ಉತ್ತರ ಪ್ರದೇಶ ರಸ್ತೆ ಅಪಘಾತಗಳಲ್ಲಿ 7 ಸಾವು, ನಾಲ್ವರು ಸೀರಿಯಸ್
Team Udayavani, Jan 12, 2017, 5:12 PM IST
ಲಖೀಂಪುರ ಖೇರಿ, ಉತ್ತರ ಪ್ರದೇಶ : ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು ಏಳು ಮಂದಿ ಮೃತಪಟ್ಟು ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.
ಮೊದಲ ರಸ್ತೆ ಅವಘಡ ನಡೆದದ್ದು ನಿನ್ನೆ ಬುಧವಾರ ತಡರಾತ್ರಿ. ಪಿಲಿಭೀತ್ – ಬಸ್ತಿ ಹೈವೇ ಸಮೀಪದ ಮಹಾರಾಜ್ನಗರ್ ಗ್ರಾಮದಲ್ಲಿ ಜನರ ಗುಂಪೊಂದು ರಸ್ತೆ ಬದಿ ಬೆಂಕಿ ಹಾಕಿ ಚಳಿ ಕಾಯಿಸುತ್ತಾ ಕುಳಿತಿದ್ದ ವೇಳೆ ಟ್ರ್ಯಾಕ್ಟರ್ ಟ್ರಾಲಿಯೊಂದಕ್ಕೆ ಢಿಕ್ಕಿ ಹೊಡೆದ ಟ್ರಕ್ ಒಂದು ಚಾಲಕನ ನಿಯಂತ್ರಣ ತಪ್ಪಿ ಜನರ ಮೇಲೆ ಹರಿಯಿತು. ಆಗ ಐವರು ಮೃತಪಟ್ಟರು. ಇತರ ನಾಲ್ವರು ಗಾಯಗೊಂಡರು. ಮೃತರಲ್ಲಿ ನಾಲ್ವರು ಸ್ಥಳದಲ್ಲೇ ಸತ್ತರೆ ಇನ್ನೋರ್ವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಎರಡನೇ ಅವಘಡ ನಡೆದದ್ದು ಮಾಲ್ಪುರ ಸಮೀಪದ ಭಿರಾ ಪಲ್ಲಿಯಾ ರಸ್ತೆಯಲ್ಲಿ. ಎದುರಿನಿಂದ ಬರುತ್ತಿದ್ದ ಟ್ರಕ್ಕಿಗೆ ಕಾರೊಂದು ಮುಖಾಮುಖೀ ಢಿಕ್ಕಿಯಾದಾಗ ಕಾರಿನಲ್ಲಿದ್ದವರ ಪೈಕಿ ಇಬ್ಬರು ಪುರುಷರು ಮೃತಪಟ್ಟರು. ಮೃತರಲ್ಲಿ ಒಬ್ಬರನ್ನು ಪಾಲಿಯಾದಲ್ಲಿ ಎಲ್ಐಸಿ ನೌಕರರಾಗಿರುವ ಅತುಲ್ 30 ಎಂದು ಗುರುತಿಸಲಾಗಿದೆ. ಇನ್ನೊಬ್ಬರು ಗುರುತು ಪತ್ತೆಯಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ