ಸಲ್ಲೂಗೆ ಜೈಲೋ, ಜಾಮೀನೋ? ಇಂದು ಜಾಮೀನು ಅರ್ಜಿಯ ವಿಚಾರಣೆ
Team Udayavani, Apr 7, 2018, 5:45 AM IST
ಜೋಧ್ಪುರ: ಕೃಷ್ಣ ಮೃಗ ಬೇಟೆ ಪ್ರಕರಣದಲ್ಲಿ 5 ವರ್ಷಗಳ ಜೈಲು ಶಿಕ್ಷೆಗೊಳಗಾಗಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಜಾಮೀನು ಅರ್ಜಿಯ ವಿಚಾರಣೆ, ಶನಿವಾರವೂ ಮುಂದುವರಿಯಲಿದೆ. ಇಲ್ಲಿನ ಸ್ಥಳೀಯ ನ್ಯಾಯಾಲಯದಲ್ಲಿ ಶುಕ್ರವಾರ ಆರಂಭಗೊಂಡ ವಿಚಾರಣೆ ವೇಳೆ, ಭಾರೀ ವಾದ, ಪ್ರತಿವಾದಗಳು ನಡೆದ ಅಂತಿಮ ನಿರ್ಧಾರಕ್ಕೆ ಅವಕಾಶವಾಗದ ಕಾರಣ, ವಿಚಾರಣೆಯನ್ನು ನ್ಯಾಯಾಧೀಶರು ಶನಿವಾರ ಬೆಳಗ್ಗೆಗೆ ಮುಂದೂಡಿದ್ದಾರೆ. ಸಲ್ಲು ಜೈಲಿನಲ್ಲೇ ಉಳಿಯಬೇಕೋ, ಜಾಮೀನಿನಲ್ಲಿ ಹೊರಬರಬೇಕೋ ಎಂಬುದು ಶನಿವಾರ ನಿರ್ಧಾರವಾಗಲಿದೆ.
1998ರಲ್ಲಿ ರಾಜಸ್ಥಾನದ ಜೋಧಪುರ ಬಳಿ ಕೃಷ್ಣ ಮೃಗಗಳ ಬೇಟೆ ಪ್ರಕರಣಕ್ಕೆ ಸಂಬಂಧಿಸಿ, ಜೋಧ್ಪುರ ನ್ಯಾಯಾಲಯ, ಗುರುವಾರ ಖಾನ್ ಗೆ 5 ವರ್ಷಗಳ ಜೈಲು ಹಾಗೂ 10,000 ದಂಡ ವಿಧಿಸಿತ್ತು. ತೀರ್ಪಿನ ಬೆನ್ನಲ್ಲೇ ಅವರನ್ನು ಜೈಲಿಗೆ ರವಾನಿಸಲಾಗಿತ್ತು. ಶುಕ್ರವಾರದ ವಿಚಾರಣೆ ವೇಳೆ, ಸಲ್ಮಾನ್ ಪರ ವಕೀಲರು, 1998ರ ಪ್ರಕರಣದಲ್ಲಿಯೂ ಅವರು ಶಸ್ತ್ರಾಸ್ತ್ರ ಬಳಸಿದ್ದಕ್ಕೆ ಯಾವುದೇ ಪುರಾವೆಯಿಲ್ಲ. ತನಿಖೆಯಲ್ಲಿ ಸಾಕಷ್ಟು ಲೋಪಗಳಾಗಿವೆ. ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆಗಳು ನಂಬುವಂತೆ ಇಲ್ಲ ಎಂದು ವಾದಿಸಿದರು. ವಾದ, ಪ್ರತಿವಾದ ಆಲಿಸಿದ ನ್ಯಾಯಾಧೀಶರು ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಿದ್ದಾರೆ.
ನಜ್ಮಾ ಹೆಫ್ತುಲ್ಲಾ ಕಿಡಿ
ಸಲ್ಮಾನ್ ಖಾನ್ ಓರ್ವ ಮುಸ್ಲಿಂ ಆಗಿದ್ದಕ್ಕೆ ಆತನಿಗೆ ಶಿಕ್ಷೆ ವಿಧಿಸಲಾಗಿದೆ ಎಂಬ ಪಾಕಿಸ್ಥಾನ ವಿದೇಶಾಂಗ ಸಚಿವ ಖ್ವಾಜಾ ಆಸಿಫ್ ಹೇಳಿಕೆಯನ್ನು ಮಣಿಪುರದ ರಾಜ್ಯಪಾಲರಾದ ನಜ್ಮಾ ಹೆಫ್ತುಲ್ಲಾ ತೀವ್ರವಾಗಿ ಖಂಡಿಸಿದ್ದಾರೆ. ಪಾಕಿಸ್ಥಾನದ ಸಚಿವರಿಗೆ ಭಾರತದ ಆಂತರಿಕ ವಿಚಾರಗಳಲ್ಲಿ ಮೂಗು ತೂರಿಸುವ ಅಗತ್ಯತೆಯಿಲ್ಲ ಎಂದಿರುವ ಅವರು, ಭಾರತದಲ್ಲಿ ಜಾತಿ, ಮತಗಳ ಹೊರತಾಗಿ ವಿಚಾರಣೆ ನಡೆಸಿ ಅಪರಾಧಿಗಳಿಗೆ ಶಿಕ್ಷೆ ವಿಧಿಸುವ ಪದ್ಧತಿಯಿದೆ. ಇಲ್ಲಿ, ಅಲ್ಪಸಂಖ್ಯಾತರು, ಬಹುಸಂಖ್ಯಾತರು ಎಂಬ ಭೇದಭಾವ ಇಲ್ಲ. ಸಲ್ಮಾನ್ ಖಾನ್ ತಪ್ಪು ಮಾಡಿದ್ದರೆ ಅವರಿಗೆ ಶಿಕ್ಷೆಯಾಗುತ್ತದಷ್ಟೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
MUST WATCH
ಹೊಸ ಸೇರ್ಪಡೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್