ದಾವೂದ್ ಸಂಬಂಧಿ ಸೊಹೈಲ್ ಕಸ್ಕರ್ ಪಾಕಿಸ್ತಾನಕ್ಕೆ ಪರಾರಿ
Team Udayavani, Jan 13, 2022, 10:00 PM IST
ಮುಂಬೈ: ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಸೋದರ ಸಂಬಂಧಿ ಸೊಹೈಲ್ ಕಸ್ಕರ್ ದುಬೈ ಮೂಲಕ ಪಾಕಿಸ್ತಾನಕ್ಕೆ ಪರಾರಿಯಾಗಿದ್ದಾನೆ.
ಆತ ಅಮೆರಿಕದ ತನಿಖಾ ಸಂಸ್ಥೆಗಳ ವಶದಲ್ಲಿದ್ದ. ಆ ತನಿಖಾ ಸಂಸ್ಥೆಗಳ ಜೊತೆಗೆ ಮುಂಬೈ ಪೊಲೀಸರು ನಿಕಟ ಸಂಪರ್ಕ ಇರಿಸಿಕೊಂಡು, ಆತನನ್ನು ಗಡಿಪಾರು ಮಾಡಿಸುವ ಯೋಜನೆಯಲ್ಲಿದ್ದರು. ಆದರೆ ಈಗ ಆತ ಪಾಕ್ಗೆ ಪರಾರಿಯಾಗಿರುವ ಕಾರಣ ಗಡಿಪಾರು ವಿಚಾರದಲ್ಲಿ ಭಾರತಕ್ಕೆ ಹಿನ್ನಡೆಯಾದಂತಾಗಿದೆ.
ಆತ ಫೋನ್ನಲ್ಲಿ ಮಾತನಾಡುತ್ತಿದ್ದ ವೇಳೆ ದೇಶದ ತನಿಖಾ ಸಂಸ್ಥೆಗಳು ಛೇದಿಸಿದ ಸಂದರ್ಭದಲ್ಲಿ ಅವನು ಪಾಕಿಸ್ತಾನದಲ್ಲಿರುವುದು ದೃಢಪಟ್ಟಿದೆ. ಭಾರತದಲ್ಲಿ ಸೊಹೈಲ್ ಕಸ್ಕರ್ ವಿರುದ್ಧ ನೇರವಾಗಿ ಕೇಸುಗಳು ಇಲ್ಲದಿದ್ದರೂ, ಭೂಗತ ಪಾತಕಿ ದಾವೂದ್ ಇಬ್ರಾಹಿಂ ಅಡಗುತಾಣವನ್ನು ಪತ್ತೆಹಚ್ಚಲು ಹಾಗೂ ಡಿ ಕಂಪನಿ ಬಗ್ಗೆ ಮಾಹಿತಿ ಪಡೆಯಲು ಆತನನ್ನು ಬಳಸಿಕೊಳ್ಳಬಹುದು ಎಂಬ ಲೆಕ್ಕಾಚಾರವನ್ನು ಮುಂಬೈ ಪೊಲೀಸರು ಹಾಕಿಕೊಂಡಿದ್ದರು.
ಈ ಬೆಳವಣಿಗೆ ಬಗ್ಗೆ ಮಹಾರಾಷ್ಟ್ರ ಬಿಜೆಪಿ ಘಟಕ ಮಹಾ ವಿಕಾಸ ಅಘಾಡಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಆಗಿರುವ ದೊಡ್ಡ ಸೋಲು ಇದು ಎಂದು ಬಿಜೆಪಿ ನಾಯಕಿ ಪ್ರೀತಿ ಗಾಂಧಿ ಟೀಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ