![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಹೋಟೆಲ್ಗಳಲ್ಲಿ ಸೇವಾ ತೆರಿಗೆ ವಿಧಿಸಿದರೆ ಕ್ರಮ
Team Udayavani, Apr 15, 2017, 3:50 AM IST
![14-ANKANA-1.jpg](https://www.udayavani.com/wp-content/uploads/2017/04/14/14-ANKANA-1.jpg)
ನವದೆಹಲಿ: ಆಹಾರ ಮತ್ತು ಪಾನೀಯಗಳ ಬಿಲ್ ಮೇಲೆ ಸೇವಾ ತೆರಿಗೆ ವಿಧಿಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ಸಲಹೆ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಆಹಾರ ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ರಾಮ್ವಿಲಾಸ್ ಪಾಸ್ವಾನ್ ಹೇಳಿದ್ದಾರೆ.
“ಸೇವಾ ತೆರಿಗೆ ಅಸ್ತಿತ್ವದಲ್ಲೇ ಇಲ್ಲ. ಆದರೂ ಅಕ್ರಮವಾಗಿ ಸೇವಾ ತೆರಿಗೆ ವಿಧಿಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯಗಳಿಗೆ ಸಲಹೆ ನೀಡಲು ನಿರ್ಧರಿಸಿದ್ದು, ಈ ಕುರಿತ ಪ್ರಸ್ತಾವವನ್ನು ಪ್ರಧಾನಿ ಕಚೇರಿಗೆ ಕಳುಹಿಸಲಾಗಿದೆ. ಪ್ರಧಾನಿ ಕಾರ್ಯಾಲಯದ ಅನುಮತಿ ದೊರೆತ ಕೂಡಲೆ ಸಲಹೆಯನ್ನು ರಾಜ್ಯಗಳಿಗೆ ಕಳುಹಿಸಲಾಗುತ್ತದೆ. ಈ ಕುರಿತು ಗ್ರಾಹಕರಿಂದ ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಮುಂದಾಗಿದ್ದೇವೆ’ ಎಂದು ಪಾಸ್ವಾನ್ ಮಾಹಿತಿ ನೀಡಿದ್ದಾರೆ.
ಗ್ರಾಹಕರ ಹಕ್ಕುಗಳಿಗಾಗಿ ಹೋರಾಡುತ್ತಿರುವ ಸ್ವಯಂಪ್ರೇರಿತ ಗ್ರಾಹಕ ಸಂಸ್ಥೆಗಳಿಗೆ ಕೇಂದ್ರದ ಈ ಕ್ರಮದಿಂದ ಅನುಕೂಲವಾಗಲಿದೆ ಎಂದಿರುವ ಸಚಿವಾಲಯದ ಅಧಿಕಾರಿ, ಸೇವಾ ತೆರಿಗೆ ಪಾವತಿಸುವಂತೆ ಗ್ರಾಹಕರ ಮೇಲೆ ಒತ್ತಡ ಹೇರುವಂತಿಲ್ಲ. ಗ್ರಾಹಕರೇ ಬಯಸಿದರೆ ವೇಯರ್ಗೆ ಟಿಪ್ಸ್ ನೀಡಬಹುದು ಎಂದಿದ್ದಾರೆ. ಹೋಟೆಲ್ಗಳಲ್ಲಿ ಸೇವಾ ತೆರಿಗೆ ವಿಧಿಸುವುದು ಕಡ್ಡಾಯವಲ್ಲ ಎಂದು ಜನವರಿಯಲ್ಲಷ್ಟೇ ಹೇಳಿದ್ದ ಗ್ರಾಹಕರ ವ್ಯವಹಾರಗಳ ಇಲಾಖೆ, “ಗ್ರಾಹಕರು ನಿರಾಕರಿಸಿದರೆ ಬಿಲ್ನಿಂದ ಸೇವಾ ತೆರಿಗೆ ತೆಗೆಯಬೇಕು,’ ಎಂದು ತಿಳಿಸಿತ್ತು.
ಹೆಚ್ಚಿದ ಡಿಜಿಟಲ್ ಪಾವತಿ: ದೇಶದ ನಾಗರಿಕರು ಮಾರ್ಚ್ ತಿಂಗಳೊಂದರಲ್ಲೇ ಸುಮಾರು 64 ಲಕ್ಷ ಬಾರಿ ಡಿಜಿಟಲ್ ಪಾವತಿ ಮಾಡುವ ಮೂಲಕ, ನವೆಂಬರ್ನಲ್ಲಾದ ನೋಟು ಅಮಾನ್ಯ ಕ್ರಮದ ನಂತರ ಡಿಜಿಟಲ್ ಪಾವತಿ ಪ್ರಮಾಣ 23 ಪಟ್ಟು ವೃದ್ಧಿಯಾಗಿದೆ. ಮಾರ್ಚ್ ತಿಂಗಳೊಂದರಲ್ಲೇ 63.80 ಲಕ್ಷ ಬಾರಿ ಡಿಜಿಟಲ್ ವಹಿವಾಟು ನಡೆಸುವ ಮೂಲಕ, 2,425 ಕೋಟಿ ಮೌಲ್ಯದ ಹಣ ಪಾವತಿಯಾಗಿದೆ. ನವೆಂಬರ್ ಅಂತ್ಯದವರೆಗೆ 2.80 ಲಕ್ಷ ಬಾರಿ (101 ಕೋಟಿ) ನಡೆದ ನಗದು ರಹಿತ ವಹಿವಾಟುಗಳಿಗೆ ಹೋಲಿಸಿದಾಗ ಮಾರ್ಚ್ ತಿಂಗಳು ಡಿಜಿಟಲ್ ವಹಿವಾಟಿನಲ್ಲಿ 23 ಪಟ್ಟು ಹೆಚ್ಚಳ ಕಂಡುಬಂದಿರುವುದಾಗಿ ನೀತಿ ಆಯೋಗ ತಿಳಿಸಿದೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.