ಕರ್ನಾಟಕದ ಮಾಜಿ ರಾಜ್ಯಪಾಲ, ಹಿರಿಯ ಕಾಂಗ್ರೆಸ್ ಮುಖಂಡ ಹಂಸರಾಜ್ ಭಾರಧ್ವಜ್ ನಿಧನ
Team Udayavani, Mar 8, 2020, 9:15 PM IST
ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಕಾನೂನು ಸಚಿವ ಹಂಸರಾಜ್ ಭಾರಧ್ವಜ್ ಅವರು ಇಂದು ನಿಧನ ಹೊಂದಿದ್ದಾರೆ. ಭಾರಧ್ವಜ್ ಅವರು 2009 ರಿಂದ 2014ರವರೆಗೆ ಕರ್ನಾಟಕದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು.
ಭಾರಧ್ವಜ್ ಅವರಿಗೆ 82 ವರ್ಷ ವಯಸ್ಸಾಗಿತ್ತು. ಕರ್ನಾಟಕ ರಾಜ್ಯಪಾಲರಾಗಿದ್ದ ಸಂದರ್ಭದಲ್ಲಿ ಹಂಸರಾಜ್ ಭಾರಧ್ವಜ್ ಅವರು ಹೆಚ್ಚುವರಿಯಾಗಿ ಕೇರಳ ರಾಜ್ಯದ ರಾಜ್ಯಪಾಲ ಜವಾಬ್ದಾರಿಯನ್ನೂ ಸಹ ನಿರ್ವಹಿಸುತ್ತಿದ್ದರು.
1937ರಲ್ಲಿ ಅಂದಿನ ಬ್ರಿಟಿಷ್ ಆಡಳಿತದಲ್ಲಿ ಪಂಜಾಬ್ ನ ಭಾಗವಾಗಿದ್ದ ಮತ್ತು ಇದೀಗ ಹರ್ಯಾಣ ರಾಜ್ಯದಲ್ಲಿರುವ ರೋಹ್ಟಕ್ ನ ಗಹ್ರಿ ಸಂಪ್ಲಾದಲ್ಲಿ ಜನಿಸಿದ್ದರು. ಭಾರಧ್ವಜ್ ಅವರು 1982ರಲ್ಲಿ ರಾಜ್ಯ ಸಭೆಗೆ ಆಯ್ಕೆಯಾಗಿದ್ದರು. 1984ರಿಂದ 1989ರವರೆಗೆ ಅವರು ಕಾನೂನು ಮತ್ತು ನ್ಯಾಯಿಕ ಸಚಿವಾಲಯದಲ್ಲಿ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. 1988ರಲ್ಲಿ ಭಾರಧ್ವಜ್ ಅವರು ರಾಜ್ಯಸಭೆಗೆ ಪುನರಾಯ್ಕೆಗೊಂಡಿದ್ದರು.
2004 ರಿಂದ 2009ರವರೆಗೆ ಮನಮೋಹನ್ ಸಿಂಗ್ ಸಚಿವ ಸಂಪುಟದಲ್ಲಿ ಕಾನೂನು ಮತ್ತು ನ್ಯಾಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ಅವರು ಗ್ರಾಮ ನ್ಯಾಯಾಲಯ ಎಂಬ ಹೊಸ ಪರಿಕಲ್ಪನೆಯನ್ನು ಪರಿಚಯಿಸಿದ್ದರು.
Hans Raj Bhardwaj, former Governor of Karnataka and former Union Law Minister, passed away today. pic.twitter.com/SW3srPxetO
— ANI (@ANI) March 8, 2020
ನಾನು ಕಾನೂನು ಸಚಿವನಾಗಿ ಕಾರ್ಯ ನಿರ್ವಹಿಸಿದಾಗ ರಾಜ್ಯಪಾಲರಾಗಿದ್ದ ಶ್ರೀ ಭಾರದ್ವಾಜ್ ರವರನ್ನು ಸಾಕಷ್ಟು ಬಾರಿ ಭೇಟಿ ಮಾಡುವ ಅವಕಾಶಗಳು ಸಿಕ್ಕಿದ್ದವು.
ಅವರು ಬಹಳ ಓದಿಕೊಂಡಿದ್ದರು.ಕೇಂದ್ರದಲ್ಲಿ ಕಾನೂನು ಸಚಿವರಾಗಿ ಸಹ ಕಾರ್ಯ ನಿರ್ವಹಿಸಿದ್ದರು.
ನಮ್ಮ ಸರ್ಕಾರದ ಜೊತೆ ಎಂದೂ ಸಹಮಧುರ ಸಂಬಂಧವಿರಲಿಲ್ಲ.
ಅವರ ಆತ್ಮಕ್ಕೆ ಸದ್ಗತಿ ದೊರಕಲಿ— S.Suresh Kumar, Minister – Govt of Karnataka (@nimmasuresh) March 8, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ
Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್
Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ
CSIR: ಪ್ರತೀ ಸೋಮವಾರ ಇಸ್ತ್ರಿ ಹಾಕದ ವಸ್ತ್ರ ಧರಿಸಲು ಅವಕಾಶ!
West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ