ಬಿಜೆಪಿ ಶಾಸಕ ಬಗ್ಗಾ, ಕುಮಾರ್ ವಿಶ್ವಾಸ್ ವಿರುದ್ಧದ ಎಫ್ ಐಆರ್ ವಜಾ; AAPಗೆ ಹಿನ್ನಡೆ
ಎಫ್ ಐಆರ್ ಅನ್ನು ವಜಾಗೊಳಿಸುವಂತೆ ಕೋರಿ ಪಂಜಾಬ್ -ಹರ್ಯಾಣ ಹೈಕೋರ್ಟ್ ಮೆಟ್ಟಿಲೇರಿದ್ದರು.
Team Udayavani, Oct 12, 2022, 3:59 PM IST
ಪಂಜಾಬ್: ಆಮ್ ಆದ್ಮಿ ಪಕ್ಷದ ಮಾಜಿ ಮುಖಂಡ ಕುಮಾರ್ ವಿಶ್ವಾಸ್ ಮತ್ತು ಬಿಜೆಪಿ ಮುಖಂಡ ತಜೀಂದರ್ ಪಾಲ್ ಸಿಂಗ್ ಬಗ್ಗಾ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ಅನ್ನು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಬುಧವಾರ (ಅಕ್ಟೋಬರ್ 12) ವಜಾಗೊಳಿಸಿದೆ. ಇದರಿಂದ ಆಮ್ ಆದ್ಮಿ ಪಕ್ಷಕ್ಕೆ ತೀವ್ರ ಹಿನ್ನಡೆಯುಂಟಾದಂತಾಗಿದೆ.
ಇದನ್ನೂ ಓದಿ:ಕೇರಳ ನರಬಲಿ ಪ್ರಕರಣದ ಹಿಂದಿದೆ ಹಲವು ನಿಗೂಢ ಸಂಗತಿ; ಆರೋಪಿ ಶಫಿ ವಿಕೃತಕಾಮಿ, ಅಂಗಾಂಗ ಸೇವನೆ?
ದೆಹಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ್ದ ಆರೋಪದಲ್ಲಿ ಕುಮಾರ್ ವಿಶ್ವಾಸ್ ವಿರುದ್ಧ ಪಂಜಾಬ್ ಪೊಲೀಸರು ಎಫ್ ಐಆರ್ ದಾಖಲಿಸಿದ್ದರು. ಅದೇ ರೀತಿ ಎಪ್ರಿಲ್ ನಲ್ಲಿ ಮೊಹಾಲಿಯಲ್ಲಿ ಬಿಜೆಪಿ ಮುಖಂಡ ಬಗ್ಗಾ ದ್ವೇಷ ಹರಡುವ ಹಾಗೂ ಪ್ರಚೋದನಕಾರಿ ಭಾಷಣ ಮಾಡಿರುವುದಾಗಿ ಆರೋಪಿಸಿ ಎಫ್ ಐಆರ್ ದಾಖಲು ಮಾಡಲಾಗಿತ್ತು.
“ತನ್ನ ವಿರುದ್ಧ ದಾಖಲಾದ ಎಫ್ ಐಆರ್ ಕಾನೂನು ಬಾಹಿರ ಎಂದು ವಾದಿಸಿ ಕುಮಾರ್ ವಿಶ್ವಾಸ್, ಎಫ್ ಐಆರ್ ಅನ್ನು ವಜಾಗೊಳಿಸುವಂತೆ ಕೋರಿ ಪಂಜಾಬ್ -ಹರ್ಯಾಣ ಹೈಕೋರ್ಟ್ ಮೆಟ್ಟಿಲೇರಿದ್ದರು.
ಅದೇ ರೀತಿ ತಜೀಂದರ್ ಸಿಂಗ್ ಪಾಲ್ ಬಗ್ಗಾ ಕೂಡಾ, ತನ್ನ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ಅನ್ನು ವಜಾಗೊಳಿಸುವಂತೆ ಕೋರಿ ಪಂಜಾಬ್ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್