ಅಸ್ಸಾಂ : ಮುಳುಗಿದ ಪ್ರಯಾಣಿಕರ ದೋಣಿ ; ಹಲವರು ನಾಪತ್ತೆ
Team Udayavani, Oct 17, 2019, 7:17 PM IST
ಗೌಹಾತಿ: ಅಸ್ಸಾಂನ ಜಿಯಾ ಭಾರಾಲಿ ನದಿಯಲ್ಲಿ ನಾಡ ದೋಣಿಯೊಂದು ಮುಳುಗಿರುವ ಘಟನೆ ವರದಿಯಾಗಿದೆ. ಈ ದೋಣಿಯಲ್ಲಿ ಸುಮಾರು 80 ಜನ ಪ್ರಯಾಣಿಕರಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಘಟನೆಯ ಬಳಿಕ ದೋಣಿಯಲ್ಲಿದ್ದ ಹಲವರು ನಾಪತ್ತೆಯಾಗಿದ್ದಾರೆ.
ಈ ನಾಡದೋಣಿಯು ಲಾಲ್ ತಪು ಸಮೀಪದ ಬಿಹಿಯಾ ಗಾಂವ್ ನಿಂದ ತೇಜ್ ಪುರದ ಪಾಂಚ್ ಮಿಲೇ ಪ್ರದೇಶಕ್ಕೆ ಸಾಗುತ್ತಿತ್ತು ಎಂದು ತಿಳಿದುಬಂದಿದೆ.
ದುರ್ಘಟನೆಗೆ ಒಳಗಾದ ಈ ದೋಣಿ ಜನರನ್ನು ಮಾತ್ರವಲ್ಲದೇ ಮೋಟಾರು ಬೈಕುಗಳನ್ನೂ ಸಹ ಹೊತ್ತೊಯ್ಯೊತ್ತಿತ್ತು ಎಂಬ ಮಾಹಿತಿಯೂ ಲಭ್ಯವಾಗಿದೆ. ಪ್ರತೀ ಗುರುವಾರ ತೇಜ್ ಪುರದ ಪಾಂಚ್ ಮಿಲೇಯಲ್ಲಿ ನಡೆಯುವ ಸಂತೆ ಮಾರುಕಟ್ಟೆಗೆ ಇವರೆಲ್ಲರೂ ಹೋಗುತ್ತಿದ್ದಾಗ ನದಿಯಲ್ಲಿ ಈ ದುರ್ಘಟನೆ ನಡೆದಿದೆ. ದೋಣಿ ನದಿಯಲ್ಲಿ ಮುಳುಗುತ್ತಿದ್ದಂತೆ ಹಲವರು ಈಜಿ ದಡ ಸೇರುವಲ್ಲಿ ಸಫಲರಾಗಿದ್ದಾರೆ. ಆದರೆ ಇನ್ನೂ ಕೆಲವರು ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿರಬಹುದೆಂದು ಶಂಕಿಸಲಾಗುತ್ತಿದೆ.
ಘಟನಾ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು ರಾಜ್ಯ ವಿಪತ್ತು ನಿರ್ವಹಣಾ ಪಡೆ ಮತ್ತು ಜಿಲ್ಲಾಡಳಿತ ಸಿಬ್ಬಂದಿ ಈ ರಕ್ಷಣಾ ಕಾರ್ಯಾಚರಣೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇವರಿಗೆ ಸ್ಥಳೀಯರು ಸಹಕಾರ ನೀಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!