ಶಬರಿಮಲೆ ವಿವಾದ; 12ಗಂಟೆ ಕೇರಳ ಬಂದ್, ಹಲವೆಡೆ ಸೆಕ್ಷನ್ 144 ಜಾರಿ
Team Udayavani, Oct 18, 2018, 11:29 AM IST
ತಿರುವನಂತಪುರಂ: ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ವಿಷಯ ಕೇರಳದಲ್ಲಿ ಭಾರೀ ಬಿಗುವಿನ ವಾತಾವರಣಕ್ಕೆ ಕಾರಣವಾಗಿದ್ದು, ಶಬರಿಮಲೆ ರಕ್ಷಣಾ ಸಮಿತಿ 12ಗಂಟೆಗಳ ಕಾಲ ಕೇರಳ ಬಂದ್ ಗೆ ಗುರುವಾರ ಕರೆ ನೀಡಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಬುಧವಾರ ಸಂಜೆಯಿಂದಲೇ ಸನ್ನಿಧಾನಂ, ಪಂಪಾ, ನೀಲಕ್ಕಲ್ ಮತ್ತು ಎಲಾವಂಗಲ್ ಪ್ರದೇಶದಲ್ಲಿ ಸೆಕ್ಷನ್ 144 ಜಾರಿಗೊಳಿಸಿದೆ.
ಸೆಕ್ಷನ್ 144(ಅಪರಾಧ ದಂಡಸಂಹಿತೆ) ಕಾಯ್ದೆ ಪ್ರಕಾರ ನಾಲ್ಕು ಪ್ರದೇಶಗಳಲ್ಲಿ ನಾಲ್ಕು ಜನರಿಗಿಂತ ಹೆಚ್ಚು ಮಂದಿ ಸೇರುವಂತಿಲ್ಲ. ನಿನ್ನೆಯಷ್ಟೇ ಕೇರಳದ ಪ್ರಸಿದ್ಧ ಶಬರಿಮಲೆ ದೇವಸ್ಥಾನದ ಬಾಗಿಲು ತೆರೆಯಲಾಗಿತ್ತು. ಆದರೆ ಸುಪ್ರೀಂಕೋರ್ಟ್ ಎಲ್ಲಾ ವಯೋಮಾನದ ಮಹಿಳೆಯರಿಗೆ ಶಬರಿಮಲೆ ಪ್ರವೇಶಕ್ಕೆ ಅವಕಾಶ ಕಲ್ಪಿಸಿಕೊಡಬೇಕೆಂದು ತೀರ್ಪು ನೀಡಿತ್ತು. ಈ ಬಗ್ಗೆ ಹಿಂದೂಪರ ಸಂಘಟನೆಗಳು, ಬುಡಕಟ್ಟು ಜನರು ಮಹಿಳೆಯರ ಪ್ರವೇಶಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದರು. ಮಹಿಳಾ ಭಕ್ತರಿಗೆ ಶಬರಿಮಲೆ ಪ್ರವೇಶಿಸಲು ಅವಕಾಶ ಕೊಡಬಾರದು ಎಂದು ನಡೆಸಿದ ಪ್ರತಿಭಟನೆ ತೀವ್ರ ಸ್ವರೂಪ ತಾಳಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ