ಅ.16ರಿಂದ 5 ದಿನ ತೆರೆಯಲಿದೆ ಶಬರಿಮಲೆ: ಒಂದು ಬಾರಿ 250 ಮಂದಿ ಭಕ್ತರಿಗೆ ಮಾತ್ರ ಅವಕಾಶ
Team Udayavani, Oct 10, 2020, 11:37 AM IST
ತಿರುವನಂತಪುರ: ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಅ.16ರಿಂದ ಐದು ದಿನಗಳ ಕಾಲ ಪೂಜಾ ಕಾರ್ಯಕ್ರಮಗಳು ನಡೆಯಲಿವೆ. ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಒಂದು ಬಾರಿ 250 ಮಂದಿ ಭಕ್ತರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ.
ಪೂಜಾ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆ ಸೇರಿದಂತೆ ಅಗತ್ಯ ಇರುವ ಎಲ್ಲಾ ಸಿದ್ದತೆಗಳನ್ನು ಪೂರ್ತಿಗೊಳಿಸಲಾಗಿದೆ. ಕೇರಳ ಸಶಸ್ತ್ರ ಪೊಲೀಸ್ ಪಡೆ (ಕೆಎಪಿ)ಯ ಐದನೇ ಬೆಟಾಲಿಯನ್ ಕಮಾಂಡೆಂಟ್ ಕೆ. ರಾಧಾಕೃಷ್ಣನ್ ಶುಕ್ರವಾರ ದೇಗುಲಕ್ಕೆ ಭೇಟಿ ನೀಡಿ ಭದ್ರತೆ ಪರಿಶೀಲನೆ ನಡೆಸಿದ್ದಾರೆ.
ವಡಶ್ಶೇರಿಕ್ಕರ ಮತ್ತು ಎರುಮಲೆ ಮಾರ್ಗಗಳನ್ನು ಹೊರತುಪಡಿಸಿ ಇತರ ಎಲ್ಲಾ ಸಂಪರ್ಕಗಳನ್ನು ರದ್ದುಗೊಳಿಸಲಾಗಿದೆ.
ಇದನ್ನೂ ಓದಿ:ವಿದ್ಯಾಗಮ ಕಾರ್ಯಕ್ರಮ ನಿಲ್ಲಿಸಲು ಆಗ್ರಹ: ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ
ಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತಾದಿಗಳು ನೀಲಕ್ಕಲ್ ಕ್ಯಾಂಪ್ ನಲ್ಲಿ ರ್ಯಾಪಿಡ್ ಕೋವಿಡ್ ಟೆಸ್ಟ್ ಗೆ ಒಳಗಾಗಬೇಕು. ಅಲ್ಲಿ ನೆಗೆಟಿವ್ ವರದಿಯಾದರೆ ಮಾತ್ರ ಮಲೆಗೆ ತೆರಳಲು ಅವಕಾಶ ಕಲ್ಪಿಸಲಾಗಿದೆ. ಪಂಪಾ ನದಿಯಲ್ಲಿ ಸ್ನಾನಕ್ಕೆ ಈ ಬಾರಿ ಅವಕಾಶ ಕಲ್ಪಿಸಲಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ