ಕೊರೊನಾ ಭೀತಿಯ ನಡುವೆಯೂ ಮುಂದುವರಿದ ಶಹೀನ್ ಭಾಗ್ ಸಿಎಎ ವಿರೋಧಿ ಪ್ರತಿಭಟನೆ
Team Udayavani, Mar 14, 2020, 10:17 AM IST
ಹೊಸದಿಲ್ಲಿ: ದೇಶದಲ್ಲಿ ಕೊರೊನಾ ವೈರಸ್ ತೀವ್ರವಾಗಿ ಕಾಡುತ್ತಿದ್ದು, ಜನಜೀವನ ಬಹುತೇಕ ಸಂಕಷ್ಟಕ್ಕೆ ಒಳಗಾಗಿದೆ. ಕೇರಳ, ಕೇರಳ, ದಿಲ್ಲಿ ಸೇರಿದಂತೆ ಬಹುತೇಕ ರಾಜ್ಯಗಳು ಲಾಕ್ ಡೌನ್ ಪರಿಸ್ಥಿತಿಗೆ ತಲುಪಿದೆ. ಇಷ್ಟೆಲ್ಲದರ ನಡುವೆಯೂ ಶಹೀನ್ ಭಾಗ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಮುಂದುವರಿದಿದೆ.
ಕಳೆದ ಮೂರು ತಿಂಗಳಿಂದ ಶಹೀನ್ ಭಾಗ್ ನಲ್ಲಿ ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನೆ ನಡೆಯುತ್ತಿದೆ. ಕೊರೊನಾ ವೈರಸ್ ಭೀತಿಯ ನಡುವೆಯೂ ಇದು ಮುಂದುವರಿದಿದೆ.
ದಿಲ್ಲಿಯಲ್ಲಿ ಮಾರ್ಚ್ 31ರವರೆಗೆ ಬಂದ್ ಮಾಡಲು ರಾಜ್ಯ ಸರಕಾರ ಆದೇಶಿಸಿದೆ. 200 ಜನರಿಗಿಂತ ಹೆಚ್ಚು ಜನರು ಸೇರುವ ಯಾವುದೇ ಕಾರ್ಯಕ್ರಮವನ್ನು ನಡೆಸುವಂತಿಲ್ಲ ಎಂದು ಸರಕಾರ ತಿಳಿಸಿದೆ. ಶಾಲೆಗಳು, ಚಿತ್ರ ಮಂದಿರಗಳು, ಸೆಮಿನಾರ್ ಗಳು, ಕ್ರೀಡಾಕೂಟಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ. ಆದರೆ ಶಹೀನ್ ಭಾಗ್ ಪ್ರತಿಭಟನೆ ಮುಂದುವರಿದಿದೆ.
ದಿಲ್ಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಈ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸುತ್ತಾ, ಪ್ರತಿಭಟನಾಕಾರರನ್ನು ಅಲ್ಲಿಂದ ತೆರವುಗೊಳಿಸುವ ಕುರಿತು ಕೇಂದ್ರ ಸರಕಾರ ಕ್ರಮ ಕೈಗೊಳ್ಳಬೇಕು. ನಾವು ಬಹಳಷ್ಟು ಕ್ರಮ ಕೈಗೊಂಡಿದ್ದೇವೆ. ಆದರೂ ಜನರು ಸೇರುತ್ತಾರೆ ಎಂದರೆ ಸಭೆ ಸೇರದಂತೆ ನಾವು ಮನವಿ ಮಾಡುತ್ತೇವೆ. ಸಾರ್ವಜನಿಕರ ಆರೋಗ್ಯ ಬಹುಮುಖ್ಯ ಎಂದಿದ್ದಾರೆ.
ದೇಶದಲ್ಲಿ ಇದುವರಗೆ 83 ಜನರಿಗೆ ಕೊರೊನಾ ಸೋಂಕು ದೃಢವಾಗಿದ್ದು, ಕರ್ನಾಟಕ, ಉತ್ತರಪ್ರದೇಶ, ದಿಲ್ಲಿ, ಬಿಹಾರ, ಒಡಿಶಾ, ಮಧ್ಯಪ್ರದೇಶ, ಪಂಜಾಬ್, ಮಹಾರಾಷ್ಟ್ರ, ಜಾರ್ಖಂಡ್, ಹರ್ಯಾಣ, ಜಮ್ಮು ಮತ್ತು ಕಾಶ್ಮೀರ, ಛತ್ತೀಸ್ ಗಡ ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ಶಾಲಾ ಕಾಲೇಜುಗಳು, ಸಾರ್ವಜನಿಕ ಸಮಾರಂಭಗಳಿಗೆ ನಿರ್ಬಂಧ ಹೇರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?