ಪರ್ವತ ಅಲುಗಾಡಿಸಬಹುದು; ಚೀನ ಸೇನೆಯನ್ನಲ್ಲ: ಭಾರತಕ್ಕೆ ಬೀಜಿಂಗ್‌


Team Udayavani, Jul 24, 2017, 12:11 PM IST

India-China Flag-700.jpg

ಬೀಜಿಂಗ್‌ : ‘ಪರ್ವತವನ್ನು ಅಲುಗಾಡಿಸುವುದು ಸುಲಭ; ಆದರೆ ಚೀನ ಸೇನೆಯನ್ನು ಅಲುಗಾಡಿಸುವುದು ಬಹಳ ಕಷ್ಟ’ ಎಂಬ ಖಡಕ್‌ ಸಂದೇಶವನ್ನು ಚೀನ, ಭಾರತಕ್ಕೆ ರವಾನಿಸಿದೆ. 

ಕಳೆದ ಎರಡು ತಿಂಗಳಲ್ಲಿ ಸಿಕ್ಕಿಂ ಗಡಿಯಲ್ಲಿನ ತ್ರಿರಾಷ್ಟ್ರ  ಚೌಕದಲ್ಲಿ ಭಾರತ ಮತ್ತು ಚೀನ ಸೇನೆಯ ಮುಖಾಮುಖೀ ಇನ್ನೂ ಪಟ್ಟಾಗಿ ಮುಂದುವರಿದಿದೆ. ಇದೀಗ ತಾಜಾ ಎಚ್ಚರಿಕೆ ಎಂಬಂತೆ ಚೀನ, “ಡೋಕ್‌ಲಾಂ ಗಡಿಯಿಂದ ಭಾರತ ತನ್ನ ಸೇನೆಯನ್ನು  ಈ ಕೂಡಲೇ ಹಿಂದೆಗೆಯಬೇಕು, ಇಲ್ಲವೇ ಪರಿಣಾಮವನ್ನು ಎದುರಿಸಬೇಕು’ ಎಂದು ಕಟು ಮಾತುಗಳಲ್ಲಿ ಎಚ್ಚರಿಕೆ ನೀಡಿದೆ. 

“ಪರ್ವತವನ್ನು ಅಲುಗಾಡಿಸುವುದು ಸುಲಭ; ಆದರೆ ಚೀನದ ಪೀಪಲ್ಸ್‌ ಲಿಬರೇಶನ್‌ ಆರ್ಮಿಯನ್ನು ಅಲುಗಾಡಿಸುವುದು ಅತ್ಯಂತ ಕಠಿನ’ ಎಂದು ಚೀನ ಸಚಿವಾಲಯದ ವಕ್ತಾರ ವು ಕಿಯಾನ್‌ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ಚೀನದ ಭೂಭಾಗ ಮತ್ತು ಸಾರ್ವಭೌಮತೆಯನ್ನು ರಕ್ಷಿಸುವ ಪಿಎಲ್‌ಎ ಸಾಮರ್ಥ್ಯವನ್ನು ಕಾಲಕಾಲಕ್ಕೆ ಬಲಪಡಿಸುತ್ತಲೇ ಬರಲಾಗಿದೆ ಎಂದವರು ನೆನಪಿಸಿಕೊಟ್ಟಿದ್ದಾರೆ. 

“ಭಾರತ ಡೋಕ್‌ಲಾಂ ನಿಂದ ತನ್ನ ಸೇನೆಯನ್ನು ಹಿಂಪಡೆಯಬೇಕು; ಇಲ್ಲದಿದ್ದರೆ ಯುದ್ಧಕ್ಕೆ ತಯಾರಾಗಬೇಕು ಮತ್ತು ಆ ಯುದ್ಧದಲ್ಲಿ  ಭಾರತ ತನ್ನದೇ ಭೂಭಾಗವನ್ನು ಕಳೆದುಕೊಳ್ಳಬೇಕಾಗುವುದು’ ಎಂದು ಚೀನದ ಸರಕಾರಿ ಒಡೆತನದ ದೈನಿಕ ಕಳೆದ ಜೂನ್‌ 21ರಂದು ಭಾರತಕ್ಕೆ ಎಚ್ಚರಿಕೆ ನೀಡಿದ ಬಳಿಕ ಇದೀಗ ಚೀನದ ಸಚಿವಾಲಯದ ವಕ್ತಾರನಿಂದ ಈ ಹೇಳಿಕೆ ಬಂದಿರುವುದು ಗಮನಾರ್ಹವಾಗಿದೆ. 

ಭಾರತ – ಭೂತಾನ್‌ – ಚೀನ ಟ್ರೈ ನೇಶನ್‌ ಜಂಕ್ಷನ್‌ನ ಡೋಕ್‌ಲಾಂ ನಲ್ಲಿ  ಭಾರತ ಮತ್ತು ಭೂತಾನ್‌ನ ಭದ್ರತೆಗೆ ಅಪಾಯಕಾರಿ ಎಂಬ ರೀತಿಯಲ್ಲಿ ರಸ್ತೆ ನಿರ್ಮಾಣದಲ್ಲಿ ತೊಡಗಿದ್ದನ್ನು ಭಾರತ ಸೇನೆ ನಿಲ್ಲಿಸಿರುವುದರಿಂದ ಡೋಕ್‌ಲಾಂ ನಲ್ಲಿ ಭಾರತ – ಚೀನ ಸೇನೆ ಕಳೆದ ಎರಡು ತಿಂಗಳಿಂದ ಮುಖಾಮುಖೀಯಾಗಿದ್ದು ಸಮರ ಉದ್ವಿಗ್ನತೆ ಸೃಷ್ಟಿಯಾಗಿದೆ.

ವಿವಾದಾತ್ಮಕ ಡೋಕ್‌ಲಾಂ ಪ್ರದೇಶವು ತನಗೆ ಸೇರಿರುವ ಡೋಂಗ್‌ಲಾಂಗ್‌ ಪ್ರದೇಶದ ಭಾಗವಾಗಿದೆ ಎಂದು ಚೀನ ಹೇಳಿಕೊಂಡಿದೆ. 

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.