ನಾವು ಹೇಗೆ ವಿಶ್ವ ಆರ್ಥಿಕತೆ ಪಟ್ಟಿಯಲ್ಲಿ 5 ನೇ ಸ್ಥಾನ ಪಡೆದೆವು?: ಶಾ ಪ್ರಶ್ನೆ
ಗಡಿ ಭದ್ರತೆಗೆ ಸಂಬಂಧಿಸಿದ ವಿವಿಧ ವಿಷಯಗಳ ಪರಿಶೀಲನೆ
Team Udayavani, Sep 24, 2022, 7:45 PM IST
ಕಿಶನ್ಗಂಜ್ : 2014 ರಲ್ಲಿ, ನಮ್ಮ ದೇಶವು ವಿಶ್ವ ಆರ್ಥಿಕತೆಯ ಪಟ್ಟಿಯಲ್ಲಿ 11 ನೇ ಸ್ಥಾನದಲ್ಲಿತ್ತು, ಇಂದು ನಾವು ಯುಕೆ ಅನ್ನು ಹಿಂದಿಕ್ಕಿ 5 ನೇ ಸ್ಥಾನವನ್ನು ಪಡೆದುಕೊಂಡಿದ್ದೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಉಲ್ಲೇಖಿಸಿದ್ದಾರೆ.
ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಶಾ, ”75 ವರ್ಷಗಳಲ್ಲಿ ನಾವು ಮುಂದೆ ಸಾಗಿದ್ದೇವೆ ಮತ್ತು ನಮ್ಮ ಸ್ವಾತಂತ್ರ್ಯವನ್ನು ಅರ್ಥಪೂರ್ಣಗೊಳಿಸಿದ್ದೇವೆ ಎಂಬುದನ್ನು ನಾವು ಜಗತ್ತಿಗೆ ಸಾರಿದ್ದೇವೆ” ಎಂದರು.
ಇದನ್ನೂ ಓದಿ : ಇಬ್ಬರು ಸಿಬ್ಬಂದಿಯ ಸಮಯಪ್ರಜ್ಞೆಯಿಂದ ರೈಲು ಪ್ರಯಾಣಿಕನ ಜೀವ ಉಳಿಯಿತು : ವಿಡಿಯೋ ವೈರಲ್
ಕಿಶನ್ಗಂಜ್ನಲ್ಲಿ, ಬಿಎಸ್ಎಫ್, ಎಸ್ಎಸ್ಬಿ ಮತ್ತು ಐಟಿಬಿಪಿಯ ಡಿಜಿಗಳು ಮತ್ತು ಹಿರಿಯ ಅಧಿಕಾರಿಗಳೊಂದಿಗಿನ ಗಡಿ ಭದ್ರತೆಗೆ ಸಂಬಂಧಿಸಿದ ವಿವಿಧ ವಿಷಯಗಳನ್ನು ಪರಿಶೀಲನೆ ನಡೆಸಿದರು. ನೇಪಾಳ ಗಡಿಯ ಫತೇಪುರ್ ಗೆ ಭೇಟಿ ನೀಡಿದ ನಂತರ, ವಿವಿಧ ಚಟುವಟಿಕೆಗಳನ್ನು ಪರಿಶೀಲಿಸಿದರು.
ಗಡಿ ಪ್ರದೇಶಗಳ ಅಭಿವೃದ್ಧಿ ಜತೆಗೆ ಅಲ್ಲಿನ ಭದ್ರತೆ ನಮ್ಮ ಆದ್ಯತೆಯಾಗಿದ್ದು, ಇದಕ್ಕಾಗಿ ಆಧುನಿಕ ತಂತ್ರಜ್ಞಾನ ಹಾಗೂ ಭದ್ರತಾ ಪಡೆಗಳಿಗೆ ಸಾಧ್ಯವಿರುವ ಎಲ್ಲ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಶಾ ಹೇಳಿದ್ದಾರೆ.
ಮೋದಿ ಪ್ರಧಾನಿಯಾದ ನಂತರ, ಗಡಿಯಲ್ಲಿ ಆಧುನಿಕ ಮೂಲಸೌಕರ್ಯವನ್ನು ಉತ್ತೇಜಿಸುವ ಮೂಲಕ ಗಡಿಗಳನ್ನು ರಕ್ಷಿಸುವ ತಮ್ಮ ಸಂಕಲ್ಪವನ್ನು ತೋರಿಸಿದ್ದಾರೆ. 2008-2014 ರ ವೇಳೆಗೆ ಕೇವಲ 23700 ರೂ ಇದ್ದ ಗಡಿ ಮೂಲಸೌಕರ್ಯದ ಬಜೆಟ್ ಅನ್ನು 2014-2020ರಲ್ಲಿ 44600 ಕೋಟಿ ರೂ.ಗೆ ಹೆಚ್ಚಿಸಲಾಯಿತು ಎಂದರು.
ಸಶಸ್ತ್ರ ಸೀಮಾ ಬಲದ ಕೆಚ್ಚೆದೆಯ ಜವಾನರು ತಮ್ಮ ಧೈರ್ಯ ಮತ್ತು ಶಕ್ತಿಯಿಂದ ಸುದೀರ್ಘ ಹೋರಾಟದ ಮೂಲಕ ದೇಶದ ಪೂರ್ವ ಪ್ರದೇಶಗಳಿಂದ ಎಡಪಂಥೀಯ ಉಗ್ರವಾದವನ್ನು ಬೇರುಸಹಿತ ಕಿತ್ತೊಗೆಯಲು ಅನುಪಮ ಕೊಡುಗೆ ನೀಡಿದ್ದಾರೆ. ಸಶಸ್ತ್ರ ಪಡೆಗಳ ತ್ಯಾಗ, ಸಮರ್ಪಣೆ ಮತ್ತು ತ್ಯಾಗವನ್ನು ರಾಷ್ಟ್ರ ಎಂದಿಗೂ ಮರೆಯುವುದಿಲ್ಲ ಎಂದರು.
ಶಾ ಅವರು ಕಿಶನ್ಗಂಜ್ನಲ್ಲಿ ಪ್ರಸಿದ್ಧ ಬುಧಿ ಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥಿಸಿದರು. ರಾಜ್ಯ ಕೋರ್ ಕಮಿಟಿಯೊಂದಿಗೆ ಸಭೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ