![court](https://www.udayavani.com/wp-content/uploads/2024/07/court-7-415x231.jpg)
ನಾವು ಹೇಗೆ ವಿಶ್ವ ಆರ್ಥಿಕತೆ ಪಟ್ಟಿಯಲ್ಲಿ 5 ನೇ ಸ್ಥಾನ ಪಡೆದೆವು?: ಶಾ ಪ್ರಶ್ನೆ
ಗಡಿ ಭದ್ರತೆಗೆ ಸಂಬಂಧಿಸಿದ ವಿವಿಧ ವಿಷಯಗಳ ಪರಿಶೀಲನೆ
Team Udayavani, Sep 24, 2022, 7:45 PM IST
![1-sadsdsad](https://www.udayavani.com/wp-content/uploads/2022/09/1-sadsdsad-3-620x389.jpg)
ಕಿಶನ್ಗಂಜ್ : 2014 ರಲ್ಲಿ, ನಮ್ಮ ದೇಶವು ವಿಶ್ವ ಆರ್ಥಿಕತೆಯ ಪಟ್ಟಿಯಲ್ಲಿ 11 ನೇ ಸ್ಥಾನದಲ್ಲಿತ್ತು, ಇಂದು ನಾವು ಯುಕೆ ಅನ್ನು ಹಿಂದಿಕ್ಕಿ 5 ನೇ ಸ್ಥಾನವನ್ನು ಪಡೆದುಕೊಂಡಿದ್ದೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಉಲ್ಲೇಖಿಸಿದ್ದಾರೆ.
ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಶಾ, ”75 ವರ್ಷಗಳಲ್ಲಿ ನಾವು ಮುಂದೆ ಸಾಗಿದ್ದೇವೆ ಮತ್ತು ನಮ್ಮ ಸ್ವಾತಂತ್ರ್ಯವನ್ನು ಅರ್ಥಪೂರ್ಣಗೊಳಿಸಿದ್ದೇವೆ ಎಂಬುದನ್ನು ನಾವು ಜಗತ್ತಿಗೆ ಸಾರಿದ್ದೇವೆ” ಎಂದರು.
ಇದನ್ನೂ ಓದಿ : ಇಬ್ಬರು ಸಿಬ್ಬಂದಿಯ ಸಮಯಪ್ರಜ್ಞೆಯಿಂದ ರೈಲು ಪ್ರಯಾಣಿಕನ ಜೀವ ಉಳಿಯಿತು : ವಿಡಿಯೋ ವೈರಲ್
ಕಿಶನ್ಗಂಜ್ನಲ್ಲಿ, ಬಿಎಸ್ಎಫ್, ಎಸ್ಎಸ್ಬಿ ಮತ್ತು ಐಟಿಬಿಪಿಯ ಡಿಜಿಗಳು ಮತ್ತು ಹಿರಿಯ ಅಧಿಕಾರಿಗಳೊಂದಿಗಿನ ಗಡಿ ಭದ್ರತೆಗೆ ಸಂಬಂಧಿಸಿದ ವಿವಿಧ ವಿಷಯಗಳನ್ನು ಪರಿಶೀಲನೆ ನಡೆಸಿದರು. ನೇಪಾಳ ಗಡಿಯ ಫತೇಪುರ್ ಗೆ ಭೇಟಿ ನೀಡಿದ ನಂತರ, ವಿವಿಧ ಚಟುವಟಿಕೆಗಳನ್ನು ಪರಿಶೀಲಿಸಿದರು.
ಗಡಿ ಪ್ರದೇಶಗಳ ಅಭಿವೃದ್ಧಿ ಜತೆಗೆ ಅಲ್ಲಿನ ಭದ್ರತೆ ನಮ್ಮ ಆದ್ಯತೆಯಾಗಿದ್ದು, ಇದಕ್ಕಾಗಿ ಆಧುನಿಕ ತಂತ್ರಜ್ಞಾನ ಹಾಗೂ ಭದ್ರತಾ ಪಡೆಗಳಿಗೆ ಸಾಧ್ಯವಿರುವ ಎಲ್ಲ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಶಾ ಹೇಳಿದ್ದಾರೆ.
ಮೋದಿ ಪ್ರಧಾನಿಯಾದ ನಂತರ, ಗಡಿಯಲ್ಲಿ ಆಧುನಿಕ ಮೂಲಸೌಕರ್ಯವನ್ನು ಉತ್ತೇಜಿಸುವ ಮೂಲಕ ಗಡಿಗಳನ್ನು ರಕ್ಷಿಸುವ ತಮ್ಮ ಸಂಕಲ್ಪವನ್ನು ತೋರಿಸಿದ್ದಾರೆ. 2008-2014 ರ ವೇಳೆಗೆ ಕೇವಲ 23700 ರೂ ಇದ್ದ ಗಡಿ ಮೂಲಸೌಕರ್ಯದ ಬಜೆಟ್ ಅನ್ನು 2014-2020ರಲ್ಲಿ 44600 ಕೋಟಿ ರೂ.ಗೆ ಹೆಚ್ಚಿಸಲಾಯಿತು ಎಂದರು.
ಸಶಸ್ತ್ರ ಸೀಮಾ ಬಲದ ಕೆಚ್ಚೆದೆಯ ಜವಾನರು ತಮ್ಮ ಧೈರ್ಯ ಮತ್ತು ಶಕ್ತಿಯಿಂದ ಸುದೀರ್ಘ ಹೋರಾಟದ ಮೂಲಕ ದೇಶದ ಪೂರ್ವ ಪ್ರದೇಶಗಳಿಂದ ಎಡಪಂಥೀಯ ಉಗ್ರವಾದವನ್ನು ಬೇರುಸಹಿತ ಕಿತ್ತೊಗೆಯಲು ಅನುಪಮ ಕೊಡುಗೆ ನೀಡಿದ್ದಾರೆ. ಸಶಸ್ತ್ರ ಪಡೆಗಳ ತ್ಯಾಗ, ಸಮರ್ಪಣೆ ಮತ್ತು ತ್ಯಾಗವನ್ನು ರಾಷ್ಟ್ರ ಎಂದಿಗೂ ಮರೆಯುವುದಿಲ್ಲ ಎಂದರು.
ಶಾ ಅವರು ಕಿಶನ್ಗಂಜ್ನಲ್ಲಿ ಪ್ರಸಿದ್ಧ ಬುಧಿ ಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥಿಸಿದರು. ರಾಜ್ಯ ಕೋರ್ ಕಮಿಟಿಯೊಂದಿಗೆ ಸಭೆ ನಡೆಸಿದರು.
ಟಾಪ್ ನ್ಯೂಸ್
![court](https://www.udayavani.com/wp-content/uploads/2024/07/court-7-415x231.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
![robbers](https://www.udayavani.com/wp-content/uploads/2024/07/robbers-1-150x89.jpg)
Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!
![1-tatoo](https://www.udayavani.com/wp-content/uploads/2024/07/1-tatoo-150x84.jpg)
Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!
![1-wewqewq](https://www.udayavani.com/wp-content/uploads/2024/07/1-wewqewq-2-150x98.jpg)
Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?
![rahul-Gandhi-Car](https://www.udayavani.com/wp-content/uploads/2024/07/rahul-Gandhi-Car-150x111.jpg)
Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್: ರಾಹುಲ್ ಆರೋಪ
MUST WATCH
ಹೊಸ ಸೇರ್ಪಡೆ
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
![robbers](https://www.udayavani.com/wp-content/uploads/2024/07/robbers-1-150x89.jpg)
Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!
![Kohli IPL 2024](https://www.udayavani.com/wp-content/uploads/2024/07/Kohli-IPL-2024-150x103.jpg)
Champions Trophy; ಕೊಹ್ಲಿ ಪಾಕ್ನಲ್ಲಿ ಆಡಲಿ: ಯೂನಿಸ್ ಖಾನ್
![1-tatoo](https://www.udayavani.com/wp-content/uploads/2024/07/1-tatoo-150x84.jpg)
Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!
![1-wewqewq](https://www.udayavani.com/wp-content/uploads/2024/07/1-wewqewq-2-150x98.jpg)
Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.