ಕಾಶ್ಮೀರಿ ಪ್ರತ್ಯೇಕತಾವಾದಿಗಳ ಲಷ್ಕರ್‌ ನಂಟು ಬಯಲಿಗೆ


Team Udayavani, Sep 24, 2017, 7:25 AM IST

Shabir-Shah.jpg

ನವದೆಹಲಿ/ಶ್ರೀನಗರ: “ಪಾಕಿಸ್ತಾನ ಮೂಲದ ಭಯೋತ್ಪಾದಕ, ಮುಂಬೈ ದಾಳಿಯ ಮಾಸ್ಟರ್‌ವೆುಡ್‌ ಹಫೀಜ್‌ ಸಯೀದ್‌ ಜತೆ ನನಗೆ ನಂಟಿರುವುದು ನಿಜ. ಪಾಕ್‌ನ ಹವಾಲಾ ದಂಧೆಕೋರರ ಜೊತೆ ನಾನು ವಹಿವಾಟು ನಡೆಸುತ್ತಿರುವುದೂ ಸತ್ಯ.’

ಇಂತಹುದೊಂದು ಆಘಾತಕಾರಿ ತಪ್ಪೊಪ್ಪಿಗೆ ಹೇಳಿಕೆ ನೀಡಿರುವುದು ಕಾಶ್ಮೀರದ ಪ್ರತ್ಯೇಕತಾವಾದಿ ಶಬೀರ್‌ ಶಾ. ಉಗ್ರರಿಗೆ ಹಣಕಾಸು ನೆರವು ನೀಡುವ ಉದ್ದೇಶದಿಂದ 2005ರಲ್ಲಿ ನಡೆದ ಅಕ್ರಮ ಹಣಕಾಸು ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿ ಶಬೀರ್‌ ವಿರುದ್ಧ ಜಾರಿ ನಿರ್ದೇಶನಾಲಯ ಶನಿವಾರ ಸಲ್ಲಿಸಿದ ಆರೋಪಪಟ್ಟಿಯಲ್ಲಿ ಈ ವಿಚಾರವನ್ನು ಉಲ್ಲೇಖೀಸಲಾಗಿದೆ. ಹೆಚ್ಚುವರಿ ಸೆಷನ್ಸ್‌ ಜಡ್ಜ್ ಸಿದ್ಧಾರ್ಥ್ ಶರ್ಮಾ ಅವರಿಗೆ ಈ ಆರೋಪಪಟ್ಟಿ ಸಲ್ಲಿಸಲಾಗಿದ್ದು, ಅದರಲ್ಲಿ ಹವಾಲಾ ಡೀಲರ್‌ಗಳಾದ ಮೊಹಮ್ಮದ್‌ ಅಸ್ಲಾಮ್‌ ವಾನಿಯ ಹೆಸರೂ ಇದೆ. 700 ಪುಟಗಳ ಚಾರ್ಜ್‌ಶೀಟ್‌ ಅನ್ನು ಪರಿಗಣಿಸಿರುವ ಕೋರ್ಟ್‌, 27ರಂದು ಆರೋಪಿಗಳನ್ನು ಹಾಜರುಪಡಿಸುವಂತೆ ಆದೇಶಿಸಿದೆ.

ಐಟಿಆರ್‌ ಸಲ್ಲಿಸಿಲ್ಲ: ನನಗೆ ನನ್ನದೇ ಆದ ಆದಾಯದ ಮೂಲವಿಲ್ಲ. ಈವರೆಗೆ ಒಮ್ಮೆಯೂ ಆದಾಯ ತೆರಿಗೆ 
ರಿಟರ್ನ್ ಸಲ್ಲಿಸಿಲ್ಲ ಎಂದೂ ಶಬೀರ್‌ ವಿಚಾರಣೆ ವೇಳೆ ಬಾಯಿ ಬಿಟ್ಟಿರುವುದಾಗಿ ಆರೋಪಪಟ್ಟಿಯಲ್ಲಿ ಹೇಳಲಾಗಿದೆ. ಆತ ತನ್ನ ಪಕ್ಷಕ್ಕಾಗಿ ಸ್ಥಳೀಯರಿಂದ ದೇಣಿಗೆ ಪಡೆದಿದ್ದು, ವರ್ಷಕ್ಕೆ 8 ರಿಂದ 10 ಲಕ್ಷ ರೂ. ಸಂಗ್ರಹಿಸುತ್ತಿದ್ದ. ವಿಶೇಷವೆಂದರೆ, ಈ ಎಲ್ಲ ದೇಣಿಗೆಗಳನ್ನೂ ನಗದುರೂಪ ದಲ್ಲೇ ಪಡೆಯುತ್ತಿದ್ದ. ಈ ಕುರಿತ ಯಾವುದೇ ದಾಖಲೆ ಆತನಲ್ಲಿಲ್ಲ ಎಂದು ಇ.ಡಿ. ಆರೋಪಿಸಿದೆ. ಜಾಗತಿಕ ಭಯೋತ್ಪಾದಕ ಹಫೀಜ್‌ ಸಯೀದ್‌ ಜೊತೆ ಶಬೀರ್‌ ನಿರಂತರ ಸಂಪರ್ಕದಲ್ಲಿದ್ದ. ಜನವರಿಯಲ್ಲಿ ಕೂಡ ಫೋನ್‌ನಲ್ಲಿ ಸಂಭಾಷಣೆ ನಡೆಸಿದ್ದ. ಹವಾಲಾ ಹಣವನ್ನು ದೆಹಲಿಯಲ್ಲಿ ಸಂಗ್ರಹಿಸಿ ಶ್ರೀನಗರಕ್ಕೆ ತರಲು ವಾನಿಯ ಸಹಾಯ ಪಡೆಯುತ್ತಿದ್ದ ಎಂದೂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕೋಮು ಕಿಡಿ ಹಚ್ಚುತ್ತಿರುವ ಪಾಕ್‌: ಕಣಿವೆ ರಾಜ್ಯದಲ್ಲಿ ಕೋಮುವಾದದ ವಿಷಬೀಜ ಬಿತ್ತಲು ಪಾಕಿಸ್ತಾನವು ವ್ಯವಸ್ಥಿತ ಸಂಚು ರೂಪಿಸುತ್ತಿದೆ ಎಂಬ ಆತಂಕಕಾರಿ ಅಂಶವೊಂದು ಇದೀಗ ಹೊರಬಿದ್ದಿದೆ. ಜಿನೇವಾದಲ್ಲಿ ನಡೆದ ಮಾನವ ಹಕ್ಕುಗಳ ಮಂಡಳಿಯ 36ನೇ ಆವೃತ್ತಿಯಲ್ಲಿ ಆ್ಯಮ್‌ಸ್ಟರ್‌ಡ್ಯಾಂ ಮೂಲದ ದಕ್ಷಿಣ ಏಷ್ಯಾ ಅಧ್ಯಯನಕ್ಕಾಗಿ ಇರುವ ಯುರೋಪಿಯನ್‌ ಪ್ರತಿಷ್ಠಾನದ ನಿರ್ದೇಶಕ, ಕಾಶ್ಮೀರಿ ಹೋರಾಟಗಾರ ಜುನೈದ್‌ ಖುರೇಷಿ ಅವರು ಈ ವಿಚಾರ ಬಹಿರಂಗಪಡಿಸಿದ್ದಾರೆ. ಪಾಕ್‌ ಗುಪ್ತಚರ ಸಂಸ್ಥೆಗಳು ನೀಡುತ್ತಿರುವ ಹಣಕಾಸು ಮತ್ತು ಸೇನಾ ನೆರವನ್ನು ಪಡೆದು ಉಗ್ರ ಸಂಘಟನೆಗಳು ಕಾಶ್ಮೀರದಿಂದ ಕಾಶ್ಮೀರಿ ಪಂಡಿತರನ್ನು ನಿರ್ಮೂಲನೆ ಮಾಡಲು ಸಂಚು ರೂಪಿಸಿದೆ ಎಂದಿದ್ದಾರೆ ಖುರೇಷಿ. ಜತೆಗೆ, ಪಾಕಿಸ್ತಾನವು ಈ ರೀತಿ ಉಗ್ರರ ರಫ್ತು ಮಾಡುತ್ತಿದ್ದರೆ, ನೀವು ಎಷ್ಟು ದಿನ ಹೀಗೇ ಮೌನವಾಗಿ ಕುಳಿತಿರುತ್ತೀರಿ ಎಂದೂ ವಿಶ್ವಸಂಸ್ಥೆಯನ್ನು ಪ್ರಶ್ನಿಸಿದ್ದಾರೆ. “ನಾನೊಬ್ಬ ಸುನ್ನಿ ಕಾಶ್ಮೀರಿ ಮುಸ್ಲಿಂ. ನನ್ನ ರಾಜ್ಯವು ಕೇವಲ ಸುನ್ನಿ ಮುಸ್ಲಿಮರ ಸ್ವತ್ತಲ್ಲ. ಅದು ಕಾಶ್ಮೀರಿ ಪಂಡಿತರು, ಬೌದ್ಧರು, ಶಿಯಾ ಮುಸ್ಲಿಮರು… ಹೀಗೆ ಎಲ್ಲರಿಗೂ ಸಮಾನವಾಗಿ ಸೇರಿದ್ದು,’ ಎಂದೂ ಖುರೇಷಿ ಹೇಳಿದ್ದಾರೆ.

ಪಾಕ್‌ನಿಂದ ಶೆಲ್‌ ದಾಳಿ: ಯೋಧ ಸೇರಿ 7 ಮಂದಿಗೆ ಗಾಯ
ಜಮ್ಮು, ಸಾಂಬಾ ಮತ್ತು ಪೂಂಛ… ಜಿಲ್ಲೆಯ ಗಡಿ ಶಿಬಿರಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಸೇನಾ ಪಡೆಯು ಶುಕ್ರವಾರ ರಾತ್ರಿಯಿಡೀ ಶೆಲ್‌ ದಾಳಿ ನಡೆಸಿದೆ. ಪರಿಣಾಮ ಬಿಎಸ್‌ಎಫ್ ಯೋಧ ಸೇರಿ 7 ಮಂದಿ ಗಾಯಗೊಂಡಿದ್ದಾರೆ. ಪಾಕ್‌ನ ನಿರಂತರ ದಾಳಿಗೆ ಹೆದರಿ ಗಡಿ ಜಿಲ್ಲೆಯ ನಾಗರಿಕರೆಲ್ಲ ಆತಂಕಕ್ಕೊಳಗಾಗಿದ್ದು, ಮನೆ ಬಿಟ್ಟು ತೆರಳುತ್ತಿದ್ದಾರೆ. ಇದೇ ವೇಳೆ, ಪಾಕಿಸ್ತಾನ ನೌಕಾಪಡೆಯು ಶನಿವಾರ ಉತ್ತರ ಅರಬ್ಬೀ ಸಮುದ್ರದಲ್ಲಿ ನೌಕೆ ನಿಗ್ರಹ ಕ್ಷಿಪಣಿಯೊಂದರ ಪರೀಕ್ಷೆ ನಡೆಸಿದೆ. ಸಮುದ್ರ ಗಡಿಗಳು ಮತ್ತು ದೇಶದ ಹಿತಾಸಕ್ತಿಯನ್ನು ರಕ್ಷಿಸುವ ಉದ್ದೇಶ ದಿಂದ ಈ ಪರೀಕ್ಷೆ ನಡೆಸಲಾಗಿದೆ ಎಂದಿದೆ ಪಾಕ್‌.

ಟಾಪ್ ನ್ಯೂಸ್

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.