕಿದೆ” ಎಂದು ಪ್ರಧಾನಿ ನರೇಂದ್ರ ಮೋದಿ, ದೇಶಬಾಂಧವರಿಗೆ ಕರೆ ನೀಡಿದ್ದಾರೆ.

ರವಿವಾರದಂದು, ಆಕಾಶವಾಣಿಯಲ್ಲಿ ಮೂಡಿಬರುವ ತಮ್ಮ ಮಾಸಿಕ ಕಾರ್ಯ­ಕ್ರಮವಾದ “ಮನ್‌ ಕೀ ಬಾತ್‌’ನ 66ನೇ ಸಂಚಿಕೆಯಲ್ಲಿ ಅವರು ಮಾತನಾಡಿ, “ಅನ್‌ಲಾಕ್‌ ಘಟ್ಟದಲ್ಲಿ ದೇಶದ ಪ್ರತಿಯೊಬ್ಬರು ಎರಡು ಅಂಶಗಳ ಮೇಲೆ ಹೆಚ್ಚಿನ ಗಮನ ಕೊಡಬೇಕಿದೆ. ಒಂದು – ಕೊರೊನಾ ವೈರಸ್‌ ವಿರುದ್ಧ ಹೋರಾಡುವುದು ಹಾಗೂ ಎರಡನೆ­ಯದ್ದು – ದೇಶದ ಆರ್ಥಿಕತೆ ಬೆಳೆಸುವುದು. ಲಾಕ್‌ಡೌನ್‌ ಅವಧಿಯಲ್ಲಿ ನಾವೆಷ್ಟು ಹುಷಾ­ರಾಗಿದ್ದೆವೋ ಅದಕ್ಕಿಂತ ಹೆಚ್ಚು ಹುಷಾರು­ತನವನ್ನು ನಾವು ಅನ್‌ಲಾಕ್‌ ಅವಧಿಯಲ್ಲಿ ಪಾಲಿಸಬೇಕಿದೆ. ಅದಕ್ಕಾಗಿ, ವ್ಯಕ್ತಿಗಳ ನಡುವೆ ಕನಿಷ್ಟ 2 ಅಡಿಗಳ ಅಂತರ ಕಾಪಾಡಿಕೊಳ್ಳ­ಬೇಕಿರುತ್ತದೆ. ಹಾಗೆಯೇ, ಮಾಸ್ಕ್ ಗಳನ್ನು ಧರಿಸುವುದರ ಜೊತೆಗೆ ಎಲ್ಲಾ ರೀತಿಯ ಮುನ್ನೆಚ್ಚರಿಕೆಗಳನ್ನು ಪಾಲಿಸಬೇಕಿದೆ. ಇದ್ಯಾವು­ದನ್ನೂ ಪಾಲಿಸದೇ ಇದ್ದರೆ, ನಿಮ್ಮ ಕುಟುಂಬ­ದವರನ್ನು, ನಿಮ್ಮ ಮನೆಯ ಮಕ್ಕಳು, ಹಿರಿಯನ್ನು ನೀವೇ ತೊಂದರೆಗೆ ಒಳಪಡಿಸಿ­ದಂತಾಗುತ್ತದೆ” ಎಂದು ತಿಳಿಸಿದರಲ್ಲದೆ, “”ದೇಶದ ಎಲ್ಲಾ ವಾಸಿಗಳೂ ಎಲ್ಲಾ ರೀತಿಯ ಮುನ್ನೆಚ್ಚರಿಕೆಗಳನ್ನು ಪಾಲಿಸಬೇಕು. ನಿಮ್ಮ ಬಗ್ಗೆ ನಿಮ್ಮ ಕುಟುಂಬದವರ ಬಗ್ಗೆ ಕಾಳಜಿ ವಹಿಸಬೇಕು” ಎಂದು ಕರೆ ನೀಡಿದರು.

“”ದೇಶವಾಸಿಗಳು 2020ನೇ ವರ್ಷ ಯಾವಾಗ ಮುಗಿಯುತ್ತದೋ ಎಂದು ಲೆಕ್ಕ­ಹಾಕು­ತ್ತಿದ್ದಾರೆ. ಈ ವರ್ಷ ಕೊರೊನಾ ಸೇರಿ­ದಂತೆ ಹಲವಾರು ಸವಾಲುಗಳನ್ನು ನಾವು ಎದುರಿಸಿದ್ದೇವೆ. ಕೆಲವು ದಿನಗಳ ಹಿಂದೆ ಅಂಫಾನ್‌, ನಿಸರ್ಗ್‌ ಎಂಬ ಚಂಡಮಾರುತ­ಗಳನ್ನು ಎದುರಿಸಿದೆವು. ಹಲವಾರು ರಾಜ್ಯ­ಗಳಲ್ಲಿ ರೈತರು ಬೆಳ ಭಕ್ಷಕ ಮಿಡತೆಗಳ ಕಾಟ ಎದುರಿಸಿದರು. ಈಗಷ್ಟೇ ಅಲ್ಲ, ನಮ್ಮ ದೇಶ ಇಂಥ ಹಲವಾರು ಸವಾಲುಗಳನ್ನು ಎದುರಿಸಿ­ರುವುದಾಗಿ ನಮ್ಮ ಇತಿಹಾಸ ಹೇಳುತ್ತದೆ. ಹಲವಾರು ಸೋಲುಗಳನ್ನು ಯಶಸ್ಸಿನ ಸೋಪಾನಗಳಾಗಿ ನಾವು ಬದಲಾಯಿಸಿ­ಕೊಂಡಿದ್ದೇವೆ. ಅದೇ ತೆರನಾಗಿ, ಕೊರೊನಾ ಎಂಬ ಹೊಸ ಸವಾಲನ್ನೂ ನಾವು ಮೆಟ್ಟುವ ಸಾಧ್ಯತೆಗಳಿವೆ” ಎಂದು ಪ್ರಧಾನಿ ತಿಳಿಸಿದ್ದಾರೆ.

ಮೇ 30ರಂದು, ಲಾಕ್‌ಡೌನ್‌ 5.0 ಮುಕ್ತಾ­ಯವಾಗಿದ್ದ ಹಿನ್ನೆಲೆಯಲ್ಲಿ ಜೂ. 1ರಿಂದ ಅನ್‌ಲಾಕ್‌ ಆರಂಭವಾಗಿದ್ದು, ಜೂ. 30ರವರೆಗೆ ಮುಂದುವರಿಯಲಿದೆ. ಈ ಹಂತದಲ್ಲಿ ಕೇವಲ ಕಂಟೈನ್‌ಮೆಂಟ್‌ ಝೋನ್‌ಗಳಲ್ಲಿ ಮಾತ್ರ ಸಂಪೂರ್ಣ ಲಾಕ್‌ಡೌನ್‌ ಜಾರಿಯಲ್ಲಿದೆ. ಉಳಿದೆಡೆ ಹಲವರು ನಿರ್ಬಂಧಗಳನ್ನು ಸರಳಗೊಳಿಸಲಾಗಿದೆ. ಜೂ. 17ರಂದು ಎಲ್ಲಾ ಮುಖ್ಯಮಂತ್ರಿಗಳ ಸಭೆ ನಡೆಸಿದ್ದ ಪ್ರಧಾನಿ ಮೋದಿ, ಜೂ. 30ರ ನಂತರ ಅನ್‌ಲಾಕ್‌ 2.0ನಲ್ಲಿ ಕೈಗೊಳ್ಳಬೇಕಾದ ನಿರ್ಧಾ­ರಗಳ ಬಗ್ಗೆ ಚರ್ಚಿಸಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.