ಕೋವಿಶೀಲ್ಡ್ ಲಸಿಕೆ ಬೆಲೆ : ಖಾಸಗಿ ಆಸ್ಪತ್ರೆಗಳಿಗೆ 600 ರೂ, ಸರ್ಕಾರಕ್ಕೆ 400 ರೂ : ಸೀರಂ
Team Udayavani, Apr 21, 2021, 1:54 PM IST
ನವ ದೆಹಲಿ : ದೇಶದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ದಿನ ನಿತ್ಯ ಹೆಚ್ಚಳವಾಗುತ್ತಿರುವ ಸಂದರ್ಭದಲ್ಲಿ ಕೋವಿಡ್ ಲಸಿಕೆಗೆ ಬೇಡಿಕೆ ಹೆಚ್ಚಾಗಿದೆ. ಈಗಾಗಲೇ ಕೇಂದ್ರ ಸರ್ಕಾರ ಮೇ. 1 ರಿಂದ 18 ವರ್ಷ ಮೇಲ್ಪಟ್ಟವರಿಗೆಲ್ಲರಿಗೂ ಲಸಿಕೆಯನ್ನು ನೀಡಲಾಗುತ್ತದೆ ಎಂದು ಘೋಷಿಸಿದೆ.
ಈ ಹಿನ್ನೆಲೆಯಲ್ಲಿ ವಿಶ್ವದ ಅತ್ಯಂತ ದೊಡ್ಡ ಲಸಿಕಾ ಉತ್ಪಾದನಾ ಸಂಸ್ಥೆಗಳಲ್ಲಿ ಒಂದಾದ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ತಾನು ಉತ್ಪಾದಿಸಿ ಕೊಡುತ್ತಿರುವ ಲಸಿಕೆಯ ಡೋಸ್ ಗೆ ದರ ನಿಗದಿಗೊಳಿಸಿ ಘೋಷಿಸಿದೆ.
ಓದಿ : ರಾಮ,ಕೃಷ್ಣ,ಹನುಮಂತನ ವೇಷ ಧರಿಸಿ ಮಾಸ್ಕ್ ವಿತರಿಸಿದ ಹೋಟೆಲ್ ನೌಕರರು
ಖಾಸಗಿ ಆಸ್ಪತ್ರೆಗಳಿಗೆ ಪ್ರತಿ ಡೋಸ್ ಗೆ 600 ರೂ ಗಳಂತೆ ಹಾಗೂ ಸರ್ಕಾರಕ್ಕೆ ಪ್ರತಿ ಡೋಸ್ ಲಸಿಕೆಗೆ 400 ರೂ ಗಳಂತೆ ನೀಡಲಿದೆ ಎಂದು ಸೀರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಘೋಷಣೆ ಮಾಡಿದೆ.
IMPORTANT ANNOUNCEMENT pic.twitter.com/bTsMs8AKth
— SerumInstituteIndia (@SerumInstIndia) April 21, 2021
ಇನ್ನು ಈ ಕುರಿತಾಗಿ ತನ್ನ ಅಧಿಕೃತ ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ,ಮುಂದಿನ ಎರಡು ತಿಂಗಳುಗಳಲ್ಲಿ ಲಸಿಕೆ ಉತ್ಪಾದನೆಯನ್ನು ಹೆಚ್ಚಿಸುವ ಮೂಲಕ ಸೀಮಿತ ಸಾಮರ್ಥ್ಯವನ್ನು ಪರಿಹರಿಸುವುದಾಗಿ ಸಂಸ್ಥೆ ಮಾಹಿತಿ ತಿಳಿಸಿದೆ.
” ನಮ್ಮ ಸಾಮರ್ಥ್ಯದ 50 ಪ್ರತಿಶತವನ್ನು ಭಾರತ ಸರ್ಕಾರದ ಲಸಿಕೆ ಅಭಿಯಾನಕ್ಕೆ ನೀಡಲಾಗುವುದು, ಮತ್ತು ಉಳಿದ 50 ಪ್ರತಿಶತದಷ್ಟು ಸಾಮರ್ಥ್ಯವು ರಾಜ್ಯ ಸರ್ಕಾರಗಳು ಮತ್ತು ಖಾಸಗಿ ಆಸ್ಪತ್ರೆಗಳಿಗೆ ನೀಡಲು ಸಂಸ್ಥೆ ನಿರ್ಧರಿಸಿದೆ” ಎಂದಿದೆ.
ಕೋವಿಶೀಲ್ಡ್ ಲಸಿಕೆ ರಾಜ್ಯ ಸರ್ಕಾರಗಳಿಗೆ ಪ್ರತಿ ಡೋಸ್ಗೆ 400 ರೂ. ಮತ್ತು ಖಾಸಗಿ ಆಸ್ಪತ್ರೆಗಳಿಗೆ ಡೋಸೇಜ್ ಗೆ 600 ರೂ. ನಂತೆ ನೀಡಲು ಸೀರಂ ಸುದ್ದಿ ಸಂಸ್ಥೆ ಪಿಟಿಐ ಗೆ ಮಾಹಿತಿ ನೀಡಿದೆ.
ಓದಿ : ಸೋತು ಕಂಗೆಟ್ಟವರ ಕದನ: ಪಂಜಾಬ್ ವಿರುದ್ಧವಾದರೂ ಗೆಲುವಿನ ಖಾತೆ ತೆರೆದೀತೇ ಹೈದರಾಬಾದ್?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…