ಸೌದಿ ಭ್ರಷ್ಟ ನಿಗ್ರಹಕ್ಕೆ ಸೆನ್ಸೆಕ್ಸ್ ತಲ್ಲಣ
Team Udayavani, Nov 8, 2017, 7:05 AM IST
ಮುಂಬಯಿ: ಸೌದಿ ಅರೇಬಿಯಾದ ರಾಜಮನೆ ತನದ ಮಟ್ಟದಲ್ಲಿ ನಡೆದಿರುವ ಬೆಳವಣಿಗೆಗಳು ಮುಂಬೈ ಷೇರು ಪೇಟೆಯಲ್ಲೂ ಸಂಚಲನಕ್ಕೆ ಕಾರಣವಾಗಿದೆ. ಅರಬ್ ರಾಷ್ಟ್ರದ ವಿದ್ಯಮಾನಗಳಿಂದಾಗಿ ಕಚ್ಚಾ ತೈಲದ ದರ ಏರಿಕೆ ಆಗಲಿದೆಯೇ ಎಂಬ ಭೀತಿ ಹೂಡಿಕೆದಾರರಲ್ಲಿ ಮೂಡಿದ್ದು, ಬಹುತೇಕ ಮಂದಿ ಷೇರು ಮಾರಾಟದಲ್ಲಿ ತೊಡಗಿದರು.
ಪರಿಣಾಮ ಮಂಗಳವಾರ ಮುಂಬೈ ಷೇರು ಪೇಟೆ ಸಂವೇದಿ ಸೂಚ್ಯಂಕ 360 ಅಂಕಗಳ ಭಾರೀ ಕುಸಿತ ದಾಖಲಿಸಿ, 33,370ರಲ್ಲಿ ದಿನದ ವಹಿವಾಟು ಅಂತ್ಯಗೊಳಿಸಿತು. ನಿಫ್ಟಿ 101 ಅಂಕ ಇಳಿಕೆಯಾಗಿ, 10,350ರಲ್ಲಿ ಅಂತ್ಯಗೊಂಡಿತು.
ಸೌದಿಯ ಭಾವೀ ದೊರೆ ಮೊಹಮ್ಮದ್ ಬಿನ್ ಸಲ್ಮಾನ್ ಅಲ್ಲಿನ ಭ್ರಷ್ಟ ರಾಜಕುಮಾರರು, ಸಚಿವರ ವಿರುದ್ಧ ಕೈಗೊಂಡ ಕ್ರಮಗಳ ಪರಿಣಾಮ, ರಾತ್ರಿ ಬೆಳಗಾಗುವುದರೊಳಗೆ ಕಚ್ಚಾ ತೈಲದ ದರ ಶೇ.3.5 ರಷ್ಟು ಏರಿಕೆಯಾಗಿತ್ತು. ಜುಲೈ 2015ರ ನಂತರ ಇಷ್ಟೊಂದು ಏರಿಕೆ ಆಗಿದ್ದು ಇದೇ ಮೊದಲು. ತೈಲ ದರದ ಏರಿಕೆ ಭಾರತದಂತಹ ತೈಲ ಆಮದು ಮಾಡುವ ದೇಶಗಳಿಗೆ ಸಮಸ್ಯೆ ಆಗಲಿದ್ದು, ಹಣದುಬ್ಬರ, ವಿತ್ತೀಯ ಲೆಕ್ಕಾಚಾರದಲ್ಲಿ ಅಲ್ಲೋಲಕಲ್ಲೋಲ ಉಂಟಾಗುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ