ಕಾಂಗ್ರೆಸ್ ಅಸ್ತ್ರ: “ಶಕ್ತಿ’, “ವಿದ್ಯಾ’
Team Udayavani, Nov 17, 2018, 7:46 AM IST
ಹೊಸದಿಲ್ಲಿ: ಈಗಾಗಲೇ ಪಂಚರಾಜ್ಯಗಳಲ್ಲಿ ಜಾರಿಗೆ ಬಂದಿರುವ ಶಕ್ತಿ ಹಾಗೂ ವಿದ್ಯೆ ಎಂಬ ಎರಡು ವಿಚಾರಗಳು ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಮ್ಮ ಚುನಾವಣಾ ಅಸ್ತ್ರಗಳಾಗಿರಲಿವೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಆಧುನಿಕ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಬೂತ್ ಮಟ್ಟದಿಂದ ಕಾಂಗ್ರೆಸ್ ಪಕ್ಷವನ್ನು ಪುನರ್ ಸಂಘಟಿಸಲಾಗುತ್ತದೆ ಎಂದು ರಾಹುಲ್ ಹೇಳಿದ್ದಾರೆ.
ಏನಿದು ಶಕ್ತಿ-ವಿದ್ಯಾ?: ಆನ್ಲೈನ್ ಮೂಲಕ ಕಾಂಗ್ರೆಸ್ಗೆ ನೂತನ ಕಾರ್ಯಕರ್ತರನ್ನು ಬೂತ್ಮಟ್ಟದಲ್ಲಿ ನೇಮಿಸಿಕೊಳ್ಳುವ ಪ್ರಕ್ರಿಯೆಗೆ “ಶಕ್ತಿ’ ಎಂದು ಹೆಸರಿಡಲಾಗಿದ್ದು, ಹೊಸದಾಗಿ ನೇಮಕವಾದ ಕಾರ್ಯಕರ್ತರನ್ನು ಸೂಕ್ತ ತರಬೇತಿ ಮೂಲಕ ಹುರಿಗೊಳಿಸುವ ಸಾಫ್ಟ್ವೇರ್ ಆಧಾರಿತ ತರಬೇತಿ ಪ್ರಕ್ರಿಯೆಗೆ “ವಿದ್ಯಾ’ ಎಂದು ಹೆಸರಿಡಲಾಗಿದೆ.
ಸದ್ಯಕ್ಕೆ ನಡೆಯುತ್ತಿರುವ ಪಂಚರಾಜ್ಯಗಳ ಚುನಾವಣೆಗಳಲ್ಲಿ ಇದು ಪ್ರಾಯೋಗಿಕವಾಗಿ ಅನುಷ್ಠಾನಕ್ಕೆ ಬಂದಿವೆ. ಆ ರಾಜ್ಯಗಳಲ್ಲಿ ನಡೆಯುವ ರ್ಯಾಲಿಗಳಲ್ಲಿ ರಾಹುಲ್ ಗಾಂಧಿ ಮಾಡುವ ಭಾಷಣವು ಬೂತ್ಮಟ್ಟದ ಪ್ರತಿಯೊಬ್ಬ ಕಾರ್ಯಕರ್ತನಿಗೂ ತಲುಪುವ ವ್ಯವಸ್ಥೆ ಮಾಡಲಾಗಿದೆ. ರಾಹುಲ್ ಗಾಂಧಿ ಅವರು ಯಾವುದೇ ಬೂತ್ನ ಕಾರ್ಯಕರ್ತರು, ಕಾರ್ಯಕ್ರಮಗಳು ಸೇರಿದಂತೆ ಇತರೆ ಮಾಹಿತಿಗಳನ್ನು ತಮ್ಮ ಮೊಬೈಲ್ ಫೋನಿನ “ವಿದ್ಯಾ’ ಮೂಲಕ ಪಡೆಯಬಹುದಾಗಿದೆ. 1.70 ಲಕ್ಷ ಬೂತ್ಗಳನ್ನು “ವಿದ್ಯಾ’ ತಲುಪಿದೆ. ಒಟ್ಟು 9.27 ಲಕ್ಷ ಬೂತ್ ಮಟ್ಟದ ಪ್ರಾಂತ್ಯಗಳು ಈ ದೇಶದಲ್ಲಿದ್ದು 2019ರ ಮಹಾ ಚುನಾವಣೆಗೊಳಗಾಗಿ ಆ ಎಲ್ಲಾ ಪ್ರಾಂತ್ಯಗಳಿಗೂ ತಲುಪುವ ಗುರಿ ಕಾಂಗ್ರೆಸ್ಸಿಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
MUST WATCH
ಹೊಸ ಸೇರ್ಪಡೆ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್