ಹಿರಿಯ ಕಾಂಗ್ರೆಸ್ ನಾಯಕರಿಂದಲೇ ಸಮಸ್ಯೆ: ರಾಹುಲ್ಗೆ ಕಾರ್ಯಕರ್ತರು
Team Udayavani, Oct 12, 2018, 11:20 AM IST
ಹೊಸದಿಲ್ಲಿ : ”ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ತುಂಬ ಜಿಗುಟು ಮತ್ತು ಸಂಪರ್ಕಕ್ಕೇ ಸಿಗದವರಾಗಿದ್ದಾರೆ; ಅಲ್ಲದೇ ಅವರು ನಮ್ಮ ಯಾವ ಮಾತುಗಳನ್ನು ಆಲಿಸುವುದಿಲ್ಲ, ಭೇಟಿಯಾಗಲೂ ಬಯಸುವುದಿಲ್ಲ; ಮೇಲಾಗಿ ಪಕ್ಷದೊಳಗೆ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದಾರೆ” ಎಂದು ಪಕ್ಷದ ಕಾರ್ಯಕರ್ತರು ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ದೂರು ನೀಡಿದ್ದಾರೆ.
ರಾಹುಲ್ ಗಾಂಧಿ ಅವರು ಪಕ್ಷ ಸಂಘಟಿಸುವ ಪ್ರಯತ್ನದ ಭಾಗವಾಗಿ ಪಕ್ಷದ ಕಾರ್ಯಕರ್ತರು ಮತ್ತು ಜಿಲ್ಲಾ ಮುಖ್ಯಸ್ಥರೊಂದಿಗೆ ಫೋನಿನಲ್ಲಿ ಸಂವಾದಿಸಿ ತಳ ಮಟ್ಟದ ಪಕ್ಷದ ಸ್ಥಿತಿಗತಿ ಕುರಿತ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.
ಪಶ್ಚಿಮ ಬಂಗಾಲದ ಜಲಪಾಯ್ಗಾರಿ ಜಿಲ್ಲೆಯ ಕಾಂಗ್ರೆಸ್ ಸದಸ್ಯರೋರ್ವರು, “ಕಾಂಗ್ರೆಸ್ನ ಹಿರಿಯ ನಾಯಕರು ನಮ್ಮನ್ನು ಭೇಟಿಯಾಗುವುದರಲ್ಲಿ ಯಾವುದೇ ಆಸಕ್ತಿ ತೋರುತ್ತಿಲ್ಲ; ಇದರಿಂದಾಗಿ ಪಕ್ಷದ ಅಜೆಂಡಾಗೆ ಧಕ್ಕೆ ಯಾಗುತ್ತಿದೆ’ ಎಂದು ದೂರಿದರು.
“ನೀವು ಪಶ್ಚಿಮ ಬಂಗಾಲದಲ್ಲಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳದೇ ನೇರವಾಗ ಇಲ್ಲಿಂದಲೇ ಲೋಕಸಭೆಗೆ ಸ್ಪರ್ಧಿಸಬೇಕು; ಸಿಎಂ ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್ ನಾಯಕರ ಬಗ್ಗೆ ತುಂಬ ಸಿಟ್ಟು ಸಿಡುಕು ತೋರಿಸುತ್ತಿದ್ದಾರೆ ಎಂದವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ