ದಕ್ಷಿಣದ ರಾಜ್ಯಪಾಲರ ವಿರುದ್ಧ ಲೈಂಗಿಕ ಕಿರುಕುಳ ದೂರು?
Team Udayavani, Feb 27, 2018, 10:40 AM IST
ಹೊಸದಿಲ್ಲಿ: ದಕ್ಷಿಣ ಭಾರತದ ರಾಜ್ಯವೊಂದರ ರಾಜ್ಯಪಾಲರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿದ್ದು, ಗೃಹ ಸಚಿವಾಲಯಕ್ಕೆ ದೂರು ದಾಖಲಾಗಿದೆ. ಸಚಿವಾಲಯವು ಈ ಕುರಿತು ತನಿಖೆ ಆರಂಭಿಸಿದೆ ಎಂದು ಮೂಲಗಳು ತಿಳಿಸಿವೆ. ಆದರೆ, ಈ ಬಗ್ಗೆ ಸೋಮವಾರ ಸ್ಪಷ್ಟನೆ ನೀಡಿರುವ ಗೃಹ ಇಲಾಖೆ, ಅಂಥ ಯಾವುದೇ ಬೆಳವಣಿಗೆಗಳ ಬಗ್ಗೆ ನಮಗೆ ಮಾಹಿತಿಯಿಲ್ಲ ಎಂದಿದೆ.
ರಾಜಭವನದಲ್ಲೇ ರಾಜ್ಯಪಾಲರು ತಮ್ಮೊಂದಿಗೆ ಅನುಚಿತವಾಗಿ ವರ್ತಿಸಿದ್ದು, ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ರಾಜಭವನದ ಸಿಬಂದಿಯೊಬ್ಬರು ದೂರು ನೀಡಿದ್ದಾರೆ ಎನ್ನಲಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಗೃಹ ಇಲಾಖೆ, ಈ ಕುರಿತು ತನಿಖೆ ನಡೆಸಿ, ಆರೋಪ ನಿಜವಾದಲ್ಲಿ ರಾಜ್ಯಪಾಲರ ರಾಜೀನಾಮೆ ಕೇಳಲು ನಿರ್ಧರಿಸಿದೆ ಎಂದು ಮೂಲಗಳನ್ನು ಉಲ್ಲೇಖೀಸಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಆದರೆ, ಆ ರಾಜ್ಯಪಾಲರ ಹೆಸರನ್ನು ಇದುವರೆಗೆ ಬಹಿರಂಗಪಡಿಸಿಲ್ಲ. ಏಕೆಂದರೆ, ಆರೋಪ ಎದುರಿಸುತ್ತಿರುವ ರಾಜ್ಯಪಾಲರು ರಾಜ ಕೀಯವಾಗಿ ಮಹತ್ವದ ರಾಜ್ಯಕ್ಕೆ ಸೇರಿದವರು ಎನ್ನಲಾಗಿದೆ.
ಆದರೆ ಈ ಬಗ್ಗೆ ಪ್ರಶ್ನಿಸಿದಾಗ ಗೃಹ ಇಲಾಖೆ, ಅಂಥ ಯಾವುದೇ ದೂರಿನ ಬಗ್ಗೆ ಗೊತ್ತಿಲ್ಲ ಎಂದಿದೆ. ಕಳೆದ ವರ್ಷವಷ್ಟೇ ಲೈಂಗಿಕ ದುರ್ವರ್ತನೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮೇಘಾಲಯ ರಾಜ್ಯಪಾಲ ವಿ. ಷಣ್ಮುಗನಾಥನ್ ರಾಜೀನಾಮೆ ನೀಡಿದ್ದರು. ಇವರ ವಿರುದ್ಧ ಸುಮಾರು 100 ಮಂದಿ ಸಿಬಂದಿ ದೂರು ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.